ಬ್ರೇಕಿಂಗ್ ನ್ಯೂಸ್
30-09-20 02:11 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ಸೆ. 30: ರಾಜ್ಯದ ಬಿಜೆಪಿ ಸರಕಾರ ತನ್ನ ಮೇಲಿನ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪವರ್ ಟಿವಿ ವಿರುದ್ಧ ಕೈಗೊಂಡಿರುವ ದಬ್ಬಾಳಿಕೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕು. ಮುಖ್ಯಮಂತ್ರಿ ರಾಜೀನಾಮೆ ಪಡೆಯಬೇಕು ಹಾಗೂ ನೇರ ಚುನಾವಣೆಗೆ ಮುಂದಾಗಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ ಆಗ್ರಹಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರಕಾರವೊಂದು ತನ್ನ ಮೇಲಿನ ಭ್ರಷ್ಟಾಚಾರ ಆರೋಪಕ್ಕೆ ಪ್ರತಿಯಾಗಿ ದ್ವೇಷ ರಾಜಕಾರಣ ನಡೆಸಿದೆ ಎಂದು ಆರೋಪಿಸಿದರು.
ಬಿಡಿಎ ಪ್ರಕರಣವೊಂದರಲ್ಲಿ 24 ಕೋಟಿ ರೂ.ಗಳ ಹಗರಣ ನಡೆದಿರುವ ಬಗ್ಗೆ ಸಾಕ್ಷ ಸಹಿತ ದಾಖಲೆಗಳಿವೆ. ಈ ಪ್ರಕರಣದಲ್ಲಿ 7.44 ಕೋಟಿ ರೂ. ಶೇಷಾದ್ರಿಪುರಂ ಬ್ಯಾಂಕೊಂದರ ಮೂಲಕ ಮುಖ್ಯಮಂತ್ರಿಯ ಸಂಬಂಧಿಕರು ಪಡೆದಿದ್ದಾರೆ. ಇದಲ್ಲದೆ, ಉಳಿದ ಹಣ ಕೊಲ್ಕತ್ತಾದ ಬ್ಯಾಂಕೊಂದರ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಸಂಬಂಧಿಕರ ಕಂಪನಿಗೆ ವರ್ಗಾವಣೆಯಾಗಿದೆ. ಆರ್ಟಿಜಿಎಸ್ ಮೂಲಕ ಹಣ ವರ್ಗಾವಣೆಯಾಗಿರುವ ಬಗ್ಗೆ ದಾಖಲೆ ಇರುವಾಗ ತನಿಖೆ ಆಗಬೇಡವೇ ? ಈ ಬಗ್ಗೆ ಸುದ್ದಿ ಮಾಡಿದ ಚಾನೆಲ್ ಮೇಲೆ ಬಲಪ್ರಯೋಗಿಸುವ ಮೂಲಕ ಜನರ ಬಾಯಿಯನ್ನು ಮುಚ್ಚಿಸಲಾಗದು. 2008ರಲ್ಲಿಯೂ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಆಡಳಿತವಿದ್ದಾಗ ಪ್ರೇರಣಾ ಟ್ರಸ್ಟ್ ಪ್ರಕರಣದ ಮೂಲಕ ಅಧಿಕಾರ ಕಳೆದುಕೊಂಡಿದ್ದರು. ಇದೀಗ ಮತ್ತೆ ಭ್ರಷ್ಟಾಚಾರ ನಡೆದಿದೆ. ಈ ಪ್ರಕರಣವನ್ನು ಇಲ್ಲಿಗೇ ಬಿಡುವುದಿಲ್ಲ. ರಾಜ್ಯದ ಮೂಲೆ ಮೂಲೆಗೂ ಜನರಿಗೆ ತಲುಪಿಸಲಾಗುವುದು ಎಂದು ಐವನ್ ಡಿಸೋಜಾ ಹೇಳಿದರು. ಸುದ್ದಿ ಗೋಷ್ಠಿಯಲ್ಲಿ ಇಬ್ರಾಹೀಂ ಕೋಡಿಜಾಲ್ ಮತಿತ್ತರು ಉಪಸ್ಥಿತಿ ಇದ್ದರು.
02-05-24 10:54 pm
Bangalore Correspondent
Karnataka Legislative Council Election date:...
02-05-24 10:23 pm
Prajwal Revanna mass rapist, Rahul Gandhi, Mo...
02-05-24 09:18 pm
CT Ravi, Prajwal Ravanna: ಪ್ರಜ್ವಲ್ ರೇವಣ್ಣ ಸೆಕ...
02-05-24 08:54 pm
Rashmi Gautam, Prajwal Revanna sex case: ಹಸಿದ...
02-05-24 06:15 pm
02-05-24 10:07 pm
HK News Desk
Hindu Marriage, Supreme court: ಹಿಂದು ವಿವಾಹ ಎನ...
02-05-24 09:25 pm
Senator Danesh Kumar Palyani ; ಪಾಕಿಸ್ತಾನದಲ್ಲಿ...
01-05-24 10:25 pm
Salman Khan Shootout: ನಟ ಸಲ್ಮಾನ್ ಖಾನ್ ಮನೆ ಮೇಲ...
01-05-24 03:57 pm
Arvind Kejriwals, Supreme Court: ಬದುಕು ಮತ್ತು...
30-04-24 11:02 pm
02-05-24 07:52 pm
Mangalore Correspondent
Mangalore Yesuraj, AEO, Kukke Subrahmanya Tem...
02-05-24 02:24 pm
Mangalore News, Konaje, Baby: ಐದು ತಿಂಗಳ ಹಸುಗೂ...
01-05-24 08:55 pm
Hot sun heat, Mangalore temperature; ಕರಾವಳಿಯಲ...
01-05-24 11:43 am
Mangalore Super gold and diamound showroom, T...
30-04-24 08:04 pm
01-05-24 10:18 pm
Mangaluru Correspondent
Mangalore crime, Court: ಮೆಲ್ಕಾರ್ ಬಳಿ ಕೋಮು ದ್ವ...
01-05-24 06:44 pm
Cyber Fraud, Online Crime: ಹೀಗೂ ಮೋಸ ಮಾಡ್ತಾರೆ,...
30-04-24 10:16 pm
Bangalore Crime, Fraud, House Rent: ಫ್ಲ್ಯಾಟ್...
29-04-24 11:50 am
Drugs case, Gujarat coast: ಬೋಟ್ ನಲ್ಲಿ ಸಿಕ್ತು...
28-04-24 09:46 pm