ಬ್ರೇಕಿಂಗ್ ನ್ಯೂಸ್
07-05-21 11:30 am Reena TK, BoldSky Kannada ಡಾಕ್ಟರ್ಸ್ ನೋಟ್
18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಲಭ್ಯವಾಗಿರುವುದರಿಂದ ದೇಶದ ಶೇ. 70 ರಷ್ಟು ಜನರಿಗೆ ವ್ಯಾಕ್ಸಿನ್ ಲಭಿಸುವಂತಾಗುವುದು. ಈ ಲಸಿಕೆ ಅರ್ಹರಾಗಿರುವ ಪ್ರತಿಯೊಬ್ಬರು ತೆಗೆದುಕೊಂಡರೆ ಈಗ ಕೊರೊನಾ ಆರ್ಭಟಿಸುತ್ತಿದ್ದರೂ ಕೆಲವೇ ದಿನದಲ್ಲಿ ಸೋಂಕು ಕಡಿಮೆಯಾಗುವ ಎಲ್ಲಾ ಸಾದ್ಯತೆ ಇದೆ.
ಕೊರೊನಾ ವ್ಯಾಕ್ಸಿನ್ ಅನ್ನು ಎರಡು ಡೋಸ್ ಆಗಿ ತೆಗೆಯಬೇಕು. ಒಂದು ಡೋಸ್ ಪಡೆದ ಬಳಿಕ 4 ವಾರಗಳ ನಂತರ ಮತ್ತೊಂದು ಡೋಸ್ ತೆಗೆದುಕೊಳ್ಳಬೇಕು. ಕೋವಿಶೀಲ್ಡ್ ತೆಗೆದುಕೊಂಡಿದ್ದರೆ ಮೊದಲ ಡೋಸ್ ತೆಗೆದುಕೊಂಡ 6-8 ವಾರಗಳಲ್ಲಿ ಎರಡನೇ ಡೋಸ್ ತೆಗೆದುಕೊಳ್ಳಬೇಕು. ಕೊರೊನಾವೈರಸ್ 2ನೇ ಅಲೆ ತುಂಬಾ ವೇಗವಾಗಿ ಹರಡುತ್ತಿರುವುದರಿಂದ ಮೊದಲ ಡೋಸ್ ಪಡೆದ ಕೆಲವರಲ್ಲಿಯೂ ಸೋಂಕು ಕಂಡು ಬರುತ್ತಿದೆ. ಕೊವಾಕ್ಸಿನ್ ಹಾಗೂ ಕೋವಿಶೀಲ್ಡ್ ಕೊರೊನಾವ ವಿರುದ್ಧ ಸಮರ್ಥವಾಗಿ ಹೋರಾಡುವ ಲಸಿಕೆಗಳು ಆಗಿದ್ದರೂ, ಈ ಲಸಿಕೆ ಪಡೆದುಕೊಂಡರೆ ಸೋಂಕು ಬರುವುದನ್ನು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಿಲ್ಲ.

ಕೊರೊನಾ ಲಸಿಕೆ ಪಡೆದ ಬಳಿಕ ಕೊರೊನಾ ಬಂದ್ರೆ?
ಕೊರೊನಾ ಲಸಿಕೆ ಎರಡು ಡೋಸ್ ಪಡೆದವರಲ್ಲಿ ಶೇ.4ರಷ್ಟು ಜನರಲ್ಲಿ ಸೋಂಕು ಬಂದಿದೆ. ಆದರೆ ಕೋವಿಡ್ 19 ಲಸಿಕೆ ಪಡೆದವರಲ್ಲಿ ಹಾಗೂ ಪಡೆಯದವರಲ್ಲಿ ಇರುವ ವ್ಯತ್ಯಾಸವೇನೆಂದರೆ ಈ ಲಸಿಕೆ ಪಡೆದುಕೊಂಡವರಲ್ಲಿ ರೋಗ ಲಕ್ಷಣಗಳು ಗಂಭೀರವಾಗುವುದಿಲ್ಲ, ಅಲ್ಲದೆ ಬೇಗನೆ ಚೇತರಿಸಿಕೊಳ್ಳುತ್ತಾರೆ. ಆದ್ದರಿಂದ ಪ್ರತಿಯೊಬ್ಬರು ಲಸಿಕೆ ಪಡೆದುಕೊಳ್ಳಬೇಕು.

ಕೋವಿಡ್ 19 ಪಾಸಿಟಿವ್ ಬಂದವರು ಲಸಿಕೆ ಪಡೆಯಬಹುದೇ?
ಕೋವಿಡ್ 19 ಪಾಸಿಟಿವ್ ಬಂದಾಗ ಕೊರೊನಾ ವ್ಯಾಕ್ಸಿನ್ ತೆಗೆದುಕೊಳ್ಳುವಂತಿಲ್ಲ. ಕೊರೊನಾದಿಂದ ಚೇತರಿಸಿದ 4-8 ವಾರಗಳ ಬಳಿಕ ತಿನ್ನಬೇಕು.

ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರು ಲಸಿಕೆ ತೆಗೆದುಕೊಂಡರೆ?
ಕೆಲವರಿಗೆ ಕೋವಿಡ್ 19 ಬಂದರೂ ಯಾವುದೇ ಲಕ್ಷಣಗಳಿರುವುದಿಲ್ಲ, ಹಾಗಾಗಿ ಅವರಿಗೆ ಸೋಂಕು ಬಂದಿರುವುದು ಗೊತ್ತಿರುವುದಿಲ್ಲ , ಅಂತ ಸಮಯದಲ್ಲಿ ಕೋವಿಡ್ 19 ಲಸಿಕೆ ತೆಗೆದುಕೊಂಡರೆ ಭಯ ಪಡಬೇಕಾಗಿಲ್ಲ, ಲಸಿಕೆಯೂ ನಿಮ್ಮ ಮೇಲೆ ಯಾವುದೇ ಕೆಟ್ಟ ಪರಿಣಾಮ ಬೀರುವುದಿಲ್ಲ.

ಕೋವಿಡ್ 19 ಬಂದಾಗ ಎರಡನೇ ಡೋಸ್ ಯಾವಾಗ ಪಡೆಯಬೇಕು?
ಮೊದಲ ಡೋಸ್ ಪಡೆದ ಬಳಿಕ ಕೋವಿಡ್ 19 ಬಂದಾಗ ಎರಡನೇ ಡೋಸ್ ಯಾವಾಗ ಪಡೆಯಬೇಕು? ಎಂಬ ಪ್ರಶ್ನೆ ಹಲವರಲ್ಲಿ ಇರುತ್ತದೆ. ಕೊರೊನಾ ವ್ಯಾಕ್ಸಿನ್ ಮೊದಲ ಡೋಸ್ ಪಡೆದಿರುವುದರಿಂದ ಕೊರೊನಾ ಸೋಂಕಿನಿಂದ ಬೇಗನೆ ಚೇತರಿಸಿಕೊಳ್ಳಬಹುದು. ಕೊರೊನಾದಿಂದ ಚೇತರಿಸಿದ ಬಳಿಕ 4 ವಾರಗಳನ್ನು ಕಳೆದ ಮೇಲೆ ಲಸಿಕೆ ಪಡೆಯಿರಿ.
(Kannada Copy of Boldsky Kannada)
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm