ಬ್ರೇಕಿಂಗ್ ನ್ಯೂಸ್
15-06-21 10:23 am Shreeraksha, BoldSky Kannada ಡಾಕ್ಟರ್ಸ್ ನೋಟ್
ಕೊರೊನಾ ಎರಡನೇ ಅಲೆಯೆನೋ ನಿಯಂತ್ರಣಕ್ಕೆ ಬರುತ್ತಿದೆ, ಆದರೆ ಮೂರನೇ ಅಲೆ ಹಾಗೂ ಅದು ಮಕ್ಕಳಿಗೆ ಉಂಟು ಮಾಡಬಹುದಾದ ಅಪಾಯದ ಕುರಿತು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇದೇ ಕಾರಣಕ್ಕಾಗಿ ಕೇಂದ್ರದ ಆಯುಷ್ ಸಚಿವಾಲಯ ಮಕ್ಕಳು ಮತ್ತು ಪೋಷಕರಿಗೆ ಮನೆಯಲ್ಲಿಯೇ ಪಾಲಿಸಬೇಕಾದ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯಲ್ಲಿ ಏನೇನಿದೆ ಎಂಬುದನ್ನು ಈ ಕೆಳಗೆ ನೊಡೋಣ.
ಆಯುಷ್ ಇಲಾಖೆ ತಿಳಿಸಿದ ಮಕ್ಕಳ ಆರೋಗ್ಯಕ್ಕಾಗಿ ತೆಗೆದುಕೊಳ್ಳಬೇಕಾದ ಕ್ರಮಗಳು:
1. ಮಕ್ಕಳು ಆಗಾಗ್ಗೆ ಕೈ ತೊಳೆಯುವುದು ಹಾಗೂ ಮನೆಯ ಹೊರಗೆ ಹೋಗುವಾಗ ಮಾಸ್ಕ್ ಧರಿಸುವುದು. ಹೀಗೆ ಮಾಡುವುದನ್ನು ಪ್ರೋತ್ಸಾಹಿಸಲು ಅವರಿಗೆ ಬಹುಮಾನವನ್ನು ನೀಡಬಹುದು.
2. 5-18 ವರ್ಷ ವಯಸ್ಸಿನ ಮಕ್ಕಳಿಗೆ ಮಾಸ್ಕ್ ಕಡ್ಡಾಯವಾಗಿದೆ ಆದರೆ 2-5 ವರ್ಷ ವಯಸ್ಸಿನ ಮಕ್ಕಳು ಪೋಷಕರ ಮೇಲ್ವಿಚಾರಣೆಯಲ್ಲಿ ಹಾಕಿಕೊಳ್ಳಬಹುದು.
3. ವೈದ್ಯಕೀಯೇತರ ಅಥವಾ ಬಟ್ಟೆಯ ಮೂರು-ಲೇಯರ್ ಇರುವ ಹತ್ತಿ ಮಾಸ್ಕ್ ಗಳು ಮಕ್ಕಳಿಗೆ ಯೋಗ್ಯ

4. ಮಕ್ಕಳು ಸಾಧ್ಯವಾದಷ್ಟು ಮನೆಯಲ್ಲಿಯೇ ಇರಬೇಕು, ಪ್ರಯಾಣವನ್ನು ತಪ್ಪಿಸಬೇಕು.
5. ವೀಡಿಯೊ ಮತ್ತು ಫೋನ್ ಕರೆಗಳ ಮೂಲಕ ಸ್ನೇಹಿತರು ಮತ್ತು ಕುಟುಂಬ ಸದಸ್ಯರೊಂದಿಗೆ ಸಂಪರ್ಕದಲ್ಲಿರಲು ಅವರಿಗೆ ಸಹಾಯ ಮಾಡಿ.
6. ವಯಸ್ಸಾದವರು ಗಂಭೀರವಾದ ಕಾಯಿಲೆಯ ಅಪಾಯವನ್ನು ಹೊಂದಿರುವುದರಿಂದ ಕೋವಿಡ್ ಶಂಕಿತ ಮಕ್ಕಳು ತಮ್ಮ ಅಜ್ಜ-ಅಜ್ಜಿಯರೊಂದಿಗೆ ಸಂಪರ್ಕದಲ್ಲಿರಬಾರದು.

7. ಮಕ್ಕಳಲ್ಲಿ ಐದು ದಿನಗಳಿಗಿಂತ ಹೆಚ್ಚಿನ ಅವಧಿಯ ಜ್ವರ, ಊಟ ಸೇರದೇ ಇರುವುದು, ಆಲಸ್ಯವಾಗುವುದು, ಉಸಿರಾಟದ ಪ್ರಮಾಣ ಹೆಚ್ಚಾಗುವುದು ಮತ್ತು ಆಮ್ಲಜನಕ ಮಟ್ಟ 95% ಕ್ಕಿಂತ ಕಡಿಮೆಯಾಗುವುದನ್ನು ಪೋಷಕರು ಗಮನಿಸುತ್ತಿರಬೇಕು. ಇವುಗಳಲ್ಲಿ ಯಾವುದಾದರೂ ಒಂದು ಕಂಡುಬಂದರೂ ವೈದ್ಯರ ಬಳಿ ಕರೆದೊಯ್ಯಿರಿ.
8. ಮಕ್ಕಳಿಗೆ ಕುಡಿಯಲು ಕುದಿಸಿ, ಆರಿಸಿದ ನೀರು ನೀಡಬೇಕು.
9. ಎರಡು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳು ಬೆಳಿಗ್ಗೆ ಮತ್ತು ರಾತ್ರಿ ಸರಿಯಾಗಿ ಹಲ್ಲುಜ್ಜುವ ಮೂಲಕ ನೈರ್ಮಲ್ಯವನ್ನು ಕಾಪಾಡಿಕೊಳ್ಳಬೇಕು.

10. 5 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳು ಎಣ್ಣೆ ಮತ್ತು ಬೆಚ್ಚಗಿನ ನೀರಿನಿಂದ ಬಾಯಿ ಆಗಾಗ ಮುಕ್ಕಳಿಸಬೇಕು.
11. 5 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ತೈಲ ಮಸಾಜ್ಗಳು, ಯೋಗಾಭ್ಯಾಸಗಳಾದ ಪ್ರಾಣಾಯಾಮ ಮತ್ತು ಧ್ಯಾನ -ವ್ಯಾಯಾಮಗಳನ್ನು ಮಾಡಲು ಪ್ರೋತ್ಸಾಹಿಸಬೇಕು.
12. ಆಯುರ್ವೇದ ಅನುಸರಿಸುವ ಮಕ್ಕಳಿಗಾಗಿ ಆಯುರ್ವೇದ ರೋಗನಿರೋಧಕ ಕ್ರಮಗಳು, ಅರಿಶಿನ ಹಾಲು, ಚವಾನ್ ಪ್ರಶ್ ಮತ್ತು ಸಾಂಪ್ರದಾಯಿಕ ಗಿಡಮೂಲಿಕೆಗಳ ಕಷಾಯ ಮುಂತಾದ ಆಯುರ್ವೇದ ಔಷಧಿಗಳನ್ನು ತೆಗೆದುಕೊಳ್ಳಿ.

13. ಮಕ್ಕಳಿಗೆ ಸಾಕಷ್ಟು ನಿದ್ರೆ ಮತ್ತು ಸುಲಭವಾಗಿ ಜೀರ್ಣವಾಗುವ, ತಾಜಾ ಮತ್ತು ಬೆಚ್ಚಗಿನ ಆಹಾರವನ್ನು ನೀಡಬೇಕು.
14. ಮಕ್ಕಳ ಆಟದ ಜಾಗ, ಕೋಟ್, ಹಾಸಿಗೆಗಳು, ಬಟ್ಟೆಗಳು ಮತ್ತು ಆಟಿಕೆಗಳನ್ನು ಪ್ರತಿದಿನ ಸಂಜೆ ಸ್ಯಾನಿಟೈಜ್ ಮಾಡಬೇಕು.
15. ಮಕ್ಕಳಿಗೆ ಭಯ ಹುಟ್ಟಿಸಬೇಡಿ, ಬದಲಾಗಿ ಧೈರ್ಯ ತುಂಬಿ, ಈ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸುವುದರಿಂದ ಸಿಗುವ ಪ್ರಯೋಜನಗಳೇನು ಎಂಬುದನ್ನು ಮನವರಿಕೆ ಮಾಡಿಸಿ.
(Kannada Copy of Boldsky Kannada)
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am