ಬ್ರೇಕಿಂಗ್ ನ್ಯೂಸ್
21-09-20 05:43 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ಸೆಪ್ಟಂಬರ್ 21: ಕೇಂದ್ರ ಸರಕಾರ ಕೃಷಿಕರ ಸ್ಥಿತಿ ಸುಧಾರಣೆ ನಿಟ್ಟಿನಲ್ಲಿ ಜಾರಿಗೆ ತಂದಿರುವ ತಿದ್ದುಪಡಿ ಮಸೂದೆಯಿಂದ ರೈತರಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ವಿಪಕ್ಷಗಳು ಕೃಷಿಕರನ್ನು ತಪ್ಪು ದಾರಿಗೆಳೆಯುವ ಕೆಲಸ ಮಾಡುತ್ತಿದೆ. ಕಾಯ್ದೆ ಬಗ್ಗೆ ರೈತರಿಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಮನೆ, ಮನೆಗೆ ಭೇಟಿ ನೀಡಿ ಅರ್ಥ ಮಾಡಿಸುವ ಪ್ರಯತ್ನ ಮಾಡುವುದಾಗಿ ರಾಜ್ಯ ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾರ್ಣಿಕ್, ನೂತನ ಮಸೂದೆ ಅನ್ವಯ ರೈತರಿಗೆ ತಮ್ಮ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಲು ಅವಕಾಶವಿದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ರೈತರು ತಮ್ಮ ಉತ್ಪನ್ನಗಳನ್ನು ಎಪಿಎಂಸಿ ಕೇಂದ್ರಗಳಲ್ಲಿಯೇ ಮಾರಾಟ ಮಾಡಬೇಕಂತಿಲ್ಲ. ರಾಜ್ಯ ಅಥವಾ ಅಂತಾರಾಜ್ಯ ವ್ಯಾಪಾರಕ್ಕೆ ಉತ್ತೇಜನ ದೊರೆಯಲಿದೆ. ಆನ್ ಲೈನ್ ಮೂಲಕ ಖಾಸಗಿ ಕಂಪನಿಗಳ ಜೊತೆಗೂ ವ್ಯಾಪಾರ ಮಾಡುವುದಕ್ಕೆ ಅವಕಾಶ ಸಿಗಲಿದೆ ಎಂದು ಹೇಳಿದರು.

ಇನ್ನು ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ಸಿಗುವುದಿಲ್ಲ ಎನ್ನುವುದು ವಿಪಕ್ಷಗಳ ಆರೋಪ ಅಷ್ಟೇ. ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಮುಂದೆಯೂ ಮುಂದುವರಿಯಲಿದೆ. ಅಲ್ಲದೆ, ಎಪಿಎಂಸಿ ವ್ಯವಸ್ಥೆಯೂ ಇದ್ದ ಹಾಗೇ ಮುಂದುವರಿಯುತ್ತದೆ. ಆದರೆ ರೈತರ ಉತ್ಪನ್ನಗಳ ಮಾರಾಟಕ್ಕೆ ಸ್ಪರ್ಧೆಯ ಅವಕಾಶ ಸಿಗುವುದರಿಂದ ಉತ್ತಮ ದರ ಸಿಗಲಿದೆ. ಇದರಿಂದ ರೈತನ ಆದಾಯವೂ ಸಹಜವಾಗಿ ಹೆಚ್ಚಲಿದೆ. ಇದರಿಂದ ಕೃಷಿ ಬೆಳೆಗಳ ರಫ್ತಿಗೂ ಉತ್ತೇಜನ ಸಿಗಲಿದೆ ಎಂದರು ಬೆಂಗಳೂರಿನಲ್ಲಿ ಕಾಯ್ದೆ ಬಗ್ಗೆ ಗೊತ್ತಿಲ್ಲದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯ ಹಿಂದೆ ವಿಪಕ್ಷಗಳ ಕೈವಾಡ ಇದೆ ಎಂದು ಪ್ರಶ್ನೆಯೊಂದಕ್ಕೆ ಕಾರ್ಣಿಕ್ ಉತ್ತರಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ, ಉಪಾಧ್ಯಕ್ಷೆ ಕಸ್ತೂರಿ ಪಂಜ ಉಪಸ್ಥಿತರಿದ್ದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm