ಬ್ರೇಕಿಂಗ್ ನ್ಯೂಸ್
23-04-22 11:23 pm Source: Vijayakarnataka ಡಾಕ್ಟರ್ಸ್ ನೋಟ್
ಒತ್ತಡದ ಜೀವನದಿಂದಾಗಿ ಜನರು ಸಮಾಧಾನವಾಗಿ ಕುಳಿತು ಊಟ ಮಾಡುವ ಕಾಲ ಹೋಯಿತು. ತರಾತುರಿಯಾಗಿ ಕೈಗೆ ಸಿಕ್ಕಿದ ಬ್ರೆಡ್, ಬನ್ ಗಳನ್ನು ತಿಂದು ಕಚೇರಿಗೆ ಧಾವಿಸುತ್ತಾರೆ. ಕೆಲಸದ ಮೇಲೆ ಏಕಾಗ್ರತೆ ಹೊಂದಬೇಕಾದರೆ ಹೊಟ್ಟೆ ತುಂಬಿರಬೇಕು. ಇಲ್ಲವಾದರೆ ಮನಸ್ಸು ಕೆಲಸದ ಮೇಲಲ್ಲ ಹೊಟ್ಟೆಯ ಮೇಲಿರುತ್ತದೆ.
ಬೆಳಗಿನ ಊಟವನ್ನು ಸ್ಕಿಪ್ ಮಾಡಿದಂತೆ ಮಧ್ಯಾಹ್ನದ ಊಟವನ್ನು ಸ್ಕಿಪ್ ಮಾಡುವಂತಿಲ್ಲ. ಹೀಗೆ ಸ್ಕಿಪ್ ಮಾಡುತ್ತಾ ಹೋದರೆ ಕಾಯಿಲೆಗಳನ್ನು ನಿಜವಾಗಿಯೂ ಸ್ವಾಗತಿಸುತ್ತೀರಿ. ಇನ್ನು ಬಹುತೇಕರು ರೆಡಿ ಫುಡ್ಗಳನ್ನು ಆರ್ಡರ್ ಮಾಡಿ ತರಿಸಿ ತಿನ್ನುತ್ತಾರೆ.
ಅನಾರೋಗ್ಯಕರವಾದ ತಿಂಡಿಗಳು ನಿಧಾನವಾಗಿ ಕಾಯಿಲೆಗಳನ್ನು ಸೃಷ್ಟಿಸುವ ಕಾರಣ ಸಮತೋಲಿತವಾದ ಆಹಾರಗಳನ್ನು ನೀವು ತಪ್ಪದೇ ಸೇವನೆ ಮಾಡಬೇಕು. ಮನೆಯಲ್ಲಿ ತಯಾರಿಸಿ ಆಹಾರ ತರಲು ಕಷ್ಟವಾದರೆ, ಲೇಖನದಲ್ಲಿ ಸುಲಭ ಮತ್ತು ಪೌಷ್ಟಿಕ ಆಹಾರಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಇಂತಹ ಆಹಾರಗಳು ನಿಮ್ಮ ಹೊಟ್ಟೆಯನ್ನು ತುಂಬಿಸಿ, ಆರೋಗ್ಯವನ್ನು ಕಾಪಾಡುತ್ತದೆ.
ಇಂತಹ ಆಹಾರ ನಿಮ್ಮ ಬಾಕ್ಸ್ನಲ್ಲಿರಲಿ
![]()
ನಿಮ್ಮ ಆರೋಗ್ಯದ ಜೊತೆ ಜೊತೆಗೆ ಹೊಟ್ಟೆ ತುಂಬಿಸುವ ಆಹಾರಗಳ ಪಟ್ಟಿ ಇಲ್ಲಿದೆ. ದೇಹಕ್ಕೆ ಶಕ್ತಿ ಮತ್ತು ಅಗತ್ಯ ಪೋಷಕಾಂಶಗಳನ್ನು ನೀಡುವ ಆಹಾರಗಳನ್ನು ಸೇವನೆ ಮಾಡುವುದು ಬಹಳ ಮುಖ್ಯ. ಈ ಬೇಸಿಗೆ ಕಾಲದಲ್ಲಿ ತಂಪಾದ ಹಣ್ಣು, ತರಕಾರಿಗಳನ್ನು ಸೇವನೆ ಮಾಡಿ.
ಪ್ರೋಟೀನ್ ಮತ್ತು ಕ್ಯಾಲ್ಸಿಯಂನಿಂದ ಸಮೃದ್ಧವಾಗಿರುವ ಸೌತೆಕಾಯಿ, ಟೊಮೊಟೊ, ಕ್ಯಾರೆಟ್, ಬ್ರೊಕೊಲಿ, ಓಟ್ಸ್, ಮೊಳಕೆ ಕಟ್ಟಿದ ಸಲಾಡ್ನಂತಹ ಆಹಾರಗಳನ್ನು ಆಯ್ಕೆ ಮಾಡಿಕೊಳ್ಳಿ. ಕಚ್ಚಾ ತರಕಾರಿಯ ಜೊತೆಗೆ ಮೊಸರನ್ನು ಸೇರಿಸಿ ಸೇವನೆ ಮಾಡಬಹುದು.
ಸ್ಮೂಥಿಗಳು
![]()
ದ್ರವ ರೂಪದ ಪಾನೀಯಗಳು ನಿಮ್ಮ ಹೊಟ್ಟೆಯನ್ನು ತುಂಬಿಸುತ್ತದೆ. ಪದೇ ಪದೇ ಹಸಿವಾಗುವುದನ್ನು ನಿಯಂತ್ರಿಸುತ್ತದೆ. ಆಫೀಸ್ನಲ್ಲಿ ಕಾಫಿ, ಟೀ ಗೆ ಪಯಾರ್ಯವಾಗಿ ನೀವು ಸ್ಮೂಥಿಯನ್ನು ಕೊಂಡೊಯ್ಯಬಹುದು.
ಆರೋಗ್ಯಕರವಾದ ಪಾಲಕ್, ಸೌತೆಕಾಯಿ, ಆಪಲ್, ಸಪೋಟ ಸ್ಮೂಥಿಗಳನ್ನು ತೆಗೆದುಕೊಂಡು ಹೋಗಿರಿ. ನೀವು ತಾಜಾ ಹಣ್ಣುಗಳನ್ನು ಚಿಕ್ಕದಾಗಿ ಕಟ್ ಮಾಡಿ ಕೂಡ ಸೇವನೆ ಮಾಡಬಹುದು. ಹೆಚ್ಚುವರಿ ಪ್ರೋಟೀನ್ಗಾಗಿ 4 ರಿಂದ 5 ಬಾದಾಮಿಯನ್ನು ರಾತ್ರಿ ನೆನಸಿ ಬೆಳಗ್ಗೆ ಬಾಕ್ಸ್ನಲ್ಲಿ ತೆಗೆದುಕೊಂಡು ಹೋಗಿ.
ಸಿಹಿ ಖಾದ್ಯ
![]()
ಬಹುತೇಕರಿಗೆ ಊಟದಲ್ಲಿ ಸಿಹಿ ಇಲ್ಲದಿದ್ದರೆ, ಊಟ ಅಪೂರ್ಣ ಎಂಬ ಭಾವನೆ ಹೊಂದಿರುತ್ತಾರೆ. ಅಂತವರು ಆರೋಗ್ಯಕರವಾದ ಸಿಹಿಯನ್ನು ಬಾಕ್ಸ್ನಲ್ಲಿ ಸೇರಿಸಿ. ತೆಂಗಿನ ಹಾಲಿನಿಂದ ತಯಾರಿಸಿದ ಪಾಯಸ ಅಥವಾ ಪೌಷ್ಟಿಕ ಆಹಾರವಾದ ರಾಗಿಯಿಂದ ತಯಾರಿಸಿದ ಲಡ್ಡುಗಳನ್ನು ತೆಗೆದುಕೊಂಡು ಹೋಗಿ. ಆದಷ್ಟು ಸಕ್ಕರೆಯ ಬದಲಾಗಿ ಬೆಲ್ಲವನ್ನು ಬೆರಸಿದ ಸಿಹಿ ತಿಂಡಿಗಳನ್ನು ಸೇವನೆ ಮಾಡಿ. ಇದರಿಂದ ನಿಮ್ಮ ತೂಕ ಮತ್ತು ಆರೋಗ್ಯ ಎರಡು ಕೂಡ ಕಾಪಾಡಬಹುದು.
ಕುರುಕಲು ತಿಂಡಿ
![]()
ಕೆಲಸದ ಸಮಯದಲ್ಲಿ ಕುರುಕಲು ತಿಂಡಿಯನ್ನು ತಿನ್ನುವುದನ್ನು ಕೆಲವರು ರೂಢಿಸಿಕೊಂಡಿರುತ್ತಾರೆ. ಅಂತವರು ಸಂಸ್ಕರಿಸಿದ ಆಹಾರಗಳನ್ನು ತಿನ್ನುವ ಬದಲಾಗಿ ದೇಹಕ್ಕೆ ಶಕ್ತಿಯನ್ನು ಒದಗಿಸುವ ಒಣ ಹಣ್ಣುಗಳನ್ನು ಸೇವನೆ ಮಾಡಿ.
ಬೆರಳೆಣಿಕೆಯಷ್ಟು ವಾಲ್ನಟ್, ಬಾದಾಮಿ, ಒಣ ದ್ರಾಕ್ಷಿ, ಅಂಜೂರವನ್ನು ಆಫೀಸ್ಗೆ ತೆಗೆದುಕೊಂಡು ಹೋಗಿ. ಇದು ಸಂಜೆಯ ಕುರುಕಲು ತಿಂಡಿಯಾಗಬಹುದು.
ಆರೋಗ್ಯಕರ ಟಿಪ್ಸ್

ಆಫೀಸ್ನಲ್ಲಿ ಪಿಜ್ಜಾ, ಬರ್ಗರ್, ಕೆ.ಎಫ್,ಸಿ ಚಿಕನ್ ನಂತಹ ಆಹಾರಗಳಿಗೆ ಮನಸ್ಸು ಹಾತೊರೆಯುವುದು ಸಹಜ. ಆದಷ್ಟು ಹೆಚ್ಚು ಕಾರ್ಬೋಹೈಡ್ರೇಟ್ಗಳು ಮತ್ತು ಹೆಚ್ಚಿನ ಕ್ಯಾಲೋರಿಗಳನ್ನು ಹೊಂದಿರುವ ಆಹಾರಗಳನ್ನು ಸೇವಿಸದಿರಲು ಸಲಹೆ ನೀಡಲಾಗಿದೆ. ಈ ರೀತಿಯ ಆಹಾರಗಳು ನಿಮ್ಮ ತೂಕವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ.
ನೀವು ತಿನ್ನುವ ಪ್ರತಿಯೊಂದು ಆಹಾರವು ಪೌಷ್ಟಿಕಾಂಶದಿಂದ ಕೂಡಿದೆಯೇ ಎಂದು ಖಚಿತಪಡಿಸಿಕೊಳ್ಳಿ. ಜಂಕ್ ಫುಡ್ಗಳು, ಕರಿದ ಆಹಾರವನ್ನು ಮಿತಗೊಳಿಸಿ.
Healthy Food For Office Workers.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm