ಬ್ರೇಕಿಂಗ್ ನ್ಯೂಸ್
21-07-21 01:45 pm Reena TK, BoldSky Kannada ಡಾಕ್ಟರ್ಸ್ ನೋಟ್
ಕಿವಿಯಲ್ಲಿ ಫಂಗಸ್ ಆಗುವುದು ಇಯರ್ ಫಂಗಲ್ ಇನ್ಫೆಕ್ಷನ್ ಅನೇಕರನ್ನು ಕಾಡುವ ಕಿವಿಯ ಸಮಸ್ಯೆಯಾಗಿದೆ, ಇದನ್ನು ವೈದ್ಯಕೀಯ ಭಾಷೆಯಲ್ಲಿ otomycosis (ಒಟೊಮೈಕೋಸಿಸ್) ಎಂದು ಕರೆಯಲಾಗುವುದು.
ಕಿವಿಯ ಫಂಗಸ್ ಸೋಂಕು ಎಂದರೇನು? ಲಕ್ಷಣಗಳೇನು, ಯಾರಿಗೆ ಈ ಸಮಸ್ಯೆ ಹೆಚ್ಚಾಗಿ ಕಾಡುವುದು, ತಡೆಗಟ್ಟುವುದು ಹೇಗೆ? ಎಂಬ ಮಾಹಿತಿ ಇಲ್ಲಿದೆ ನೋಡಿ:
ಕಿವಿಯಲ್ಲಿ ಫಂಗಸ್ ಸಮಸ್ಯೆ ಉಂಟಾಗಿದೆ ಎಂದು ಸೂಚಿಸುವ ಲಕ್ಷಣಗಳು
* ಕಿವಿಯಲ್ಲಿ ಒಂಥರಾ ತುರಿಕೆ ಕಂಡು ಬರುವುದು. ತುಂಬಾ ಹೆಚ್ಚಾದರೆ ನೋವು ಕಂಡು ಬರುವುದು.
* ಕಿವಿಯ ಒಳಭಾಗದ ಸಿಪ್ಪೆ ಏಳುವುದು
* ಕಿವಿಯಲ್ಲಿ ಗುಗ್ಗೆ ತುಂಬಾ ಇರದಿದ್ದರೂ ಕಿವಿಯಲ್ಲಿ ತುಂಬಾ ತುರಿಕೆ, ಕಿರಿಕಿರಿ ಉಂಟಾಗುವುದು.
* ಊತ * ಕಿವಿ ಒಳಗ್ಗೆ ಕೆಂಪಾಗುವುದು
* ಕಿವಿ ಬಂದ್ ಆದಂತೆ ಅನಿಸುವುದು
* ಕೇಳುವುದಕ್ಕೆ ತೊಂದರೆ

ಯಾರಿಗೆ ಫಂಗಲ್ ಇಯರ್ ಇನ್ಫೆಕ್ಷನ್ ಸೋಂಕು ಬರುತ್ತದೆ?
ಉಷ್ಣವಲಯದಲ್ಲಿ ವಾಸಿಸುವವರಲ್ಲಿ ಈ ರೀತಿಯ ಸಮಸ್ಯೆ ಕಂಡು ಬರುತ್ತದೆ. ಅಲ್ಲದೆ ವಾಟರ್ ಸ್ಪೋರ್ಟ್ಸ್ನಲ್ಲಿ ಇರುವವರಿಗೆ, ಸ್ವಿಮ್ಮಿಂಗ್ ಮಾಡುವವರಿಗೆ ಈ ಸಮಸ್ಯೆ ಕಂಡು ಬರುವುದು.
ಫಂಗಲ್ ಇಯರ್ ಇನ್ಫೆಕ್ಷನ್ ಹೇಗೆ ಉಂಟಾಗುತ್ತದೆ?
ಕಿವಿಯಲ್ಲಿ ಗುಗ್ಗೆ ಬ್ಯಾಕ್ಟಿರಿಯಾಗಳಿಂದ ಕಿವಿಯನ್ನು ರಕ್ಷಣೆ ಮಾಡುತ್ತದೆ. ಗುಗ್ಗೆ ಕಮ್ಮಿಯಾದಾಗ ಬ್ಯಾಕ್ಟಿರಿಯಾಗಳು ಕಿವಿಯೊಳಗೆ ಹೋಗಿ ಈ ರೀತಿಯ ಸಮಸ್ಯೆ ಉಂಟಾಗುತ್ತದೆ.
* ಅಧಿಕ ಉಷ್ಣಾಂಷ ಇರುವ ಹಾಗೂ ತುಂಬಾ ಶೀತ ಇರುವ ಕಡೆ ವಾಸಿಸುವವರಿಗೆ ಈ ರೀತಿಯ ಸಮಸ್ಯೆ ಕಂಡು ಬರುವುದು.
* ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಅಥವಾ ಕಿವಿಯ ಸಮಸ್ಯೆ ಇರುವವರಲ್ಲಿ ಈ ಸಮಸ್ಯೆ ಕಂಡು ಬರುವುದು.
* ಗಂಭೀರ ಚರ್ಮ ಸಮಸ್ಯೆ ಇರುವವರಲ್ಲಿಯೂ ಈ ಸಮಸ್ಯೆ ಕಂಡು ಬರುವುದು.

ಯಾವಾಗ ವೈದ್ಯರನ್ನು ಕಾಣಬೇಕು?
ಕಿವಿಯಲ್ಲಿ ನೋವು, ತುರಿಕೆ ಅಥವಾ ಇತರ ಕಿರಿಕಿರಿ ಇದ್ದರೆ ವೈದ್ಯರನ್ನು ಕಾಣಬೇಕು. ವೈದ್ಯರು ಕಿವಿ, ಕಿವಿ ತಮಟೆ ಪರೀಕ್ಷಿಸಿ ಸೂಕ್ತ ಔಷಧಿ ಸೂಚಿಸಬಹುದು.
*ಕಿವಿಯನ್ನು ಸ್ವಚ್ಛ ಮಾಡಿ ಮಾತ್ರೆ ನೀಡಬಹುದು
*ಕೆಲವರಿಗೆ ಇಯರ್ ಡ್ರಾಪ್ ನೀಡಬಹುದು (ಕಿವಿ ಸಮಸ್ಯೆ ತುಂಬಾ ಇದ್ದರೆ ಮಾತ್ರ ಡ್ರಾಪ್ ನೀಡುತ್ತಾರೆ) ಹಾಗೂ ಈ ಸಮಸ್ಯೆ ತಡೆಗಟ್ಟಲು ಏನು ಮಾಡಬೇಕೆಂಬ ಸಲಹೆ ನೀಡುತ್ತಾರೆ.

ತಡೆಗಟ್ಟಲು ಏನು ಮಾಡಬೇಕು?
* ಸ್ವಿಮ್ಮಿಂಗ್ ಮಾಡುವಾಗ ಅಥವಾ ಸರ್ಫಿಂಗ್ ಮಾಡುವಾಗ ಕಿವಿಗೆ ನೀರು ನುಗ್ಗದಂತೆ ಎಚ್ಚರವಹಿಸಿ
* ಸ್ನಾನ ಮಾಡಿದ ಬಳಿಕ ಕಿವಿಯಲ್ಲಿರುವ ನೀರಿನಂಶ ಮೃದುವಾದ ಟವಲ್ನಿಂದ ತೆಗೆಯಿರಿ (ಬಡ್ಸ್ ಬಳಸಬೇಡಿ, ಬಳಸಿದರೆ ಸಮಸ್ಯೆ ಮತ್ತಷ್ಟು ಹೆಚ್ಚುವುದು)
* ಹತ್ತಿಯ ಉಂಡೆಗಳನ್ನು ಕಿವಿಗೆ ಇಡಬೇಡಿ (ಸ್ನಾನ ಮಾಡುವಾಗ ಮಾತ್ರ ಇಡಿ)
* ಕಿವಿಯನ್ನು ತುರಿಸುವುದು, ಉಜ್ಜುವುದು ಮಾಡಬೇಡಿ
* ಕಿವಿಗೆ ನೀರು ಹೋದರೆ acetic acid ಇಯರ್ ಡ್ರಾಪ್ ಬಳಸಿ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm