ಬ್ರೇಕಿಂಗ್ ನ್ಯೂಸ್
09-06-21 11:33 am Shreeraksha, BoldSky Kannada ಡಾಕ್ಟರ್ಸ್ ನೋಟ್
ವ್ಯಕ್ತಿಯ ದೇಹದಲ್ಲಿ ಕೆಂಪು ಮತ್ತು ಬಿಳಿ ಎಂಬ ಎರಡು ರೀತಿಯ ರಕ್ತ ಕಣಗಳಿವೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ದೇಹದಲ್ಲಿ ಕೆಂಪು ರಕ್ತ ಕಣಗಳು ಕಡಿಮೆ ಆದಾಗ, ದೇಹದಲ್ಲಿ ರಕ್ತದ ಕೊರತೆ ಉಂಟಾಗುವುದು. ಇದನ್ನು ರಕ್ತಹೀನತೆ ಎಂದು ಕರೆಯುತ್ತಾರೆ. ದೇಹದಲ್ಲಿ ಕಬ್ಬಿಣದ ಅಂಶವನ್ನು ಹೆಚ್ಚಿಸುವ ಮೂಲಕ, ವ್ಯಕ್ತಿಯ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚು ಮಾಡಬಹುದು.
ದೇಹದಲ್ಲಿ ಹಿಮೋಗ್ಲೋಬಿನ್ ಕೊರತೆಯಿಂದಾಗಿ, ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯವು ಕಡಿಮೆಯಾಗಲು ಪ್ರಾರಂಭಿಸುತ್ತದೆ. ಇದರಿಂದಾಗಿ ಅನೇಕ ಗಂಭೀರ ಕಾಯಿಲೆಗಳು ವ್ಯಕ್ತಿಯನ್ನು ಸುತ್ತುವರಿಯಲು ಪ್ರಾರಂಭಿಸುತ್ತವೆ. ಇಂತಹ ಪರಿಸ್ಥಿತಿಯಲ್ಲಿ, ದೇಹದಲ್ಲಿ ಕಬ್ಬಿಣದ ಕೊರತೆಯನ್ನು ನಿವಾರಿಸಲು ಸಹಾಯ ಮಾಡುವ ಕೆಲವು ನೈಸರ್ಗಿಕ ಮನೆಮದ್ದುಗಳನ್ನ ತಿಳಿದುಕೊಳ್ಳುವುದು ಮುಖ್ಯ.

ಹಿಮೋಗ್ಲೋಬಿನ್ ಕೊರತೆಗೆ ಕಾರಣಗಳೇನು
1. ಹೊಟ್ಟೆಗೆ ಸಂಬಂಧಿಸಿದ ಸೋಂಕುಗಳಿಂದ ಹಿಮೋಗ್ಲೋಬಿನ್ ಕೊರತೆ ಉಂಟಾಗುವುದು.
2. ಆಹಾರದಲ್ಲಿ ಪೌಷ್ಠಿಕಾಂಶದ ಕೊರತೆಯಿಂದ ಅಗತ್ಯ ಪ್ರಮಾಣದ ಕಬ್ಬಿಣ ಸಿಗದೇ ಇದ್ದಾಗ
3. ದೇಹದಿಂದ ಅಧಿಕ ಪ್ರಮಾಣದ ರಕ್ತಸ್ರಾವ ಆದಾಗ
4. ಗಂಭೀರ ಕಾಯಿಲೆಯಿಂದಾಗಿ ದೇಹದಲ್ಲಿ ರಕ್ತದ ಕೊರತೆ

ರಕ್ತದ ಕೊರತೆಯಾದಾಗ ಉಂಟಾಗುವ ಸಮಸ್ಯೆಗಳೇನು?:
1. ದೇಹ, ತಲೆ ಮತ್ತು ಎದೆಯಲ್ಲಿ ನೋವು
2. ರಕ್ತಹೀನತೆಯಿಂದ ಹೃದಯ,ಕಿಡ್ನಿ ಮತ್ತು ಪಿತ್ತಜನಕಾಂಗಕ್ಕೆ ಸಂಬಂಧಿಸಿದ ಕಾಯಿಲೆಗಳ ಉದ್ಭವ
3. ಸ್ನಾಯುವಿನ ದೌರ್ಬಲ್ಯ
4. ಚರ್ಮದ ಬಣ್ಣ ಬದಲಾವಣೆ
5. ಗಾಯಗಳು ಬೇಗನೆ ಗುಣವಾಗುವುದಿಲ್ಲ
6.ಮುಟ್ಟಿನ ಅವಧಿಗಳಲ್ಲಿ ಹೆಚ್ಚು ನೋವು
7. ಕೈಕಾಲುಗಳು ತಣ್ಣಗಾಗುವುದು
ಹಿಮೋಗ್ಲೋಬಿನ್ ಕೊರತೆ ಲಕ್ಷಣಗಳು ಹೀಗಿವೆ :
1. ಬೇಗ ಆಯಾಸ ಆಗುವುದು
2. ಚರ್ಮ ಹಳದಿ ಬಣ್ಣಕ್ಕೆ ತಿರುಗುವುದು
3. ಪಾದದಡಿ ನೋವು
4. ಸ್ನಾಯು ನೋವು

ಈ ಮನೆಮದ್ದುಗಳು ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತವೆ:
1. ಒಂದು ಲೋಟ ನೀರಿಗೆ ನಿಂಬೆ ಹಿಂಡಿ ಅದಕ್ಕೆ ಒಂದು ಚಮಚ ಜೇನುತುಪ್ಪವನ್ನು ಸೇರಿಸಿ, ಇದನ್ನು ಪ್ರತಿದಿನ ಕುಡಿಯುವುದರಿಂದ ದೇಹದಲ್ಲಿ ರಕ್ತ ವೇಗವಾಗಿ ಉತ್ಪಾದನೆ ಆಗುತ್ತದೆ.
2. ರಕ್ತಹೀನತೆಯ ಸಂದರ್ಭದಲ್ಲಿ, ಪಾಲಕ್ ಸೇವನೆಯು ಯಾವುದೇ ಔಷಧಿಗಿಂತ ಕಡಿಮೆಯಿಲ್ಲ. ಇದರಲ್ಲಿ ವಿಟಮಿನ್ ಎ, ಸಿ, ಬಿ 9, ಕಬ್ಬಿಣ, ಫೈಬರ್ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ಪಾಲಕ್ ಒಂದರ ಸೇವನೆಯು ದೇಹದಲ್ಲಿ ಕಬ್ಬಿಣವನ್ನು ಶೇಕಡಾ 20 ರಷ್ಟು ಹೆಚ್ಚಿಸುತ್ತದೆ.
3. ಟೊಮೆಟೊ ಸೇವಿಸುವುದರಿಂದ ದೇಹದಲ್ಲಿನ ರಕ್ತದ ಪ್ರಮಾಣವೂ ವೇಗವಾಗಿ ಹೆಚ್ಚಾಗುತ್ತದೆ. ಇದಕ್ಕಾಗಿ ಪ್ರತಿದಿನ ಒಂದು ಲೋಟ ಟೊಮೆಟೊ ರಸ ಅಥವಾ ಜ್ಯುಸ್ ಸೇವಿಸಿ.
4. ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮೆಕ್ಕೆಜೋಳವನ್ನು ಸಹ ಸೇವಿಸಬಹುದು.
5. ಬೆಲ್ಲದೊಂದಿಗೆ ಕಡಲೆಕಾಯಿಯನ್ನು ಸೇರಿಸಿ ತಿನ್ನುವುದರಿಂದ ದೇಹದಲ್ಲಿನ ಕಬ್ಬಿಣದ ಕೊರತೆಯೂ ಕಡಿಮೆಯಾಗುವುದು.
(Kannada Copy of Boldsky Kannada)
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 09:51 am
HK News Staffer
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm