ಬ್ರೇಕಿಂಗ್ ನ್ಯೂಸ್
21-07-21 01:45 pm Reena TK, BoldSky Kannada ಡಾಕ್ಟರ್ಸ್ ನೋಟ್
ಕಿವಿಯಲ್ಲಿ ಫಂಗಸ್ ಆಗುವುದು ಇಯರ್ ಫಂಗಲ್ ಇನ್ಫೆಕ್ಷನ್ ಅನೇಕರನ್ನು ಕಾಡುವ ಕಿವಿಯ ಸಮಸ್ಯೆಯಾಗಿದೆ, ಇದನ್ನು ವೈದ್ಯಕೀಯ ಭಾಷೆಯಲ್ಲಿ otomycosis (ಒಟೊಮೈಕೋಸಿಸ್) ಎಂದು ಕರೆಯಲಾಗುವುದು.
ಕಿವಿಯ ಫಂಗಸ್ ಸೋಂಕು ಎಂದರೇನು? ಲಕ್ಷಣಗಳೇನು, ಯಾರಿಗೆ ಈ ಸಮಸ್ಯೆ ಹೆಚ್ಚಾಗಿ ಕಾಡುವುದು, ತಡೆಗಟ್ಟುವುದು ಹೇಗೆ? ಎಂಬ ಮಾಹಿತಿ ಇಲ್ಲಿದೆ ನೋಡಿ:
ಕಿವಿಯಲ್ಲಿ ಫಂಗಸ್ ಸಮಸ್ಯೆ ಉಂಟಾಗಿದೆ ಎಂದು ಸೂಚಿಸುವ ಲಕ್ಷಣಗಳು
* ಕಿವಿಯಲ್ಲಿ ಒಂಥರಾ ತುರಿಕೆ ಕಂಡು ಬರುವುದು. ತುಂಬಾ ಹೆಚ್ಚಾದರೆ ನೋವು ಕಂಡು ಬರುವುದು.
* ಕಿವಿಯ ಒಳಭಾಗದ ಸಿಪ್ಪೆ ಏಳುವುದು
* ಕಿವಿಯಲ್ಲಿ ಗುಗ್ಗೆ ತುಂಬಾ ಇರದಿದ್ದರೂ ಕಿವಿಯಲ್ಲಿ ತುಂಬಾ ತುರಿಕೆ, ಕಿರಿಕಿರಿ ಉಂಟಾಗುವುದು.
* ಊತ * ಕಿವಿ ಒಳಗ್ಗೆ ಕೆಂಪಾಗುವುದು
* ಕಿವಿ ಬಂದ್ ಆದಂತೆ ಅನಿಸುವುದು
* ಕೇಳುವುದಕ್ಕೆ ತೊಂದರೆ

ಯಾರಿಗೆ ಫಂಗಲ್ ಇಯರ್ ಇನ್ಫೆಕ್ಷನ್ ಸೋಂಕು ಬರುತ್ತದೆ?
ಉಷ್ಣವಲಯದಲ್ಲಿ ವಾಸಿಸುವವರಲ್ಲಿ ಈ ರೀತಿಯ ಸಮಸ್ಯೆ ಕಂಡು ಬರುತ್ತದೆ. ಅಲ್ಲದೆ ವಾಟರ್ ಸ್ಪೋರ್ಟ್ಸ್ನಲ್ಲಿ ಇರುವವರಿಗೆ, ಸ್ವಿಮ್ಮಿಂಗ್ ಮಾಡುವವರಿಗೆ ಈ ಸಮಸ್ಯೆ ಕಂಡು ಬರುವುದು.
ಫಂಗಲ್ ಇಯರ್ ಇನ್ಫೆಕ್ಷನ್ ಹೇಗೆ ಉಂಟಾಗುತ್ತದೆ?
ಕಿವಿಯಲ್ಲಿ ಗುಗ್ಗೆ ಬ್ಯಾಕ್ಟಿರಿಯಾಗಳಿಂದ ಕಿವಿಯನ್ನು ರಕ್ಷಣೆ ಮಾಡುತ್ತದೆ. ಗುಗ್ಗೆ ಕಮ್ಮಿಯಾದಾಗ ಬ್ಯಾಕ್ಟಿರಿಯಾಗಳು ಕಿವಿಯೊಳಗೆ ಹೋಗಿ ಈ ರೀತಿಯ ಸಮಸ್ಯೆ ಉಂಟಾಗುತ್ತದೆ.
* ಅಧಿಕ ಉಷ್ಣಾಂಷ ಇರುವ ಹಾಗೂ ತುಂಬಾ ಶೀತ ಇರುವ ಕಡೆ ವಾಸಿಸುವವರಿಗೆ ಈ ರೀತಿಯ ಸಮಸ್ಯೆ ಕಂಡು ಬರುವುದು.
* ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಅಥವಾ ಕಿವಿಯ ಸಮಸ್ಯೆ ಇರುವವರಲ್ಲಿ ಈ ಸಮಸ್ಯೆ ಕಂಡು ಬರುವುದು.
* ಗಂಭೀರ ಚರ್ಮ ಸಮಸ್ಯೆ ಇರುವವರಲ್ಲಿಯೂ ಈ ಸಮಸ್ಯೆ ಕಂಡು ಬರುವುದು.

ಯಾವಾಗ ವೈದ್ಯರನ್ನು ಕಾಣಬೇಕು?
ಕಿವಿಯಲ್ಲಿ ನೋವು, ತುರಿಕೆ ಅಥವಾ ಇತರ ಕಿರಿಕಿರಿ ಇದ್ದರೆ ವೈದ್ಯರನ್ನು ಕಾಣಬೇಕು. ವೈದ್ಯರು ಕಿವಿ, ಕಿವಿ ತಮಟೆ ಪರೀಕ್ಷಿಸಿ ಸೂಕ್ತ ಔಷಧಿ ಸೂಚಿಸಬಹುದು.
*ಕಿವಿಯನ್ನು ಸ್ವಚ್ಛ ಮಾಡಿ ಮಾತ್ರೆ ನೀಡಬಹುದು
*ಕೆಲವರಿಗೆ ಇಯರ್ ಡ್ರಾಪ್ ನೀಡಬಹುದು (ಕಿವಿ ಸಮಸ್ಯೆ ತುಂಬಾ ಇದ್ದರೆ ಮಾತ್ರ ಡ್ರಾಪ್ ನೀಡುತ್ತಾರೆ) ಹಾಗೂ ಈ ಸಮಸ್ಯೆ ತಡೆಗಟ್ಟಲು ಏನು ಮಾಡಬೇಕೆಂಬ ಸಲಹೆ ನೀಡುತ್ತಾರೆ.

ತಡೆಗಟ್ಟಲು ಏನು ಮಾಡಬೇಕು?
* ಸ್ವಿಮ್ಮಿಂಗ್ ಮಾಡುವಾಗ ಅಥವಾ ಸರ್ಫಿಂಗ್ ಮಾಡುವಾಗ ಕಿವಿಗೆ ನೀರು ನುಗ್ಗದಂತೆ ಎಚ್ಚರವಹಿಸಿ
* ಸ್ನಾನ ಮಾಡಿದ ಬಳಿಕ ಕಿವಿಯಲ್ಲಿರುವ ನೀರಿನಂಶ ಮೃದುವಾದ ಟವಲ್ನಿಂದ ತೆಗೆಯಿರಿ (ಬಡ್ಸ್ ಬಳಸಬೇಡಿ, ಬಳಸಿದರೆ ಸಮಸ್ಯೆ ಮತ್ತಷ್ಟು ಹೆಚ್ಚುವುದು)
* ಹತ್ತಿಯ ಉಂಡೆಗಳನ್ನು ಕಿವಿಗೆ ಇಡಬೇಡಿ (ಸ್ನಾನ ಮಾಡುವಾಗ ಮಾತ್ರ ಇಡಿ)
* ಕಿವಿಯನ್ನು ತುರಿಸುವುದು, ಉಜ್ಜುವುದು ಮಾಡಬೇಡಿ
* ಕಿವಿಗೆ ನೀರು ಹೋದರೆ acetic acid ಇಯರ್ ಡ್ರಾಪ್ ಬಳಸಿ.
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm