ಬ್ರೇಕಿಂಗ್ ನ್ಯೂಸ್
30-07-20 12:32 pm Mangalore Reporter ಕರಾವಳಿ
ಮಂಗಳೂರು, ಜು 30: ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರ ವರ್ಗಾವಣೆಯ ಹಿಂದಿನ ಕಾರಣವನ್ನು ಸ್ಪಷ್ಟಪಡಿಸಬೇಕು ಎಂದು ಶಾಸಕ ಯು.ಟಿ ಖಾದರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಜುಲೈ 30 ರ ಗುರುವಾರ ನಗರದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಶಾಸಕ ಖಾದರ್, "ದಕ್ಷಿಣ ಕನ್ನಡದಲ್ಲಿ ಒಂದು ವರ್ಷದ ಅವಧಿಯೊಳಗೆ ಇಬ್ಬರು ಜಿಲ್ಲಾಧಿಕಾರಿಗಳು ಬಂದು ಹೋಗಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಇದು ವಾಡಿಕೆಯಂತೆ ನಡೆಯುವ ಆಡಳಿತಾತ್ಮಕ ವರ್ಗಾವಣೆಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಆರು ತಿಂಗಳಲ್ಲಿ ಜಿಲ್ಲಾಧಿಕಾರಿಗಳನ್ನು ಬದಲಾಯಿಸುವ ನಿಯಮವಿಲ್ಲ, ಕನಿಷ್ಠ ಜಿಲ್ಲಾಧಿಕಾರಿ ಒಂದು ವರ್ಷ ಅಥವಾ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಬೇಕು. ಹೀಗಾಗಿ ಆರು ತಿಂಗಳೊಳಗೆ ಜಿಲ್ಲಾಧಿಕಾರಿಯವರನ್ನು ವರ್ಗಾವಣೆಯ ಮಾಡಿದ ಹಿಂದಿನ ನೈಜ ಕಾರಣವನ್ನು ಸರ್ಕಾರ ಬಹಿರಂಗಪಡಿಸಬೇಕು. ದಕ್ಷಿಣ ಕನ್ನಡದಂತಹ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ಇಬ್ಬರು ಜಿಲ್ಲಾಧಿಕಾರಿ ಬಂದು ಹೋದರೆ ನಮ್ಮ ಜಿಲ್ಲೆ ಹೇಗೆ ಮುಂದುವರಿಯುತ್ತದೆ ಎಂದು ಪ್ರಶ್ನಿಸಿದರು.
"ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ.ರೂಪೇಶ್ ಅವರಿಕೆ ಜೀವ ಬೆದರಿಕೆ ಬಂದಾಗ, ಬಿಜೆಪಿ ಶಾಸಕರಾಗಲಿ, ಸಂಸದರಾಗಲಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಯಾರೊಬ್ಬರೂ ಅದನ್ನು ಖಂಡಿಸುವ ಹೇಳಿಕೆಯನ್ನು ನೀಡಿಲ್ಲ. ಇಲ್ಲಿಯವರೆಗೆ ಬಿಜೆಪಿ ನಾಯಕರು ಅಧಿಕಾರಿಗಳಿಗೆ ಆತ್ಮವಿಶ್ವಾಸ ತುಂಬುವ ಒಂದೇ ಒಂದು ಹೇಳಿಕೆಯನ್ನು ನೀಡಿಲ್ಲ. ಪೊಲೀಸ್ ಇಲಾಖೆ ಆರೋಪಿಯನ್ನು ಬಂಧಿಸಿದಾಗ ಬಿಜೆಪಿ ನಾಯಕರು ಅದರ ಲಾಭವನ್ನು ಪಡೆದುಕೊಳ್ಳಲು ಮಾತ್ರ ಮುಂದಾಗಿದ್ದಾರೆ ಎಂದು ಆರೋಪಿಸಿದರು.
"ನಮ್ಮ ಸರ್ಕಾರದ ಆಡಳಿತದ ಅವಧಿಯಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳನ್ನು ವರ್ಗಾಯಿಸಲಾಗಿಲ್ಲ ಅಥವಾ ಐಎಎಸ್ ಅಧಿಕಾರಿ ರಾಜೀನಾಮೆ ನೀಡಿಲ್ಲ ಎನ್ನುವುದು ಬಿಜೆಪಿ ನಾಯಕರಿಗೆ ತಿಳಿದಿರಲಿ" ಎಂದು ಹೇಳಿದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm