ಬ್ರೇಕಿಂಗ್ ನ್ಯೂಸ್
07-05-21 11:30 am Reena TK, BoldSky Kannada ಡಾಕ್ಟರ್ಸ್ ನೋಟ್
18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಲಭ್ಯವಾಗಿರುವುದರಿಂದ ದೇಶದ ಶೇ. 70 ರಷ್ಟು ಜನರಿಗೆ ವ್ಯಾಕ್ಸಿನ್ ಲಭಿಸುವಂತಾಗುವುದು. ಈ ಲಸಿಕೆ ಅರ್ಹರಾಗಿರುವ ಪ್ರತಿಯೊಬ್ಬರು ತೆಗೆದುಕೊಂಡರೆ ಈಗ ಕೊರೊನಾ ಆರ್ಭಟಿಸುತ್ತಿದ್ದರೂ ಕೆಲವೇ ದಿನದಲ್ಲಿ ಸೋಂಕು ಕಡಿಮೆಯಾಗುವ ಎಲ್ಲಾ ಸಾದ್ಯತೆ ಇದೆ.
ಕೊರೊನಾ ವ್ಯಾಕ್ಸಿನ್ ಅನ್ನು ಎರಡು ಡೋಸ್ ಆಗಿ ತೆಗೆಯಬೇಕು. ಒಂದು ಡೋಸ್ ಪಡೆದ ಬಳಿಕ 4 ವಾರಗಳ ನಂತರ ಮತ್ತೊಂದು ಡೋಸ್ ತೆಗೆದುಕೊಳ್ಳಬೇಕು. ಕೋವಿಶೀಲ್ಡ್ ತೆಗೆದುಕೊಂಡಿದ್ದರೆ ಮೊದಲ ಡೋಸ್ ತೆಗೆದುಕೊಂಡ 6-8 ವಾರಗಳಲ್ಲಿ ಎರಡನೇ ಡೋಸ್ ತೆಗೆದುಕೊಳ್ಳಬೇಕು. ಕೊರೊನಾವೈರಸ್ 2ನೇ ಅಲೆ ತುಂಬಾ ವೇಗವಾಗಿ ಹರಡುತ್ತಿರುವುದರಿಂದ ಮೊದಲ ಡೋಸ್ ಪಡೆದ ಕೆಲವರಲ್ಲಿಯೂ ಸೋಂಕು ಕಂಡು ಬರುತ್ತಿದೆ. ಕೊವಾಕ್ಸಿನ್ ಹಾಗೂ ಕೋವಿಶೀಲ್ಡ್ ಕೊರೊನಾವ ವಿರುದ್ಧ ಸಮರ್ಥವಾಗಿ ಹೋರಾಡುವ ಲಸಿಕೆಗಳು ಆಗಿದ್ದರೂ, ಈ ಲಸಿಕೆ ಪಡೆದುಕೊಂಡರೆ ಸೋಂಕು ಬರುವುದನ್ನು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಿಲ್ಲ.

ಕೊರೊನಾ ಲಸಿಕೆ ಪಡೆದ ಬಳಿಕ ಕೊರೊನಾ ಬಂದ್ರೆ?
ಕೊರೊನಾ ಲಸಿಕೆ ಎರಡು ಡೋಸ್ ಪಡೆದವರಲ್ಲಿ ಶೇ.4ರಷ್ಟು ಜನರಲ್ಲಿ ಸೋಂಕು ಬಂದಿದೆ. ಆದರೆ ಕೋವಿಡ್ 19 ಲಸಿಕೆ ಪಡೆದವರಲ್ಲಿ ಹಾಗೂ ಪಡೆಯದವರಲ್ಲಿ ಇರುವ ವ್ಯತ್ಯಾಸವೇನೆಂದರೆ ಈ ಲಸಿಕೆ ಪಡೆದುಕೊಂಡವರಲ್ಲಿ ರೋಗ ಲಕ್ಷಣಗಳು ಗಂಭೀರವಾಗುವುದಿಲ್ಲ, ಅಲ್ಲದೆ ಬೇಗನೆ ಚೇತರಿಸಿಕೊಳ್ಳುತ್ತಾರೆ. ಆದ್ದರಿಂದ ಪ್ರತಿಯೊಬ್ಬರು ಲಸಿಕೆ ಪಡೆದುಕೊಳ್ಳಬೇಕು.

ಕೋವಿಡ್ 19 ಪಾಸಿಟಿವ್ ಬಂದವರು ಲಸಿಕೆ ಪಡೆಯಬಹುದೇ?
ಕೋವಿಡ್ 19 ಪಾಸಿಟಿವ್ ಬಂದಾಗ ಕೊರೊನಾ ವ್ಯಾಕ್ಸಿನ್ ತೆಗೆದುಕೊಳ್ಳುವಂತಿಲ್ಲ. ಕೊರೊನಾದಿಂದ ಚೇತರಿಸಿದ 4-8 ವಾರಗಳ ಬಳಿಕ ತಿನ್ನಬೇಕು.

ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರು ಲಸಿಕೆ ತೆಗೆದುಕೊಂಡರೆ?
ಕೆಲವರಿಗೆ ಕೋವಿಡ್ 19 ಬಂದರೂ ಯಾವುದೇ ಲಕ್ಷಣಗಳಿರುವುದಿಲ್ಲ, ಹಾಗಾಗಿ ಅವರಿಗೆ ಸೋಂಕು ಬಂದಿರುವುದು ಗೊತ್ತಿರುವುದಿಲ್ಲ , ಅಂತ ಸಮಯದಲ್ಲಿ ಕೋವಿಡ್ 19 ಲಸಿಕೆ ತೆಗೆದುಕೊಂಡರೆ ಭಯ ಪಡಬೇಕಾಗಿಲ್ಲ, ಲಸಿಕೆಯೂ ನಿಮ್ಮ ಮೇಲೆ ಯಾವುದೇ ಕೆಟ್ಟ ಪರಿಣಾಮ ಬೀರುವುದಿಲ್ಲ.

ಕೋವಿಡ್ 19 ಬಂದಾಗ ಎರಡನೇ ಡೋಸ್ ಯಾವಾಗ ಪಡೆಯಬೇಕು?
ಮೊದಲ ಡೋಸ್ ಪಡೆದ ಬಳಿಕ ಕೋವಿಡ್ 19 ಬಂದಾಗ ಎರಡನೇ ಡೋಸ್ ಯಾವಾಗ ಪಡೆಯಬೇಕು? ಎಂಬ ಪ್ರಶ್ನೆ ಹಲವರಲ್ಲಿ ಇರುತ್ತದೆ. ಕೊರೊನಾ ವ್ಯಾಕ್ಸಿನ್ ಮೊದಲ ಡೋಸ್ ಪಡೆದಿರುವುದರಿಂದ ಕೊರೊನಾ ಸೋಂಕಿನಿಂದ ಬೇಗನೆ ಚೇತರಿಸಿಕೊಳ್ಳಬಹುದು. ಕೊರೊನಾದಿಂದ ಚೇತರಿಸಿದ ಬಳಿಕ 4 ವಾರಗಳನ್ನು ಕಳೆದ ಮೇಲೆ ಲಸಿಕೆ ಪಡೆಯಿರಿ.
(Kannada Copy of Boldsky Kannada)
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm