ಬ್ರೇಕಿಂಗ್ ನ್ಯೂಸ್
30-09-21 12:07 pm Source: News 18 Kannada ಡಾಕ್ಟರ್ಸ್ ನೋಟ್
ಕರಿದ ತಿಂಡಿ ಮಾಡಿದ ಬಳಿಕ ಉಳಿದಬಳಕೆ ಮಾಡಿದ ಎಣ್ಣೆಯನ್ನು ಪುನಃ ಅಡುಗೆಗೆ ಬಳಕೆ ಮಾಡುವುದು ಸಾಮಾನ್ಯ. ಈ ಕರಿದ ಎಣ್ಣೆಯನ್ನು ಪಲ್ಯ, ಸಾರಿನ ಒಗ್ಗರಣೆಗೆ ಬಳಕೆ ಮಾಡುತ್ತಾರೆ. ಕೆಲವೊಮ್ಮೆ ಮತ್ತೊಮ್ಮೆ ಕರಿಯಲು ಕೂಡ ಬಳಸುತ್ತಾರೆ. ಆದರೆ, ಈ ರೀತಿ ಎಣ್ಣೆಗಳನ್ನು ಪದೇ ಪದೇ ಮರು ಬಳಕೆ ಮಾಡುವುದು ಸುರಕ್ಷಿತವೇ?
ಕರಿದ ಎಣ್ಣೆಯನ್ನು ಸಾಧಾರಣವಾಗಿ ಒಮ್ಮೆ ಬಳಕೆ ಮಾಡಿದರೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಅದನ್ನು ದೀರ್ಘ ಕಾಲದವರೆಗೆ ಬಿಟ್ಟು, ಮತ್ತೆ ಕರಿಯಲು ಅಥವಾ ಇನ್ನಿತರ ಅಡುಗೆಗೆ ಬಳಸುವುದು ಸುರಕ್ಷಿತವಲ್ಲ.
ದೀರ್ಘ ಕಾಲದ ಬಳಿಕೆ ಬಳಕೆ ಮಾಡಿದ ಎಣ್ಣೆಯನ್ನು ಮರು ಬಳಕೆ ಮಾಡುವುದರಿಂದ ಅನೇಕ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇದೆ. ಇವು ಕೆಟ್ಟ ಕೊಬ್ಬನ್ನು ಉತ್ಪತ್ತಿ ಮಡುತ್ತದೆ. ಇದರಿಂದ ಕ್ಯಾನ್ಸರ್ಗೆ ತುತ್ತಾಗುವ ಸಾಧ್ಯತೆ ಕೂಡ ಇದೆ.

ಕರಿದ ಎಣ್ಣೆಯನ್ನು ಅತಿಯಾಗಿ ಬಳಸುವುದರಿಂದ ಅಡ್ಡಪರಿಣಾಮಗಳು ಉಂಟಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಒಂದಕ್ಕಿಂತ ಹೆಚ್ಚು ಬಾರಿ ಬಳಸಿದ ಎಣ್ಣೆಯನ್ನು ಮರುಬಳಕೆ ಮಾಡುವುದು ಸೂಕ್ತವಲ್ಲ. ಇದರಿಂದ ಹೃದ್ರೋಗ, ಅಲ್ಜೈಮರ್ ಮತ್ತು ಪಾರ್ಕಿನ್ಸನ್ ಕಾಯಿಲೆಗೆ ತುತ್ತಾಗು ಸಾಧ್ಯತೆ ಇದೆ.
ಎಣ್ಣೆಯನ್ನು ದೀರ್ಘಕಾಲದವರೆಗೆ ಬಿಸಿ ಮಾಡಿದ್ದರೆ ಅದನ್ನು ಮತ್ತೆ ಹುರಿಯಲು ಬಳಸಬಾರದು. ಹಾಗೆಯೇ ಬೇಯಿಸಿದ ಆಹಾರಕ್ಕೆ ಕೂಡ ಇದರ ಬಳಕೆ ಮಾಡುವ ಮುನ್ನ ಎಚ್ಚರಿಕೆ ವಹಿಸಬೇಕು

ಅಡುಗೆ ಎಣ್ಣೆಗಳನ್ನು ಅತಿಯಾಗಿ ಕುದಿಸುವುದು ಆರೋಗ್ಯಕ್ಕೆ ಹಾನಿಕಾರಕ ಕೂಡ. ಇವುಗಳನ್ನು ಡುಗೆಯಲ್ಲಿ ಮರು ಬಳಕೆ ಮಾಡುವುದರಿಂದ ಕೆಲ ಹಾನಿಕಾರಕ ಅಂಶ ಬಿಡುಗಡೆಯಾಗುತ್ತದೆ.
ಇನ್ನು ಈ ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸುವ ಬದಲು ಬಯೋಡೀಸೆಲ್ ತಯಾರಿಸಿದರೆ ಮಾಲಿನ್ಯದ ಸಮಸ್ಯೆಯನ್ನು ತಪ್ಪಿಸಬಹುದು ಎನ್ನುತ್ತಾರೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ತಜ್ಞ ಪಿವಿಎನ್ ಮಾಧವ್.

ಕೇಂದ್ರ ಸರ್ಕಾರ ಕೂಡ ಕರಿದ ಎಣ್ಣೆಯನ್ನು ಜೈವಿಕ ಡೀಸೆಲ್ ಉತ್ಪಾದನೆಗೆ ಮಾತ್ರ ಬಳಸಲು 2018 ರಲ್ಲಿ ಆದೇಶ ಹೊರಡಿಸಿತು. ಅಲ್ಲದೇ ಈ ಎಣ್ಣೆಯಲ್ಲಿ ಹೇಗೆ ಡಿಸೇಲ್ ತಯಾರಿಸಬಹುದು ಎಂದು ಕೂಡ ವಿವರಿಸಿದ್ದರು.
ಅಡುಗೆ ಮಾಡಿದ ನಂತರ ಉಳಿದ ಎಣ್ಣೆಯನ್ನು ತಣ್ಣಗಾಗಿಸಿ ನಂತರ ಸ್ಟ್ರೈನರ್ ಮೂಲಕ ಗಾಳಿಯಾಡದ ಪಾತ್ರೆಯಲ್ಲಿ ಸುರಿಯಬೇಕು. ಆಗ ಆ ಎಣ್ಣೆಯಲ್ಲಿ ಯಾವುದೇ ಆಹಾರ ಕಣಗಳು ಇರುವುದಿಲ್ಲ.

ಎಣ್ಣೆಯನ್ನು ಮರುಬಳಕೆ ಮಾಡುವ ಮೊದಲು ಪ್ರತಿ ಬಾರಿ ಎಣ್ಣೆಯ ಬಣ್ಣ ಮತ್ತು ದಪ್ಪವನ್ನು ಪರೀಕ್ಷಿಸಬೇಕು. ಇಲ್ಲ ಆರೋಗ್ಯಕ್ಕೆ ಹಾನಿ ಹೆಚ್ಚು. ಈ ಹಿನ್ನಲೆ ಆರೋಗ್ಯ ದೃಷ್ಟಿಯಿಂದ ಈ ಬಗ್ಗೆ ಯೋಚಿಸಿ ಬಳಕೆ ಮಾಡಬೇಕು
01-06-26 09:44 pm
HK News Staffer
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
31-05-26 09:25 pm
HK News Staffer
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
01-06-26 07:05 pm
HK News Staffer
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
Bengaluru Mangaluru Vande Bharat: ಬೆಂಗಳೂರು–ಮಂ...
31-05-26 03:40 pm
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
01-06-26 08:16 pm
HK News Staffer
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm
ಬೀದಿ ಬದಿ ವ್ಯಾಪಾರಿಗೆ ನಿಂದಿಸಿ ವಿಡಿಯೋ ವೈರಲ್ ; ಸಾ...
31-05-26 05:06 pm
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm