ಬ್ರೇಕಿಂಗ್ ನ್ಯೂಸ್
30-07-20 12:32 pm Mangalore Reporter ಕರಾವಳಿ
ಮಂಗಳೂರು, ಜು 30: ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರ ವರ್ಗಾವಣೆಯ ಹಿಂದಿನ ಕಾರಣವನ್ನು ಸ್ಪಷ್ಟಪಡಿಸಬೇಕು ಎಂದು ಶಾಸಕ ಯು.ಟಿ ಖಾದರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಜುಲೈ 30 ರ ಗುರುವಾರ ನಗರದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಶಾಸಕ ಖಾದರ್, "ದಕ್ಷಿಣ ಕನ್ನಡದಲ್ಲಿ ಒಂದು ವರ್ಷದ ಅವಧಿಯೊಳಗೆ ಇಬ್ಬರು ಜಿಲ್ಲಾಧಿಕಾರಿಗಳು ಬಂದು ಹೋಗಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಇದು ವಾಡಿಕೆಯಂತೆ ನಡೆಯುವ ಆಡಳಿತಾತ್ಮಕ ವರ್ಗಾವಣೆಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಆರು ತಿಂಗಳಲ್ಲಿ ಜಿಲ್ಲಾಧಿಕಾರಿಗಳನ್ನು ಬದಲಾಯಿಸುವ ನಿಯಮವಿಲ್ಲ, ಕನಿಷ್ಠ ಜಿಲ್ಲಾಧಿಕಾರಿ ಒಂದು ವರ್ಷ ಅಥವಾ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಬೇಕು. ಹೀಗಾಗಿ ಆರು ತಿಂಗಳೊಳಗೆ ಜಿಲ್ಲಾಧಿಕಾರಿಯವರನ್ನು ವರ್ಗಾವಣೆಯ ಮಾಡಿದ ಹಿಂದಿನ ನೈಜ ಕಾರಣವನ್ನು ಸರ್ಕಾರ ಬಹಿರಂಗಪಡಿಸಬೇಕು. ದಕ್ಷಿಣ ಕನ್ನಡದಂತಹ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ಇಬ್ಬರು ಜಿಲ್ಲಾಧಿಕಾರಿ ಬಂದು ಹೋದರೆ ನಮ್ಮ ಜಿಲ್ಲೆ ಹೇಗೆ ಮುಂದುವರಿಯುತ್ತದೆ ಎಂದು ಪ್ರಶ್ನಿಸಿದರು.
"ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ.ರೂಪೇಶ್ ಅವರಿಕೆ ಜೀವ ಬೆದರಿಕೆ ಬಂದಾಗ, ಬಿಜೆಪಿ ಶಾಸಕರಾಗಲಿ, ಸಂಸದರಾಗಲಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಯಾರೊಬ್ಬರೂ ಅದನ್ನು ಖಂಡಿಸುವ ಹೇಳಿಕೆಯನ್ನು ನೀಡಿಲ್ಲ. ಇಲ್ಲಿಯವರೆಗೆ ಬಿಜೆಪಿ ನಾಯಕರು ಅಧಿಕಾರಿಗಳಿಗೆ ಆತ್ಮವಿಶ್ವಾಸ ತುಂಬುವ ಒಂದೇ ಒಂದು ಹೇಳಿಕೆಯನ್ನು ನೀಡಿಲ್ಲ. ಪೊಲೀಸ್ ಇಲಾಖೆ ಆರೋಪಿಯನ್ನು ಬಂಧಿಸಿದಾಗ ಬಿಜೆಪಿ ನಾಯಕರು ಅದರ ಲಾಭವನ್ನು ಪಡೆದುಕೊಳ್ಳಲು ಮಾತ್ರ ಮುಂದಾಗಿದ್ದಾರೆ ಎಂದು ಆರೋಪಿಸಿದರು.
"ನಮ್ಮ ಸರ್ಕಾರದ ಆಡಳಿತದ ಅವಧಿಯಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳನ್ನು ವರ್ಗಾಯಿಸಲಾಗಿಲ್ಲ ಅಥವಾ ಐಎಎಸ್ ಅಧಿಕಾರಿ ರಾಜೀನಾಮೆ ನೀಡಿಲ್ಲ ಎನ್ನುವುದು ಬಿಜೆಪಿ ನಾಯಕರಿಗೆ ತಿಳಿದಿರಲಿ" ಎಂದು ಹೇಳಿದರು.
31-07-25 11:20 pm
Bangalore Correspondent
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
Pranab Mohanty, SIT, Dharmasthala; ಎಡಿಜಿಪಿ ಪ್...
30-07-25 06:28 pm
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
31-07-25 10:08 pm
HK News Desk
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
31-07-25 11:16 pm
Mangalore Correspondent
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
Human Skull, Multiple Bones, Dharmasthala, SI...
31-07-25 08:45 pm
31-07-25 06:04 pm
Mangalore Correspondent
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm