ಬ್ರೇಕಿಂಗ್ ನ್ಯೂಸ್
01-07-21 02:22 pm Sumalatha N, BoldSky Kannada ಡಾಕ್ಟರ್ಸ್ ನೋಟ್
ನವದೆಹಲಿ, ಜುಲೈ 01: ದೇಶದಲ್ಲಿ 2-17 ವರ್ಷದ ಮಕ್ಕಳ ಮೇಲೆ ಕೋವೊವ್ಯಾಕ್ಸ್ ಕೊರೊನಾ ಲಸಿಕೆಯ 2/3ನೇ ಹಂತದ ಪ್ರಯೋಗ ನಡೆಸಲು ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಅನುಮತಿ ನೀಡದಂತೆ ಸರ್ಕಾರದ ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ.
12-17 ವಯಸ್ಸಿನ ಹಾಗೂ 2-11 ವಯಸ್ಸಿನ 920 ಮಕ್ಕಳ ಮೇಲೆ ಕೋವೊವ್ಯಾಕ್ಸ್ ಲಸಿಕೆಯ ಪ್ರಯೋಗಕ್ಕೆ ಅನುಮತಿ ಕೋರಿ ಪುಣೆ ಮೂಲದ ಲಸಿಕಾ ಅಭಿವೃದ್ಧಿ ಸಂಸ್ಥೆ ಸೆರಂ ಇನ್ಸ್ಟಿಟ್ಯೂಟ್ ಸೋಮವಾರ ಕೇಂದ್ರ ಔಷಧ ನಿಯಂತ್ರಕ ಸಂಸ್ಥೆಗೆ ಅರ್ಜಿ ಸಲ್ಲಿಸಿತ್ತು.

ಆದರೆ ಸದ್ಯಕ್ಕೆ ಈ ಲಸಿಕೆಗೆ ಬೇರೆ ಯಾವುದೇ ದೇಶದಲ್ಲಿ ಅನುಮೋದನೆ ನೀಡಲಾಗಿಲ್ಲ. ಹೀಗಾಗಿ ಮಕ್ಕಳ ಮೇಲೆ ಪ್ರಯೋಗ ಸಲ್ಲದು ಎಂದು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ ಕೊರೊನಾ ವಿಷಯ ತಜ್ಞರು ಹೇಳಿದ್ದಾರೆ.
ಮಕ್ಕಳಲ್ಲಿ ಕ್ಲಿನಿಕಲ್ ಪ್ರಯೋಗವನ್ನು ಪರಿಗಣಿಸಲು ಕಂಪನಿಯು ವಯಸ್ಕರಲ್ಲಿ ನಡೆಯುತ್ತಿರುವ ಕ್ಲಿನಿಕಲ್ ಪ್ರಯೋಗದ ಕೋವೊವ್ಯಾಕ್ಸ್ ಸುರಕ್ಷತೆ ಹಾಗೂ ಲಸಿಕೆ ಪರಿಣಾಮದ ಸಂಪೂರ್ಣ ವರದಿಯನ್ನು ಸಲ್ಲಿಸಬೇಕು ಎಂದು ಸಂಸ್ಥೆಗೆ ಶಿಫಾರಸ್ಸು ಮಾಡಿದೆ. ತಜ್ಞರ ಸಮಿತಿಯ ಈ ಶಿಫಾರಸ್ಸುಗಳನ್ನು ಡಿಸಿಜಿಐ ಅನುಮೋದಿಸಿರುವುದಾಗಿ ತಿಳಿದುಬಂದಿದೆ.

ಅಮೆರಿಕ ಮೂಲದ ಲಸಿಕೆ ತಯಾರಕ ನೋವಾವ್ಯಾಕ್ಸ್ ಇಂಕ್, ಕಡಿಮೆ, ಮಧ್ಯಮ ಆದಾಯದ ದೇಶಗಳಲ್ಲಿ ಹಾಗೂ ಭಾರತದಲ್ಲಿ NVX-CoV2373 ಅಭಿವೃದ್ಧಿ ಹಾಗೂ ವಾಣಿಜ್ಯೀಕರಣಕ್ಕಾಗಿ ಸೆರಂ ಇನ್ಸ್ಟಿಟ್ಯೂಟ್ ಜೊತೆ ಪರವಾನಗಿ ಒಪ್ಪಂದ ಮಾಡಿಕೊಂಡಿತ್ತು.
ಕೋವೊವ್ಯಾಕ್ಸ್ ಕ್ಲಿನಿಕಲ್ ಪ್ರಯೋಗಗಳು ಭಾರತದಲ್ಲಿ ಮಾರ್ಚ್ನಲ್ಲಿ ಪ್ರಾರಂಭವಾಗಿದ್ದು, ಸೆಪ್ಟೆಂಬರ್ ವೇಳೆಗೆ ವಯಸ್ಕರಿಗೆ ಈ ಲಸಿಕೆಯನ್ನು ಬಿಡುಗಡೆ ಮಾಡಲು ಸೆರಂ ಸಂಸ್ಥೆ ಯೋಜನೆ ರೂಪಿಸಿದೆ.
(Kannada Copy of One India Kannada)
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm