ಬ್ರೇಕಿಂಗ್ ನ್ಯೂಸ್
10-07-21 02:17 pm Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾ ಸಾಂಕ್ರಾಮಿಕ ಆತಂಕದ ನಡುವೆ ಈಗ ಝಿಕಾ ವೈರಸ್ ಭೀತಿ ಶುರುವಾಗಿದೆ. ಕೇರಳದಲ್ಲಿ 24 ವರ್ಷದ ಗರ್ಭಿಣಿಯಲ್ಲಿ ಮೊದಲ ಝಿಕಾ ವೈರಸ್ ಪ್ರಕರಣ ಪತ್ತೆಯಾಗಿದೆ.
ಭಾರತದಲ್ಲಿ ಝಿಕಾ ವೈರಸ್ ಪತ್ತೆಯಾಗುತ್ತಿರುವುದು ಇದೇ ಮೊದಲಲ್ಲ, 2018ರಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ನಲ್ಲಿ ಝಿಕಾ ವೈರಸ್ ಪತ್ತೆಯಾಗಿತ್ತು. 3 ರಾಜ್ಯಗಳಲ್ಲಿ 280ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿತ್ತು, ಎರಡು ಸಾವು ಕೂಡ ಸಂಭವಿಸಿತ್ತು.

ಝಿಕಾ ವೈರಸ್ ಎಂದರೇನು? ಹರಡುವುದು ಹೇಗೆ
ಝಿಕಾ ವೈರಸ್ ಸೊಳ್ಳೆಗಳಿಂದ ಹರಡುವ ರೋಗವಾಗಿದೆ. ಈಡಿಸ್, ಈಜಿಪ್ಟಿ, ಪ್ಲೇವಿ ವೈರಸ್ ಇರುವ ಸೊಳ್ಳೆ ಮನುಷ್ಯನನ್ನು ಕಚ್ಚಿದಾಗ ಈ ರೋಗ ಹರಡುವುದು. ಹಗಲಿನಲ್ಲಿ ಕಚ್ಚುವ ಸೊಳ್ಳೆ ಈ ರೋಗವನ್ನು ಹರಡುತ್ತದೆ. ಇನ್ನು ಝಿಕಾ ವೈರಸ್ ಸೋಂಕು ತಗುಲಿರುವ ವ್ಯಕ್ತಿಯ ರಕ್ತ ಪಡೆದರೆ, ಅ ಸುರಕ್ಷತೆ ಲೈಂಗಿಕ ಕ್ರಿಯೆ ನಡೆಸಿದಾಗ ಅಥವಾ ಸೋಂಕಿತರ ದೇಹದ ದ್ರವ ತಗುಲಿದರೂ ಹರಡುವುದು. ಗರ್ಭಿಣಿಗೆ ತಗುಲಿದರೆ ಜನಿಸುವ ಮಗುವಿಗೂ ಈ ವೈರಸ್ ತಗುಲುವುದು.

ಗರ್ಭಿಣಿಯರಿಗೆ ಝಿಕಾ ವೈರಸ್ ತಗುಲಿದರೆ ಉಂಟಾಗುವ ಅಪಾಯಗಳು
* ಅವಧಿಪೂರ್ವ ಜನನ
* ಭ್ರೂಣದ ಮೆದುಳಿಗೆ ಹಾನಿಯುಂಟಾಗುವುದು
* ಮೈಕ್ರೋಸೆಫಾಲಿ ಎಂಬ ಸಮಸ್ಯೆ ಉಂಟಾಗುವುದು
* ಜನಿಸಿದ ಮಗುವಿನಲ್ಲೂ ಝಿಕಾ ವೈರಸ್ ಲಕ್ಷಣಗಳು ಕಂಡು ಬರುವುದು

ಝಿಕಾ ವೈರಸ್ ಲಕ್ಷಣಗಳು
* ಜ್ವರ
* ಚರ್ಮದಲ್ಲಿ ಗುಳ್ಳೆಗಳು
* ಕಣ್ಣುಗಳು ಕೆಂಪಾಗುವುದು
* ಸ್ನಾಯು ಮತ್ತು ಕೀಲುನೋವು
* ತಲೆನೋವು
* ಸುಸ್ತು
* ಹೊಟ್ಟೆ ನೋವು

ಲಸಿಕೆ ಲಭ್ಯವಿದೆಯೇ?
ಝಿಕಾ ವೈರಸ್ಗೆ ಯಾವುದೇ ಲಸಿಕೆಯಿಲ್ಲ.
ಚಿಕಿತ್ಸೆ
ಝಿಕಾವೈರಸ್ ತಗುಲಿದಾಗ ನಿರ್ದಿಷ್ಟವಾದ ಚಿಕಿತ್ಸೆಯಿಲ್ಲ. ರೋಗ ತಗುಲಿದವರು ಸಾಕಷ್ಟು ವಿಶ್ರಾಂತಿ ತೆಗೆದುಕೊಳ್ಳಬೇಕು, ನಿರ್ಜಲೀಕರಣ ತಡೆಗಟ್ಟಲು ದ್ರವಾಹಾರ ಸೇವಿಸಬೇಕು. ವೈದ್ಯರು ಸೂಚಿಸಿದ ಚಿಕಿತ್ಸೆ ಪಡೆಯಿರಿ.

ಝಿಕಾ ವೈರಸ್ ತಡೆಗಟ್ಟುವುದು ಹೇಗೆ?
* ಝಿಕಾ ವೈರಸ್ ಪತ್ತೆಯಾದ ಕಡೆ ಸೊಳ್ಳೆಗಳು ಕಚ್ಚದಂತೆ ಎಚ್ಚರವಹಿಸಿ, ಅಂದ್ರೆ ತುಂಬು ತೋಳಿನ ಬಟ್ಟೆ ಧರಿಸಿ.
* ಮನೆಯ ಸುತ್ತ ನೀರು ನಿಲ್ಲಲು ಬಿಡಬೇಡಿ, ಬಾಗಿಲು, ಕಿಟಲಿಗಳಿಗೆ ಸೊಳ್ಳೆ ಪರದೆ ಹಾಕಿ. ಬೆಡ್ಗೆ ಸೊಳ್ಳೆ ಪರದೆ ಬಳಸಿ.
* ಸೊಳ್ಳೆ ನಿವಾರಕ ಔಷಧಿಗಳನ್ನು ಮನೆಯ ಸುತ್ತ ಸಿಂಪಡಿಸಿ
* ಮಕ್ಕಳು ಹಾಗೂ ಗರ್ಭಿಣಿಯರು ಸೊಳ್ಳೆಗಳು ಕಚ್ಚುವುದನ್ನು ತಡೆಗಟ್ಟಲು ತುಂಬು ತೋಳಿನ ಸಡಿಲವಾದ ಬಟ್ಟೆ ಧರಿಸಿ.
ಝಿಕಾ ವೈರಸ್ ಪ್ರದೇಶದಲ್ಲಿದ್ದರೆ ಗರ್ಭಧಾರಣೆ ಮುಂದೂಡಿ
ನೀವಿರುವ ಪ್ರದೇಶದಲ್ಲಿ ಝಿಕಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದರೆ ಗರ್ಭಧಾರಣೆಗೆ ಪ್ರಯತ್ನಿಸುತ್ತಿದ್ದರೆ ಸ್ವಲ್ಪ ಸಮಯ ಮುಂದೂಡುವುದು ಒಳ್ಳೆಯದು ಎಂದು ತಜ್ಞರು ಸಲಹೆ ನೀಡುತ್ತಾರೆ. ಇನ್ನು ಗರ್ಭಿಣಿಗಳಿದ್ದರೆ ಸೊಳ್ಳೆ ಕಚ್ಚದಂತೆ ಎಲ್ಲಾ ಬಗೆಯ ಮುಂಜಾಗ್ರತೆ ವಹಿಸಿ
(Kannada Copy of Boldsky Kannada)
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm