ಬ್ರೇಕಿಂಗ್ ನ್ಯೂಸ್
21-07-21 01:45 pm Reena TK, BoldSky Kannada ಡಾಕ್ಟರ್ಸ್ ನೋಟ್
ಕಿವಿಯಲ್ಲಿ ಫಂಗಸ್ ಆಗುವುದು ಇಯರ್ ಫಂಗಲ್ ಇನ್ಫೆಕ್ಷನ್ ಅನೇಕರನ್ನು ಕಾಡುವ ಕಿವಿಯ ಸಮಸ್ಯೆಯಾಗಿದೆ, ಇದನ್ನು ವೈದ್ಯಕೀಯ ಭಾಷೆಯಲ್ಲಿ otomycosis (ಒಟೊಮೈಕೋಸಿಸ್) ಎಂದು ಕರೆಯಲಾಗುವುದು.
ಕಿವಿಯ ಫಂಗಸ್ ಸೋಂಕು ಎಂದರೇನು? ಲಕ್ಷಣಗಳೇನು, ಯಾರಿಗೆ ಈ ಸಮಸ್ಯೆ ಹೆಚ್ಚಾಗಿ ಕಾಡುವುದು, ತಡೆಗಟ್ಟುವುದು ಹೇಗೆ? ಎಂಬ ಮಾಹಿತಿ ಇಲ್ಲಿದೆ ನೋಡಿ:
ಕಿವಿಯಲ್ಲಿ ಫಂಗಸ್ ಸಮಸ್ಯೆ ಉಂಟಾಗಿದೆ ಎಂದು ಸೂಚಿಸುವ ಲಕ್ಷಣಗಳು
* ಕಿವಿಯಲ್ಲಿ ಒಂಥರಾ ತುರಿಕೆ ಕಂಡು ಬರುವುದು. ತುಂಬಾ ಹೆಚ್ಚಾದರೆ ನೋವು ಕಂಡು ಬರುವುದು.
* ಕಿವಿಯ ಒಳಭಾಗದ ಸಿಪ್ಪೆ ಏಳುವುದು
* ಕಿವಿಯಲ್ಲಿ ಗುಗ್ಗೆ ತುಂಬಾ ಇರದಿದ್ದರೂ ಕಿವಿಯಲ್ಲಿ ತುಂಬಾ ತುರಿಕೆ, ಕಿರಿಕಿರಿ ಉಂಟಾಗುವುದು.
* ಊತ * ಕಿವಿ ಒಳಗ್ಗೆ ಕೆಂಪಾಗುವುದು
* ಕಿವಿ ಬಂದ್ ಆದಂತೆ ಅನಿಸುವುದು
* ಕೇಳುವುದಕ್ಕೆ ತೊಂದರೆ

ಯಾರಿಗೆ ಫಂಗಲ್ ಇಯರ್ ಇನ್ಫೆಕ್ಷನ್ ಸೋಂಕು ಬರುತ್ತದೆ?
ಉಷ್ಣವಲಯದಲ್ಲಿ ವಾಸಿಸುವವರಲ್ಲಿ ಈ ರೀತಿಯ ಸಮಸ್ಯೆ ಕಂಡು ಬರುತ್ತದೆ. ಅಲ್ಲದೆ ವಾಟರ್ ಸ್ಪೋರ್ಟ್ಸ್ನಲ್ಲಿ ಇರುವವರಿಗೆ, ಸ್ವಿಮ್ಮಿಂಗ್ ಮಾಡುವವರಿಗೆ ಈ ಸಮಸ್ಯೆ ಕಂಡು ಬರುವುದು.
ಫಂಗಲ್ ಇಯರ್ ಇನ್ಫೆಕ್ಷನ್ ಹೇಗೆ ಉಂಟಾಗುತ್ತದೆ?
ಕಿವಿಯಲ್ಲಿ ಗುಗ್ಗೆ ಬ್ಯಾಕ್ಟಿರಿಯಾಗಳಿಂದ ಕಿವಿಯನ್ನು ರಕ್ಷಣೆ ಮಾಡುತ್ತದೆ. ಗುಗ್ಗೆ ಕಮ್ಮಿಯಾದಾಗ ಬ್ಯಾಕ್ಟಿರಿಯಾಗಳು ಕಿವಿಯೊಳಗೆ ಹೋಗಿ ಈ ರೀತಿಯ ಸಮಸ್ಯೆ ಉಂಟಾಗುತ್ತದೆ.
* ಅಧಿಕ ಉಷ್ಣಾಂಷ ಇರುವ ಹಾಗೂ ತುಂಬಾ ಶೀತ ಇರುವ ಕಡೆ ವಾಸಿಸುವವರಿಗೆ ಈ ರೀತಿಯ ಸಮಸ್ಯೆ ಕಂಡು ಬರುವುದು.
* ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಅಥವಾ ಕಿವಿಯ ಸಮಸ್ಯೆ ಇರುವವರಲ್ಲಿ ಈ ಸಮಸ್ಯೆ ಕಂಡು ಬರುವುದು.
* ಗಂಭೀರ ಚರ್ಮ ಸಮಸ್ಯೆ ಇರುವವರಲ್ಲಿಯೂ ಈ ಸಮಸ್ಯೆ ಕಂಡು ಬರುವುದು.

ಯಾವಾಗ ವೈದ್ಯರನ್ನು ಕಾಣಬೇಕು?
ಕಿವಿಯಲ್ಲಿ ನೋವು, ತುರಿಕೆ ಅಥವಾ ಇತರ ಕಿರಿಕಿರಿ ಇದ್ದರೆ ವೈದ್ಯರನ್ನು ಕಾಣಬೇಕು. ವೈದ್ಯರು ಕಿವಿ, ಕಿವಿ ತಮಟೆ ಪರೀಕ್ಷಿಸಿ ಸೂಕ್ತ ಔಷಧಿ ಸೂಚಿಸಬಹುದು.
*ಕಿವಿಯನ್ನು ಸ್ವಚ್ಛ ಮಾಡಿ ಮಾತ್ರೆ ನೀಡಬಹುದು
*ಕೆಲವರಿಗೆ ಇಯರ್ ಡ್ರಾಪ್ ನೀಡಬಹುದು (ಕಿವಿ ಸಮಸ್ಯೆ ತುಂಬಾ ಇದ್ದರೆ ಮಾತ್ರ ಡ್ರಾಪ್ ನೀಡುತ್ತಾರೆ) ಹಾಗೂ ಈ ಸಮಸ್ಯೆ ತಡೆಗಟ್ಟಲು ಏನು ಮಾಡಬೇಕೆಂಬ ಸಲಹೆ ನೀಡುತ್ತಾರೆ.

ತಡೆಗಟ್ಟಲು ಏನು ಮಾಡಬೇಕು?
* ಸ್ವಿಮ್ಮಿಂಗ್ ಮಾಡುವಾಗ ಅಥವಾ ಸರ್ಫಿಂಗ್ ಮಾಡುವಾಗ ಕಿವಿಗೆ ನೀರು ನುಗ್ಗದಂತೆ ಎಚ್ಚರವಹಿಸಿ
* ಸ್ನಾನ ಮಾಡಿದ ಬಳಿಕ ಕಿವಿಯಲ್ಲಿರುವ ನೀರಿನಂಶ ಮೃದುವಾದ ಟವಲ್ನಿಂದ ತೆಗೆಯಿರಿ (ಬಡ್ಸ್ ಬಳಸಬೇಡಿ, ಬಳಸಿದರೆ ಸಮಸ್ಯೆ ಮತ್ತಷ್ಟು ಹೆಚ್ಚುವುದು)
* ಹತ್ತಿಯ ಉಂಡೆಗಳನ್ನು ಕಿವಿಗೆ ಇಡಬೇಡಿ (ಸ್ನಾನ ಮಾಡುವಾಗ ಮಾತ್ರ ಇಡಿ)
* ಕಿವಿಯನ್ನು ತುರಿಸುವುದು, ಉಜ್ಜುವುದು ಮಾಡಬೇಡಿ
* ಕಿವಿಗೆ ನೀರು ಹೋದರೆ acetic acid ಇಯರ್ ಡ್ರಾಪ್ ಬಳಸಿ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm