ಬ್ರೇಕಿಂಗ್ ನ್ಯೂಸ್
21-07-21 01:45 pm Reena TK, BoldSky Kannada ಡಾಕ್ಟರ್ಸ್ ನೋಟ್
ಕಿವಿಯಲ್ಲಿ ಫಂಗಸ್ ಆಗುವುದು ಇಯರ್ ಫಂಗಲ್ ಇನ್ಫೆಕ್ಷನ್ ಅನೇಕರನ್ನು ಕಾಡುವ ಕಿವಿಯ ಸಮಸ್ಯೆಯಾಗಿದೆ, ಇದನ್ನು ವೈದ್ಯಕೀಯ ಭಾಷೆಯಲ್ಲಿ otomycosis (ಒಟೊಮೈಕೋಸಿಸ್) ಎಂದು ಕರೆಯಲಾಗುವುದು.
ಕಿವಿಯ ಫಂಗಸ್ ಸೋಂಕು ಎಂದರೇನು? ಲಕ್ಷಣಗಳೇನು, ಯಾರಿಗೆ ಈ ಸಮಸ್ಯೆ ಹೆಚ್ಚಾಗಿ ಕಾಡುವುದು, ತಡೆಗಟ್ಟುವುದು ಹೇಗೆ? ಎಂಬ ಮಾಹಿತಿ ಇಲ್ಲಿದೆ ನೋಡಿ:
ಕಿವಿಯಲ್ಲಿ ಫಂಗಸ್ ಸಮಸ್ಯೆ ಉಂಟಾಗಿದೆ ಎಂದು ಸೂಚಿಸುವ ಲಕ್ಷಣಗಳು
* ಕಿವಿಯಲ್ಲಿ ಒಂಥರಾ ತುರಿಕೆ ಕಂಡು ಬರುವುದು. ತುಂಬಾ ಹೆಚ್ಚಾದರೆ ನೋವು ಕಂಡು ಬರುವುದು.
* ಕಿವಿಯ ಒಳಭಾಗದ ಸಿಪ್ಪೆ ಏಳುವುದು
* ಕಿವಿಯಲ್ಲಿ ಗುಗ್ಗೆ ತುಂಬಾ ಇರದಿದ್ದರೂ ಕಿವಿಯಲ್ಲಿ ತುಂಬಾ ತುರಿಕೆ, ಕಿರಿಕಿರಿ ಉಂಟಾಗುವುದು.
* ಊತ * ಕಿವಿ ಒಳಗ್ಗೆ ಕೆಂಪಾಗುವುದು
* ಕಿವಿ ಬಂದ್ ಆದಂತೆ ಅನಿಸುವುದು
* ಕೇಳುವುದಕ್ಕೆ ತೊಂದರೆ

ಯಾರಿಗೆ ಫಂಗಲ್ ಇಯರ್ ಇನ್ಫೆಕ್ಷನ್ ಸೋಂಕು ಬರುತ್ತದೆ?
ಉಷ್ಣವಲಯದಲ್ಲಿ ವಾಸಿಸುವವರಲ್ಲಿ ಈ ರೀತಿಯ ಸಮಸ್ಯೆ ಕಂಡು ಬರುತ್ತದೆ. ಅಲ್ಲದೆ ವಾಟರ್ ಸ್ಪೋರ್ಟ್ಸ್ನಲ್ಲಿ ಇರುವವರಿಗೆ, ಸ್ವಿಮ್ಮಿಂಗ್ ಮಾಡುವವರಿಗೆ ಈ ಸಮಸ್ಯೆ ಕಂಡು ಬರುವುದು.
ಫಂಗಲ್ ಇಯರ್ ಇನ್ಫೆಕ್ಷನ್ ಹೇಗೆ ಉಂಟಾಗುತ್ತದೆ?
ಕಿವಿಯಲ್ಲಿ ಗುಗ್ಗೆ ಬ್ಯಾಕ್ಟಿರಿಯಾಗಳಿಂದ ಕಿವಿಯನ್ನು ರಕ್ಷಣೆ ಮಾಡುತ್ತದೆ. ಗುಗ್ಗೆ ಕಮ್ಮಿಯಾದಾಗ ಬ್ಯಾಕ್ಟಿರಿಯಾಗಳು ಕಿವಿಯೊಳಗೆ ಹೋಗಿ ಈ ರೀತಿಯ ಸಮಸ್ಯೆ ಉಂಟಾಗುತ್ತದೆ.
* ಅಧಿಕ ಉಷ್ಣಾಂಷ ಇರುವ ಹಾಗೂ ತುಂಬಾ ಶೀತ ಇರುವ ಕಡೆ ವಾಸಿಸುವವರಿಗೆ ಈ ರೀತಿಯ ಸಮಸ್ಯೆ ಕಂಡು ಬರುವುದು.
* ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಅಥವಾ ಕಿವಿಯ ಸಮಸ್ಯೆ ಇರುವವರಲ್ಲಿ ಈ ಸಮಸ್ಯೆ ಕಂಡು ಬರುವುದು.
* ಗಂಭೀರ ಚರ್ಮ ಸಮಸ್ಯೆ ಇರುವವರಲ್ಲಿಯೂ ಈ ಸಮಸ್ಯೆ ಕಂಡು ಬರುವುದು.

ಯಾವಾಗ ವೈದ್ಯರನ್ನು ಕಾಣಬೇಕು?
ಕಿವಿಯಲ್ಲಿ ನೋವು, ತುರಿಕೆ ಅಥವಾ ಇತರ ಕಿರಿಕಿರಿ ಇದ್ದರೆ ವೈದ್ಯರನ್ನು ಕಾಣಬೇಕು. ವೈದ್ಯರು ಕಿವಿ, ಕಿವಿ ತಮಟೆ ಪರೀಕ್ಷಿಸಿ ಸೂಕ್ತ ಔಷಧಿ ಸೂಚಿಸಬಹುದು.
*ಕಿವಿಯನ್ನು ಸ್ವಚ್ಛ ಮಾಡಿ ಮಾತ್ರೆ ನೀಡಬಹುದು
*ಕೆಲವರಿಗೆ ಇಯರ್ ಡ್ರಾಪ್ ನೀಡಬಹುದು (ಕಿವಿ ಸಮಸ್ಯೆ ತುಂಬಾ ಇದ್ದರೆ ಮಾತ್ರ ಡ್ರಾಪ್ ನೀಡುತ್ತಾರೆ) ಹಾಗೂ ಈ ಸಮಸ್ಯೆ ತಡೆಗಟ್ಟಲು ಏನು ಮಾಡಬೇಕೆಂಬ ಸಲಹೆ ನೀಡುತ್ತಾರೆ.

ತಡೆಗಟ್ಟಲು ಏನು ಮಾಡಬೇಕು?
* ಸ್ವಿಮ್ಮಿಂಗ್ ಮಾಡುವಾಗ ಅಥವಾ ಸರ್ಫಿಂಗ್ ಮಾಡುವಾಗ ಕಿವಿಗೆ ನೀರು ನುಗ್ಗದಂತೆ ಎಚ್ಚರವಹಿಸಿ
* ಸ್ನಾನ ಮಾಡಿದ ಬಳಿಕ ಕಿವಿಯಲ್ಲಿರುವ ನೀರಿನಂಶ ಮೃದುವಾದ ಟವಲ್ನಿಂದ ತೆಗೆಯಿರಿ (ಬಡ್ಸ್ ಬಳಸಬೇಡಿ, ಬಳಸಿದರೆ ಸಮಸ್ಯೆ ಮತ್ತಷ್ಟು ಹೆಚ್ಚುವುದು)
* ಹತ್ತಿಯ ಉಂಡೆಗಳನ್ನು ಕಿವಿಗೆ ಇಡಬೇಡಿ (ಸ್ನಾನ ಮಾಡುವಾಗ ಮಾತ್ರ ಇಡಿ)
* ಕಿವಿಯನ್ನು ತುರಿಸುವುದು, ಉಜ್ಜುವುದು ಮಾಡಬೇಡಿ
* ಕಿವಿಗೆ ನೀರು ಹೋದರೆ acetic acid ಇಯರ್ ಡ್ರಾಪ್ ಬಳಸಿ.
30-08-26 10:09 pm
HK News Desk
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
31-08-26 12:01 pm
HK News Staffer
ವೈಟ್ ಫೀಲ್ಡ್ ಬೇಡ, ಡಾರ್ಕ್ ಫೀಲ್ಡ್ ಮಾಡ್ರೀ..! ಎತ್ತ...
31-08-26 09:51 am
ಸರ್ಕಾರಿ ನಿವೇಶನ ಸಿಗದ ನೋವು, ವಿವಾದದ ಕಾವು ; ಇಬ್ಬರ...
29-08-26 01:02 pm
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm