ಬ್ರೇಕಿಂಗ್ ನ್ಯೂಸ್
03-07-21 02:36 pm Reena TK, BoldSky Kannada ಡಾಕ್ಟರ್ಸ್ ನೋಟ್
ಮಗು ಜನಿಸಿದ ಆರು ತಿಂಗಳವರೆಗೆ ಎದೆ ಹಾಲು ಬಿಟ್ಟು ಬೇರೇನೂ ಕೊಡಬೇಡಿ ಎಂದು ಮಕ್ಕಳ ತಜ್ಞರು ಸೂಚಿಸುತ್ತಾರೆ. ಎದೆ ಹಾಲು ಕಡಿಮೆ ಇದ್ದರೆ ಲ್ಯಾಕ್ಟೋಜಿನ್ ಅಥವಾ ಫಾರ್ಮೂಲಾ ಮಿಲ್ಕ್ ನೀಡುವಂತೆ ಸೂಚಿಸುತ್ತಾರೆ.

ಇನ್ನು ಮಕ್ಕಳು ಸ್ವಲ್ಪ ದೊಡ್ಡವರಾದ ಮೇಲೆ ಅಂದ್ರೆ ಆರು ತಿಂಗಳು ಕಳೆದ ಮೇಲೆ ಉದ್ಯೋಗಸ್ಥೆ ತಾಯಿಯಾದರೆ ಮಗುವನ್ನು ಬಿಟ್ಟು ಕೆಲಸಕ್ಕೆ ಹೋಗುವ ಅನಿವಾರ್ಯತೆ ಎದುರಾಗುವುದು. ಆದರೆ ಮಗು ಬಾಟಲಿಗೆ ಅಭ್ಯಾಸವಾಗಲು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಆದರೆ ಒಮ್ಮೆ ಮಕ್ಕಳು ಬಾಟಲಿಗೆ ಅಭ್ಯಾಸವಾದರೆ ಮತ್ತೆ ಎದೆ ಹಾಲು ಕುಡಿಯಲು ಹಿಂದೇಟು ಹಾಕುತ್ತಾರೆ, ನನ್ನ ಮಗು ಎದೆ ಹಾಲುಕುಡಿಯಲು ಇಷ್ಟಪಡುತ್ತಿಲ್ಲ ಎಂದು ಎಷ್ಟೋ ತಾಯಂದಿರು ಹೇಳುತ್ತಾರೆ. ಏಕೆ ಮಗು ಹಾಲು ಕುಡಿಯುತ್ತಿಲ್ಲ? ಇದಕ್ಕೆ ವೈದ್ಯಕೀಯ ಭಾಷೆಯಲ್ಲಿ ನಿಪ್ಪಲ್ ಕನ್ಫ್ಯೂಷನ್ ಎಂದು ಕರೆಯಲಾಗುವುದು.

ನಿಪ್ಪಲ್ ಕನ್ಫ್ಯೂಷನ್ ಎಂದರೇನು?
ಸ್ತನ ಹಾಲು ಕುಡಿಯುವಾಗ ಮಗು ಸ್ವಲ್ಪ ಎಳೆದು ಕುಡಿಯಬೇಕಾಗುತ್ತದೆ. ಆದರೆ ಬಾಟಲಿ ಹಾಲು ಬಾಯಿಗೆ ಇಟ್ಟರೆ ಸುಲಭವಾಗಿ ಹಾಲು ಸಿಗುವುದರಿಂದ ಮಕ್ಕಳು ಬಾಟಲಿ ಹಾಲನ್ನೇ ಕುಡಿಯಲು ಇಷ್ಟಪಡುತ್ತಾರೆ. ಅಲ್ಲದೆ ಬಾಟಲಿ ಅಭ್ಯಾಸವಾದ ಮೇಲೆ ಮೊಲೆ ತೊಟ್ಟಿಗೆ ಬಾಯಿ ಹಾಕಿದಾಗ ಮಗುವಿಗೆ ಸ್ತನ ತೊಟ್ಟಿನ ಗಾತ್ರ ಬಾಟಲ್ ನಿಪ್ಪಲ್ಗಿಂತ ಕಡಿಮೆ ಇರುವುದರಿಂದ ಗೊಂದಲ ಉಂಟಾಗುತ್ತದೆ, ಆದ್ದರಿಂದ ಎದೆ ಹಾಲು ಕುಡಿಯಲು ನಿರಾಕರಿಸುತ್ತವೆ.

ಮಗುವಿಗೆ ನೀಡುವ ಬಾಟಲ್ ನಿಪ್ಪಲ್ ಗಾತ್ರ ನೋಡಿ
ಮಗುವಿಗೆ ಬಾಟಲಿ ಹಾಲು ಕೊಡುವಾಗ ಅದರ ನಿಪ್ಪಲ್ ರಂಧ್ರ ತುಂಬಾ ದೊಡ್ಡದು ಬೇಡ, ಸ್ವಲ್ಪ ಎಳೆದುಕೊಂಡು ಕುಡಿಯುವಂತೆ ಇರಲಿ, ಆಗ ಬಾಟಲಿ ಹಾಲು ಹಾಗೂ ಎದೆ ಹಾಲು ಎರಡಕ್ಕೂ ಅಭ್ಯಾಸ ಮಾಡುತ್ತವೆ.

ಬಾಟಲಿಗಿಂತ ಸ್ಪೂನ್ ಅಭ್ಯಾಸ ಮಾಡಿಸಿ
ಮಕ್ಕಳ ತಜ್ಞರು ಮಕ್ಕಳಿಗೆ ಬಾಟಲಿನಲ್ಲಿ ಹಾಲು ಅಥವಾ ನೀರು ಕೊಡುವುದನ್ನು ಪ್ರೋತ್ಸಾಹಿಸುವುದಿಲ್ಲ. ಲೋಟದಲ್ಲಿ ತೆಗೆದು ಸ್ಪೂನ್ನಲ್ಲಿ ಕುಡಿಸುವಂತೆಯೇ ಸೂಚಿಸುತ್ತಾರೆ. ಆಗಷ್ಟೇ ಜನಿಸಿದ ಮಗುವಿಗೆ ಫಾರ್ಮೂಲಾ ಹಾಲು ಕೊಡುವುದಾದರೆ ಸ್ಪೂನ್ನಲ್ಲಿಯೇ ಕುಡಿಸುವಂತೆ ಸೂಚಿಸುತ್ತಾರೆ. ಮಗುವಿಗೆ ಸ್ಪೂನ್ನಲ್ಲಿ ಕುಡಿಸುವ ಅಭ್ಯಾಸ ಮಾಡಿದರೆ ಈ ರೀತಿಯ ನಿಪ್ಪಲ್ ಕನ್ಫ್ಯೂಷನ್ ಇರಲ್ಲ. ಮಗು ಎದೆ ಹಾಲು ಕುಡಿಯಲು ತುಂಬಾ ಆಸಕ್ತಿಯನ್ನು ತೋರಿಸುತ್ತಾರೆ ಕೂಡ.

ಮಗುವಿನ ಆರೋಗ್ಯದ ದೃಷ್ಟಿಯಿಂದ ಕೂಡ ಸ್ಪೂನ್ನಲ್ಲಿ ನೀಡುವುದು ಒಳ್ಳೆಯದು
ಬಾಟಲಿನಲ್ಲಿ ಕೊಡುವವರು ಬಾಟಲಿ ಶುಚಿತ್ವದ ಕಡೆ ತುಂಬಾನೇ ಗಮನ ನೀಡಬೇಕು, ಇಲ್ಲದಿದ್ದರೆ ಮಗುವಿನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅದೇ ಲೋಟ ಹಾಗೂ ಸ್ಪೂನ್ ಬಳಸುವುದಾದರೆ ಶುಚಿ ಮಾಡುವುದು ಸುಲಭ, ಅಲ್ಲದೆ 9-10 ತಿಂಗಳು ತುಂಬುವಷ್ಟರಲ್ಲಿ ಲೋಟದಲ್ಲಿಯೇ ಕುಡಿಯುವ ಅಭ್ಯಾಸ ಕೂಡ ರೂಢಿಸಿಕೊಂಡು ಬಿಡುತ್ತಾರೆ. ಇದರಿಂದ ಪೋಷಕರಿಗೆ ಹೊರಗಡೆ ಕರಕ್ಕೊಂಡು ಹೋಗುವ ತುಂಬಾನೇ ಅನುಕೂಲವಾಗುವುದು.
(Kannada Copy of Boldsky Kannada)
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am