ಬ್ರೇಕಿಂಗ್ ನ್ಯೂಸ್
13-05-21 02:51 pm Shreeraksha, BoldSky Kannada ಡಾಕ್ಟರ್ಸ್ ನೋಟ್
ಮುಖದ ಆರೈಕೆಯಷ್ಟೇ ತುಟಿ ಆರೈಕೆಯೂ ಮುಖ್ಯ. ತುಟಿಗಳು ಬೆವರು ಉಂಟುಮಾಡುವುದಿಲ್ಲ. ಆದರೆ ರಕ್ಷಣಾತ್ಮಕ ಎಣ್ಣೆಯನ್ನು ಸ್ರವಿಸುವ ಸೆಬಾಸಿಯಸ್ ಗ್ರಂಥಿಗಳನ್ನು ಹೊಂದಿರುವುದರಿಂದ, ತೇವಾಂಶ ಮತ್ತು ಆರೋಗ್ಯಕರವಾಗಿರಲು ಅವುಗಳನ್ನು ನಿಯಮಿತವಾಗಿ ತೇವಗೊಳಿಸುವುದು ಅಗತ್ಯವಾಗಿದೆ. ಇದನ್ನು ಮಾಡದಿದ್ದಾಗ ನಿಮ್ಮ ತುಟಿ ಒಣಗಲು, ಕಪ್ಪಾಗಲು ಕಾರಣವಾಗುತ್ತದೆ. ಹೀಗಾಗಿ ನಿಮ್ಮ ಕೋಮಲವಾದ ತುಟಿಗಳನ್ನು ಬೇಸಿಗೆಯಲ್ಲಿ ಹೇಗೆ ರಕ್ಷಿಸುವುದು ಎಂಬುದನ್ನು ಈ ಕೆಳಗೆ ವಿವರಿಸಲಾಗಿದೆ.

1. ಎಸ್ ಪಿ ಎಫ್ ಇರುವ ಲಿಪ್ ಬಾಮ್ ಹಚ್ಚುವುದನ್ನು ಮರೆಯಬೇಡಿ ಮತ್ತು ಪ್ರತಿ ಎರಡು ಗಂಟೆಗಳಿಗೊಮ್ಮೆ ಹಚ್ಚುತ್ತಿರಿ:
ನಮ್ಮ ತುಟಿಗಳು ನಿರಂತರವಾಗಿ ಸೂರ್ಯನ ಬಿಸಿಲಿಗೆ ತೆರೆದುಕೊಂಡಿದ್ದರೂ ಸಹ, ಸನ್ಸ್ಕ್ರೀನ್ ಬಳಸುವಾಗ ತುಟಿಯನ್ನು ಕಡೆಗಣಿಸಲಾಗುತ್ತದೆ. ಇದರಿಂದ ನಿಮ್ಮ ತುಟಿಗಳು ಹಾನಿಗೊಳಗಾಗುವುದಲ್ಲದೇ, ಚರ್ಮದ ಕ್ಯಾನ್ಸರ್ ಗೆ ಕಾರಣವಾಗಬಹುದು. ಸೂರ್ಯನ ಶಾಖದಿಂದ ನಿಮ್ಮ ತುಟಿಗಳನ್ನು ಸುರಕ್ಷಿತವಾಗಿಡಲು ಎಸ್ಪಿಎಫ್ 15 ಅಥವಾ ಹೆಚ್ಚಿರುವ ಲಿಪ್ ಬಾಮ್ ಹಚ್ಚುವುದು ಉತ್ತಮ ಮಾರ್ಗವಾಗಿದೆ. ಇದು ನಿಮ್ಮ ತುಟಿಗಳನ್ನು ಮೃದುವಾಗಿರಿಸುತ್ತದೆ. ಇದನ್ನು ಆಗಾಗ ಹಚ್ಚುತ್ತಿರಿ, ಏಕೆಂದರೆ ತಿನ್ನುವಾಗ, ಕುಡಿಯುವಾಗ ಮತ್ತು ಮಾತನಾಡುವಾಗ ಸುಲಭವಾಗಿ ಅಳಿಸಿಹೋಗಬಹುದು. ಆದ್ದರಿಂದ ಪ್ರತಿ ಎರಡು ಗಂಟೆಗಳಿಗೊಮ್ಮೆ ಲಿಪ್ ಬಾಮ್ ಹಚ್ಚಿ. ಇದರ ಜೊತೆಗೆ ತೇವಾಂಶವಿರುವ ತುಟಿಯ ಸನ್ ಸ್ಕ್ರೀನ್ ಸಹ ಬಳಸಬಹುದು.

2. ಡೆಡ್ ಸೆಲ್ ಗಳನ್ನು ತೊಡೆದುಹಾಕಲು ನಿಮ್ಮ ತುಟಿಗಳನ್ನು ಸ್ಕ್ರಬ್ ನಿಂದ ವಾರಕ್ಕೆ ಒಂದು ಅಥವಾ ಎರಡು ಬಾರಿ ಎಕ್ಸ್ಫೋಲಿಯೇಟ್ ಮಾಡಿ. ನಂತರ ನಿಮ್ಮ ಪೋಷಿಸುವ ಲಿಪ್ ಕೇರ್ ಹಚ್ಚಿ. ಇದು ನಿಮ್ಮ ತುಟಿಗಳು ಮೃದು ಮತ್ತು ಗುಲಾಬಿ ಬಣ್ಣವನ್ನು ಕಾಣುವಂತೆ ಮಾಡುತ್ತದೆ.

3. ತೇವಾಂಶವನ್ನು ಖಚಿತಪಡಿಸಿಕೊಳ್ಳಲು ಮತ್ತು ನಿಮ್ಮ ಲಿಪ್ಸ್ಟಿಕ್ ಹೆಚ್ಚು ಕಾಲ ಉಳಿಯುವಂತೆ ಮಾಡಲು ಲಿಪ್ಸ್ಟಿಕ್ ಹಚ್ಚುವ ಮೊದಲು ಮಾಯಿಶ್ಚರೈಸರ್ ಮತ್ತು ಸನ್ಸ್ಕ್ರೀನ್ ಅನ್ನು ಅನ್ವಯಿಸಿ. ನಿಮ್ಮ ಮೇಕ್ಅಪ್ ತೆಗೆದ ನಂತರ ನಿಮ್ಮ ತುಟಿಗಳನ್ನು ಪೋಷಿಸಿ ಏಕೆಂದರೆ ಲಿಪ್ಸ್ಟಿಕ್ ನಿಮ್ಮ ತುಟಿಗಳನ್ನು ಒಣಗಿಸುತ್ತದೆ.

4. ದೀರ್ಘಕಾಲ ಉಳಿಯುವ ಲಿಪ್ ಸ್ಟಿಕ್ಗಳನ್ನು ಧರಿಸುವುದನ್ನು ತಪ್ಪಿಸಿ, ಏಕೆಂದರೆ ಅವುಗಳು ಸೀಸ ಮತ್ತು ಬಿಸ್ಮತ್ ಅನ್ನು ಒಳಗೊಂಡಿರುತ್ತದೆ. ಅದು ಅಲರ್ಜಿ, ಕಾರ್ಸಿನೋಜೆನೆಸಿಸ್ಗೆ ಕಾರಣವಾಗಬಹುದು. ಬದಲಿಗೆ ಎಸ್ಪಿಎಫ್ ಅಥವಾ ವಿಟಮಿನ್ ಇ ಇರುವ ಲಿಪ್ ಸ್ಟಿಕ್ಗಳನ್ನು ಆಯ್ಕೆ ಮಾಡಿ.
(Kannada Copy of Boldsky Kannada)
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm