ಬ್ರೇಕಿಂಗ್ ನ್ಯೂಸ್
20-05-22 07:40 pm Source: Vijayakarnataka ಡಾಕ್ಟರ್ಸ್ ನೋಟ್
ನೇರಳೆ ಹಣ್ಣು ಒಂದು ಸೀಸನಲ್ ಹಣ್ಣಾಗಿರುವುದರಿಂದ, ಬೇಸಿಗೆಯಲ್ಲಿ ಹೆಚ್ಚಾಗಿ ಮಾರುಕಟ್ಟೆಯಲ್ಲಿ ಕಾಣಸಿಗುತ್ತದೆ. ಇದನ್ನು ಜಾಮೂನ್ ಎಂದೂ ಕರೆಯುತ್ತಾರೆ. ಈ ಹಣ್ಣು ಅದರ ಗಾಢ ಬಣ್ಣ ಮತ್ತು ಹುಳಿ ಸಿಹಿ ರುಚಿಯಿಂದಾಗಿ ತುಂಬಾ ಜನರು ಇದನ್ನು ಇಷ್ಟಪಡುತ್ತಾರೆ. ಅನೇಕ ಆಯುರ್ವೇದ ಗುಣಗಳನ್ನು ಹೊಂದಿರುವ ಈ ಹಣ್ಣಿನಲ್ಲಿ ವಿಟಮಿನ್ ಗಳು ಹೇರಳವಾಗಿವೆ.
ನೇರಳೆ ಹಣ್ಣಿನ ಆರೋಗ್ಯ ಪ್ರಯೋಜನಗಳು
ಆಯುರ್ವೇದ ವೈದ್ಯರು ಜಾಮೂನ್ನ ಆಯುರ್ವೇದ ಗುಣಲಕ್ಷಣಗಳನ್ನು ಮತ್ತು ಅದನ್ನು ತಿನ್ನುವ ಪ್ರಯೋಜನಗಳನ್ನು ಹಂಚಿಕೊಂಡಿದ್ದಾರೆ. ಐಬಿಎಸ್, ಅತಿಸಾರ, ಅತಿಯಾದ ರಕ್ತಸ್ರಾವ , ಲ್ಯುಕೋರಿಯಾ , ವಾಕರಿಕೆ ಮತ್ತು ವಾಂತಿ ಸಮಸ್ಯೆಯಿಂದ ಬಳಲುತ್ತಿರುವ ಜನರಿಗೆ ನೇರಳೆ ಹಣ್ಣು ಅಮೃತವಾಗಿದೆ.
ಇದರ ಗುಣಲಕ್ಷಣಗಳು ಹೃದಯದ ಆರೋಗ್ಯಕ್ಕೂ ಒಳ್ಳೆಯದು ಜೊತೆಗೆ ಮಧುಮೇಹಿಗಳಿಗೂ ಈ ಹಣ್ಣು ಬಹಳ ಪ್ರಯೋಜನಕಾರಿಯಾಗಿದೆ. ನೇರಳೆ ಹಣ್ಣಿನ ಪ್ರಯೋಜನಗಳ ಬಗ್ಗೆ ತಿಳಿದ ನಂತರ ಅನೇಕ ಜನರು ಅದನ್ನು ಅತಿಯಾಗಿ ಸೇವಿಸಲು ಪ್ರಾರಂಭಿಸುತ್ತಾರೆ. ಆದರೆ ಹಾಗೆ ಮಾಡುವುದು ಅಪಾಯಕಾರಿಯಾಗಬಹುದು.
ನೇರಳೆ ಹಣ್ಣಿನ ಬೀಜ
ನೇರಳೆ ಹಣ್ಣನ್ನು ಮಾತ್ರವಲ್ಲದೆ ಅದರ ಬೀಜಗಳು, ತೊಗಟೆ ಮತ್ತು ಎಲೆಗಳನ್ನು ವಿವಿಧ ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಇಡೀ ದೇಹದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿರುವ ಫ್ಲೇವನಾಯ್ಡ್ಗಳ ಜೊತೆಗೆ ಜಾಮೂನ್ ಉತ್ಕರ್ಷಣ ನಿರೋಧಕಗಳ ಶ್ರೀಮಂತ ಮೂಲವಾಗಿದೆ.
ಯಾವ ರೋಗಕ್ಕೆಲ್ಲಾ ಒಳ್ಳೆಯದು
ಮಧುಮೇಹ
ರಕ್ತಹೀನತೆ
ಹೈಪರ್ಗ್ಲೈಸೀಮಿಯಾ
ಕೆಮ್ಮು
ಉಬ್ಬಸ
ಬ್ರಾಂಕೈಟಿಸ್
ದೌರ್ಬಲ್ಯ
ಲೈಂಗಿಕ ದೌರ್ಬಲ್ಯ
ಲ್ಯುಕೋರೋಹಿಯಾ
ಮಾನಸಿಕ ಅಸ್ವಸ್ಥತೆಗಳು
ಖಾಲಿಹೊಟ್ಟೆಯಲ್ಲಿ ತಿನ್ನದಿರಿ
ಆಯುರ್ವೇದದಲ್ಲಿ, ನೇರಳೆ ಹಣ್ಣಿನ ಸೇವನೆಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ಗಮನ ಹರಿಸಲು ಸಲಹೆ ನೀಡಲಾಗಿದೆ. ಆಯುರ್ವೇದದ ಪ್ರಕಾರ ಜಾಮೂನ್ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದು. ಇದಲ್ಲದೆ, ಈ ಹಣ್ಣನ್ನು ತಿಂದ ನಂತರ ಮತ್ತು ಮೊದಲು ಕನಿಷ್ಠ ಒಂದು ಗಂಟೆಯವರೆಗೆ ಹಾಲನ್ನು ಕುಡಿಯಬಾರದು. ಒಂದು ವೇಳೆ ಹಾಗೆ ಮಾಡಿದರೆ ಪ್ರಯೋಜನಗಳ ಬದಲಿಗೆ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು.
ಚರ್ಮಕ್ಕೆ ಒಳ್ಳೆಯದು
ಜಾಮೂನ್ ವಿಟಮಿನ್ ಎ ಮತ್ತು ಸಿ ಯ ಉತ್ತಮ ಮೂಲವಾಗಿದೆ, ಇದು ಕಣ್ಣು ಮತ್ತು ಚರ್ಮದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರೊಂದಿಗೆ, ಹೊಳೆಯುವ ಚರ್ಮಕ್ಕಾಗಿ ಮತ್ತು ಮೊಡವೆಗಳನ್ನು ಮೂಲದಿಂದ ತೆಗೆದುಹಾಕಲು ಸಹ ನೇರಳೆ ಹಣ್ಣನ್ನುಸೇವಿಸಲಾಗುತ್ತದೆ. ನೀವು ಹೆಚ್ಚು ಹಣ್ಣುಗಳನ್ನು ಸೇವಿಸಿದರೆ ಅದು ನಿಮ್ಮ ತ್ವಚೆಗೆ ಸಮಸ್ಯೆಗಳನ್ನು ಉಂಟುಮಾಡಬಹುದು.
ಮಲಬದ್ಧತೆ ಸಮಸ್ಯೆ
ಜಾಮೂನಿನಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಹಾಗಂತ ನೀವು ಸಿಕ್ಕಾಪಟ್ಟೆ ತಿಂದರೆ ಮಲಬದ್ಧತೆ ಸಮಸ್ಯೆ ಕಾಡಬಹುದು. ಹಾಗಾಗಿ ಸ್ವಲ್ಪ ಪ್ರಮಾಣದಲ್ಲಿ ತಿನ್ನುವುದು ಆರೋಗ್ಯದ ದೃಷ್ಠಿಯಿಂದ ಒಳ್ಳೆಯದಯ.
ರಕ್ತದೊತ್ತಡ ಸಮಸ್ಯೆ
ಆಯುರ್ವೇದದ ಪ್ರಕಾರ, ಅಧಿಕ ರಕ್ತದೊತ್ತಡ ರೋಗಿಗಳಿಗೆ ಜಾಮೂನ್ ಸೇವನೆಯು ತುಂಬಾ ಪ್ರಯೋಜನಕಾರಿಯಾಗಿದೆ. ಜಾಮೂನ್ ಹಣ್ಣು ಆಹಾರದಲ್ಲಿ ಸೇರಿಸುವುದರಿಂದ ಇದನ್ನು ಸುಲಭವಾಗಿ ನಿಯಂತ್ರಿಸಬಹುದು. ಆದರೆ ಅನೇಕ ಜನರು ಅದನ್ನು ನಿಯಂತ್ರಿಸಲು ಹೆಚ್ಚು ತಿನ್ನಲು ಪ್ರಾರಂಭಿಸುತ್ತಾರೆ, ಇದರಿಂದಾಗಿ ಕಡಿಮೆ ರಕ್ತದೊತ್ತಡದ ಸಮಸ್ಯೆ ಬರಬಹುದು.
Benefits And Side Effects Of Eating Jamun.
04-05-25 02:27 pm
Bangalore Correspondent
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
Karkala Mla Sunil Kumar, Parameshwar: ಆ್ಯಂಟಿ...
03-05-25 09:38 pm
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm