ಬ್ರೇಕಿಂಗ್ ನ್ಯೂಸ್
15-07-21 11:30 am Shreeraksha, BoldSky Kannada ಡಾಕ್ಟರ್ಸ್ ನೋಟ್
ದಿನವನ್ನು ಪ್ರಾರಂಭಿಸಲು ಅಥವಾ ಇಡೀ ದಿನದ ಆಯಾಸವನ್ನು ನಿವಾರಿಸಲು ಚಹಾದ ಮೊರೆ ಹೋಗುವವರು ಸಾಕಷ್ಟು ಜನ. ಆದರೆ ಊಟ ಮಾಡಿದ ತಕ್ಷಣ ಚಹಾ ಕುಡಿಯಲು ಇಷ್ಟಪಡುವ ಜನರಲ್ಲಿ ನೀವೂ ಇದ್ದರೆ, ಈ ಅಭ್ಯಾಸವನ್ನು ಇಂದಿನಿಂದಲೇ ಬದಲಾಯಿಸಿ. ಹೌದು, ಚಹಾದಲ್ಲಿರುವ ಕೆಫೀನ್ ದೇಹದಲ್ಲಿ ಕಾರ್ಟಿಸೋಲ್ ಅಥವಾ ಸ್ಟೀರಾಯ್ಡ್ ಹಾರ್ಮೋನ್ ಅನ್ನು ಹೆಚ್ಚಿಸುವ ಮೂಲಕ ಆರೋಗ್ಯಕ್ಕೆ ಅನೇಕ ಹಾನಿ ಉಂಟುಮಾಡುತ್ತದೆ.
ಊಟವಾದ ಬಳಿಕ ಚಹಾ ಕುಡಿಯುವುದರಿಂದ ಆರೋಗ್ಯಕ್ಕೆ ಏನಾಗುತ್ತದೆ ಎಂಬುದನ್ನು ಈ ಕೆಳಗೆ ವಿವರಿಸಿದ್ದೇವೆ, ನೋಡಿ:
ರಕ್ತದೊತ್ತಡ ಹೆಚ್ಚಾಗಬಹುದು:
ಊಟ ಮಾಡಿದ ನಂತರ ಚಹಾ ಕುಡಿಯುವ ಅಭ್ಯಾಸವು ನಿಮ್ಮನ್ನು ರಕ್ತದೊತ್ತಡ ರೋಗಿಯನ್ನಾಗಿ ಮಾಡುತ್ತದೆ. ವಾಸ್ತವವಾಗಿ, ಚಹಾದಲ್ಲಿ ಕೆಫೀನ್ ಇರುತ್ತದೆ. ಆದ್ದರಿಂದ ಊಟದ ನಂತರ ಚಹಾ ಸೇವಿಸುವುದರಿಂದ ರಕ್ತದೊತ್ತಡದ ತೊಂದರೆ ಉಂಟಾಗುತ್ತದೆ. ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳು ಊಟದ ನಂತರ ಚಹಾವನ್ನು ಸೇವಿಸಬಾರದು.

ಹೃದಯಕ್ಕೆ ಅಪಾಯ:
ಊಟವಾದ ತಕ್ಷಣ ಟೀ ಕುಡಿಯುವುದರಿಂದ ನಿಮಗೆ ಹೃದಯ ಸಂಬಂಧಿ ಸಮಸ್ಯೆಗಳು ಉಂಟಾಗುತ್ತವೆ. ನಿಮ್ಮ ಈ ಅಭ್ಯಾಸವು ತ್ವರಿತ ಹೃದಯ ಬಡಿತಕ್ಕೂ ಕಾರಣವಾಗುತ್ತದೆ. ಆದ್ದರಿಂದ ಈಗಾಗಲೇ ಹೃದಯ ಸಮಸ್ಯೆ ಇರುವವರು ಈ ಅಭ್ಯಾಸವನ್ನು ಬಿಡಬೇಕು. ಅಷ್ಟು ಟೀ ಪ್ರಿಯರಾಗಿದ್ದರೆ, ಸ್ವಲ್ಪ ಸಮಯದ ಬಳಿಕ ಚಹಾ ಕುಡಿಯಬಹುದು, ಆದರೆ ತಕ್ಷಣ ಕುಡಿಯುವುದು ನಿಮ್ಮ ಹೃದಯಕ್ಕೆ ಹಾನಿ ಮಾಡುತ್ತದೆ.

ಜೀರ್ಣಾಂಗ ವ್ಯವಸ್ಥೆಗೆ ತೊಂದರೆಗಳು:
ಊಟವಾದ ಕೂಡಲೇ ಚಹಾ ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯು ದುರ್ಬಲಗೊಳ್ಳುತ್ತದೆ. ದೇಹದಲ್ಲಿ ಆಮ್ಲ ಅಥವಾ ಆಸಿಡಿಕ್ ಪ್ರಮಾಣವನ್ನು ಹೆಚ್ಚಿಸುತ್ತದೆ. ಇದರಿಂದಾಗಿ ವ್ಯಕ್ತಿಯು ಆಹಾರವನ್ನು ಜೀರ್ಣಿಸಿಕೊಳ್ಳಲು ತೊಂದರೆ ಅನುಭವಿಸುತ್ತಾನೆ. ಜೀರ್ಣ ಪ್ರಕ್ರಿಯೆ ವಿಳಂಬವಾಗಬಹುದು. ಅಜೀರ್ಣ ಸಮಸ್ಯೆ ಕಾಡಬಹುದು.

ಕಬ್ಬಿಣದ ಕೊರತೆ:
ಊಟ ಮಾಡಿದ ನಂತರ ಚಹಾ ಕುಡಿಯುವುದರಿಂದ ದೇಹದಲ್ಲಿ ಕಬ್ಬಿಣದ ಕೊರತೆಯೂ ಉಂಟಾಗುತ್ತದೆ. ಚಹಾದಲ್ಲಿ ಕಂಡುಬರುವ ಫೀನಾಲಿಕ್ ಸಂಯುಕ್ತವು ಆಹಾರದಲ್ಲಿನ ಕಬ್ಬಿಣದ ಅಂಶ ದೇಹ ಹೀರಿಕೊಳ್ಳುವುದನ್ನು ಅಡ್ಡಿಪಡಿಸುತ್ತದೆ. ಜೊತೆಗೆ ಜೊತೆಗೆ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಾಧ್ಯವಾಗುವುದಿಲ್ಲ, ಇದು ರಕ್ತಹೀನತೆಯ ಸಮಸ್ಯೆಗೆ ಕಾರಣವಾಗಬಹುದು.

ತಲೆನೋವು ಸಮಸ್ಯೆ:
ಸಾಮಾನ್ಯವಾಗಿ ಜನರು ತಲೆನೋವು ಬಂದಾಗ ಚಹಾ ಸೇವಿಸುತ್ತಾರೆ. ತಲೆನೋವನ್ನು ಕಡಿಮೆಮಾಡಲು ಇದು ಅತ್ಯುತ್ತಮ ಮನೆಮದ್ದು ಎಂದು ಪರಿಗಣಿಸಲಾಗಿದೆ. ಆದರೆ ಊಟದ ನಂತರ ಚಹಾ ಸೇವಿಸಿದರೆ ದೇಹದಲ್ಲಿ ಗ್ಯಾಸ್ ಅಥವಾ ಅನಿಲ ಉತ್ಪತ್ತಿಯಾಗುವುದರಿಂದ ತಲೆನೋವಿನ ಸಮಸ್ಯೆ ಉದ್ಭವಿಸಬಹುದು.

ಈ ವಿಷಯಗಳನ್ನು ನೆನಪಿನಲ್ಲಿಡಿ:
ನಿಮಗೆ ಚಹಾ ಇಷ್ಟವಾಗಿದ್ದರೆ , ಊಟ ಮಾಡಿದ 1-2 ಗಂಟೆಗಳ ನಂತರ ಕುಡಿಯಬಹುದು. ಆಗ ಮೇಲಿನ ಸಮಸ್ಯೆಗಳು ಉದ್ಭವಿಸುವುದು ಕಡಿಮೆಯಾಗುವುದು. ಇದು ಊಟ ಮಾಡಿದ ತಕ್ಷಣ ಟೀ ಬೇಕು ಎನ್ನುವವರಿಗಾಗಿ ಕಿವಿ ಮಾತು.
(Kannada Copy of Boldsky Kannada)
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 12:01 pm
HK News Staffer
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm