ಬ್ರೇಕಿಂಗ್ ನ್ಯೂಸ್
05-06-21 11:45 am Reena TK, BoldSky Kannada ಡಾಕ್ಟರ್ಸ್ ನೋಟ್
ಭಾರತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಗರ್ಭಿಣಿಯರು ಹಾಗೂ ಎದೆ ಹಾಲುಣಿಸುವ ತಾಯಂದಿರುವ ಅವರು ಇಚ್ಛಿಸಿದರೆ ಈ ಲಸಿಕೆ ಪಡೆಯಬಹುದಾಗಿದೆ, ಅಲ್ಲದೆ ಕೊರೊನಾದಿಂದ ಚೇತರಿಸಿದವರು ಮೂರು ತಿಂಗಳ ಬಳಿಕ ಲಸಿಕೆ ಪಡೆಯುವಂತೆ ಸಿಡಿಸಿ ಹೇಳಿದೆ.
ಕೊರೊನಾದಿಂದ ಚೇತರಿಸಿದವರಲ್ಲಿ ನೈಸರ್ಗಿಕವಾಗಿ ಕೊರೊನಾ ವಿರುದ್ಧ ರೋಗ ನಿರೋಧಕ ಶಕ್ತಿ ಇರುತ್ತದೆ, ಇದು 6 ತಿಂಗಳವರೆಗೆ ಇರುವುದು, ಆದ್ದರಿಂದ ಅದರ ಬಳಿಕ ಲಸಿಕೆ ಪಡೆದರೂ ಸಾಕು ಎಂದು ತಜ್ಞರು ಸಲಹೆ ನೀಡಿದ್ದಾರೆ.

ಇನ್ನು ಅಲರ್ಜಿ ಸಮಸ್ಯೆ ಇರುವವರು ಹಾಗೂ ಇತರ ಆರೋಗ್ಯ ಸಂಬಂಧಿತ ಸಮಸ್ಯೆ ಇರುವವರು ವೈದ್ಯರು ಸೂಚಿಸಿದರಷ್ಟೇ ತೆಗೆದುಕೊಳ್ಳಬಹುದು, ಲಸಿಕೆ ಪಡೆಯಲು ಬಂದವರಿಗೆ ಜ್ವರ ಮತ್ತಿತರ ಆರೋಗ್ಯ ಸಮಸ್ಯೆ ಲಸಿಕೆ ನೀಡುವುದಿಲ್ಲ. ಆದರೆ ಕೆಲವರು ಆರೋಗ್ಯವಾಗಿರುತ್ತದೆ, ಲಸಿಕೆ ಪಡೆಯುವ ಸಂದರ್ಭದಲ್ಲಿ ಶೀತದ ಸಮಸ್ಯೆ ಇರುತ್ತದೆ, ಅಂಥವರು ಲಸಿಕೆ ಪಡೆಯಬಹುದೇ, ಶೀತವಿದ್ದವರು ಲಸಿಕೆ ಪಡೆದರು ಅದರ ಪರಿಣಾಮ ಕುಗ್ಗುವುದೇ ಎಂಬೆಲ್ಲಾ ಮಾಹಿತಿ ಇಲ್ಲಿದೆ:

ಕಾಯಿಲೆ ಇದ್ದಾಗ ಲಸಿಕೆ ಪಡೆದರೆ ಏನಾಗುತ್ತೆ?
ಯಾವಾಗ ವ್ಯಕ್ತಿಗೆ ಕಾಯಿಲೆ ಬರುತ್ತದೋ ಆಗ ದೇಹಕ್ಕೆ ಯಾವುದಾದರೂ ಸೋಂಕಾಣು ಅಥವಾ ಬ್ಯಾಕ್ಟಿರಿಯಾ ದಾಳಿಯಿಂದ ಉಂಟಾಗಿರುತ್ತೆ, ರೋಗ ನಿರೋಧಕ ವ್ಯವಸ್ಥೆ ಆ ಸೋಂಕಾಣು ವಿರುದ್ಧ ಹೋರಾಡುತ್ತಿರುತ್ತಿದೆ. ಮನುಷ್ಯ ಆರೋಗ್ಯವಾಗಿರುವಾಗ ಲಸಿಕೆ ಉತ್ತಮ ಪ್ರಯೋಜನ ಬೀರುತ್ತದೆ ಎಂಬುವುದು ಸಾಮಾನ್ಯ ಜ್ಞಾನ. ರೋಗ ನಿರೋಧಕ ವ್ಯವಸ್ಥೆ ಈಗಾಗಲೇ ದೇಹದೊಳಗಿರುವ ಅಪರಿಚಿತ ಸೊಂಕು ಅಥವಾ ಬ್ಯಾಕ್ಟಿರಿಯಾ ಜೊತೆ ಹೋರಾಡುತ್ತಿರುವಾಗ ಕೋವಿಡ್ 19 ಲಸಿಕೆ ನೀಡುವುದು ಸುರಕ್ಷಿತವಲ್ಲ.

ಶೀತ ಅಥವಾ ಜ್ವರ ಲಸಿಕೆಯ ಪ್ರಯೋಜನ ಕುಗ್ಗಿಸುವುದೇ?
ಸಣ್ಣ ಜ್ವರ ಅಥವಾ ಶೀತವಿದ್ದರೆ ಅದು ಲಸಿಕೆಯ ಪ್ರಯೋಜನ ಕುಗ್ಗಿಸುತ್ತೆ ಎಂಬುವುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಆದರೆ ನಿಮಗೆ ಯಾವ ಬಗೆಯ ಸೋಂಕು ತಗುಲಿದೆ ಅದರ ಮೇಲೆ ಲಸಿಕೆ ದೇಹದ ಮೇಲೆ ಪ್ರಭಾವ ಬೀರುತ್ತದೆ. ಉದಾಹರಣೆಗೆ ಸಾಮಾನ್ಯ ಶೀತದ ಸಮಸ್ಯೆಯಿದ್ದರೆ ಅವರು ಲಸಿಕೆ ಪಡೆದರೆ ಆ ಚಿಕ್ಕ ಸೋಂಕು ಲಸಿಕೆಗೆ ಹಾನಿಯೇನು ಉಂಟು ಮಾಡುವುದಿಲ್ಲ, ಆದರೆ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಯಾಗಿದ್ದರೆ ಅಡ್ಡಪರಿಣಾಮ ಬೀರಬಹುದು.
ಅನಾರೋಗ್ಯವಿದ್ದಾಗ ಲಸಿಕೆ ಪಡೆದರೆ ಏನಾಗುತ್ತೆ?
ಮುಖ್ಯವಾದ ಅಪಾಯವೆಂದರೆ ಅನಾರೋಗ್ಯವಿದ್ದಾಗ ಲಸಿಕೆ ಪಡೆದರೆ ರೋಗ ಲಕ್ಷಣಗಳು ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇದೆ. ಈ ಲಸಿಕೆಯ ರಿಯಾಕ್ಷನ್ನಿಂದ ಗಂಭೀರವಾದ ಅಡ್ಡಪರಿಣಾಮವೂ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಲಸಿಕೆ ಪಡೆಯಬಹುದೇ, ಇಲ್ಲವೇ ಎಂಬುವುದನ್ನು ನಿಮ್ಮ ವೈದ್ಯರ ಬಳಿ ಚರ್ಚಿಸಿದ ಬಳಿಕವಷ್ಟೇ ತೆಗೆಯಿರಿ.
(Kannada Copy of Boldsky Kannada)
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 06:51 pm
HK News Staffer
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm