ಬ್ರೇಕಿಂಗ್ ನ್ಯೂಸ್
21-09-20 05:43 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ಸೆಪ್ಟಂಬರ್ 21: ಕೇಂದ್ರ ಸರಕಾರ ಕೃಷಿಕರ ಸ್ಥಿತಿ ಸುಧಾರಣೆ ನಿಟ್ಟಿನಲ್ಲಿ ಜಾರಿಗೆ ತಂದಿರುವ ತಿದ್ದುಪಡಿ ಮಸೂದೆಯಿಂದ ರೈತರಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ವಿಪಕ್ಷಗಳು ಕೃಷಿಕರನ್ನು ತಪ್ಪು ದಾರಿಗೆಳೆಯುವ ಕೆಲಸ ಮಾಡುತ್ತಿದೆ. ಕಾಯ್ದೆ ಬಗ್ಗೆ ರೈತರಿಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಮನೆ, ಮನೆಗೆ ಭೇಟಿ ನೀಡಿ ಅರ್ಥ ಮಾಡಿಸುವ ಪ್ರಯತ್ನ ಮಾಡುವುದಾಗಿ ರಾಜ್ಯ ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾರ್ಣಿಕ್, ನೂತನ ಮಸೂದೆ ಅನ್ವಯ ರೈತರಿಗೆ ತಮ್ಮ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಲು ಅವಕಾಶವಿದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ರೈತರು ತಮ್ಮ ಉತ್ಪನ್ನಗಳನ್ನು ಎಪಿಎಂಸಿ ಕೇಂದ್ರಗಳಲ್ಲಿಯೇ ಮಾರಾಟ ಮಾಡಬೇಕಂತಿಲ್ಲ. ರಾಜ್ಯ ಅಥವಾ ಅಂತಾರಾಜ್ಯ ವ್ಯಾಪಾರಕ್ಕೆ ಉತ್ತೇಜನ ದೊರೆಯಲಿದೆ. ಆನ್ ಲೈನ್ ಮೂಲಕ ಖಾಸಗಿ ಕಂಪನಿಗಳ ಜೊತೆಗೂ ವ್ಯಾಪಾರ ಮಾಡುವುದಕ್ಕೆ ಅವಕಾಶ ಸಿಗಲಿದೆ ಎಂದು ಹೇಳಿದರು.

ಇನ್ನು ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ಸಿಗುವುದಿಲ್ಲ ಎನ್ನುವುದು ವಿಪಕ್ಷಗಳ ಆರೋಪ ಅಷ್ಟೇ. ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಮುಂದೆಯೂ ಮುಂದುವರಿಯಲಿದೆ. ಅಲ್ಲದೆ, ಎಪಿಎಂಸಿ ವ್ಯವಸ್ಥೆಯೂ ಇದ್ದ ಹಾಗೇ ಮುಂದುವರಿಯುತ್ತದೆ. ಆದರೆ ರೈತರ ಉತ್ಪನ್ನಗಳ ಮಾರಾಟಕ್ಕೆ ಸ್ಪರ್ಧೆಯ ಅವಕಾಶ ಸಿಗುವುದರಿಂದ ಉತ್ತಮ ದರ ಸಿಗಲಿದೆ. ಇದರಿಂದ ರೈತನ ಆದಾಯವೂ ಸಹಜವಾಗಿ ಹೆಚ್ಚಲಿದೆ. ಇದರಿಂದ ಕೃಷಿ ಬೆಳೆಗಳ ರಫ್ತಿಗೂ ಉತ್ತೇಜನ ಸಿಗಲಿದೆ ಎಂದರು ಬೆಂಗಳೂರಿನಲ್ಲಿ ಕಾಯ್ದೆ ಬಗ್ಗೆ ಗೊತ್ತಿಲ್ಲದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯ ಹಿಂದೆ ವಿಪಕ್ಷಗಳ ಕೈವಾಡ ಇದೆ ಎಂದು ಪ್ರಶ್ನೆಯೊಂದಕ್ಕೆ ಕಾರ್ಣಿಕ್ ಉತ್ತರಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ, ಉಪಾಧ್ಯಕ್ಷೆ ಕಸ್ತೂರಿ ಪಂಜ ಉಪಸ್ಥಿತರಿದ್ದರು.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm