ಬ್ರೇಕಿಂಗ್ ನ್ಯೂಸ್
24-05-22 08:42 pm HK News Desk ಕರಾವಳಿ
ಕುಂದಾಪುರ, ಮೇ 24 : ಕುಂದಾಪುರ ಮತ್ತು ಬೀಜಾಡಿಯ ಸಮುದ್ರ ತೀರದಲ್ಲಿ ಪೆಟ್ರೋಲಿಯಂ ತ್ಯಾಜ್ಯ ಕಂಡುಬಂದಿದ್ದು ಸಮುದ್ರ ನೀರಿನಲ್ಲಿ ಕಪ್ಪುದ್ರವ ತೀರದುದ್ದಕ್ಕೂ ಹರಡಿಕೊಂಡಿದೆ. ನೀರಿನಲ್ಲಿ ಹೆಪ್ಪುಗಟ್ಟಿದ ರೀತಿ ದೊಡ್ಡ ಮಟ್ಟದಲ್ಲಿ ಟಾರ್ಬಾಲ್ಗಳು ಗೋಚರಿಸಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.
ಸಮುದ್ರಕ್ಕೆ ಬಿಡಲಾಗುವ ಪೆಟ್ರೋಲಿಯಂ ತ್ಯಾಜ್ಯ ಉಂಡೆ ಕಟ್ಟಿರುವ (ಟಾರ್ ಬಾಲ್) ಮಾದರಿಯಲ್ಲಿ ಈ ಭಾಗದ ಸಮುದ್ರ ದಡದಲ್ಲಿ ಕಂಡುಬಂದಿದೆ. ಇದರಲ್ಲಿ ಮೈಕ್ರೋಪ್ಲಾಸ್ಟಿಕ್ ಕಣಗಳಿರುವುದು ಗೋಚರಿಸಿದ್ದು ಸಮುದ್ರ ತೀರದ ಸ್ವಚ್ಛತೆಗೆ ತೆರಳಿದ್ದ ಕೆಲವರಿಗೆ ಎಣ್ಣೆ ಅಂಶದ ಟಾರ್ ಚಪ್ಪಲಿಗೆಲ್ಲಾ ಮೆತ್ತಿಕೊಂಡಿದೆ.

ಮೈಕ್ರೋಪ್ಲಾಸ್ಟಿಕ್, ಟಾರ್ ಬಾಲ್ ಜಲಚರಗಳು ಮತ್ತು ಮಾನವನಿಗೆ ಹಾನಿಕರವಾಗಿದ್ದು ಅಧಿಕಾರಿಗಳು ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಇದು ಸುರತ್ಕಲ್ ಬಳಿಯ ಎಂಆರ್ ಪಿಎಲ್ ನಿಂದ ಸಮುದ್ರಕ್ಕೆ ಬಿಡಲಾಗುವ ತ್ಯಾಜ್ಯವೇ ? ಐಎಸ್ ಪಿಆರ್ ಎಲ್ ಭೂತಗ ಕೊಳವೆಯಿಂದಾದ ಸೋರಿಕೆಯೇ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಎಂಆರ್ ಪಿಎಲ್ ಕೈಗಾರಿಕೆಯ ತ್ಯಾಜ್ಯವನ್ನು ಸಮುದ್ರಕ್ಕೆ ಪೈಪ್ ಹಾಕಿ ಬಿಡಲಾಗುತ್ತಿದೆ.
![]()
ಸಮುದ್ರ ಜೈವಿಕ ವ್ಯವಸ್ಥೆಗೆ ಮಾರಕವಾದ ಪೆಟ್ರೋಲಿಯಂ ತ್ಯಾಜ್ಯ ಸಮುದ್ರ ತೀರದಲ್ಲಿ ಕಿಲೋಮೀಟರ್ ಉದ್ದಕ್ಕೂ ಹರಡಿರುವುದು ಹೇಗೆ? ಸಮುದ್ರದ ಮೀನುಗಳನ್ನು ತಿನ್ನುವ ಮಾನವನ ಆರೋಗ್ಯಕ್ಕೂ ಇದು ಮಾರಕವಲ್ಲವೇ? ಇದರ ಬಗ್ಗೆ ಕೂಡಲೇ ಸಂಬಂಧಪಟ್ಟವರು ಪರಿಶೀಲನೆ ನಡೆಸಬೇಕು ಎಂದು ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ತಂಡದ ಸದಸ್ಯರು ಒತ್ತಾಯಿಸಿದ್ದಾರೆ. ಬೀಜಾಡಿ ಸಮುದ್ರ ತೀರದಲ್ಲಿ ಸ್ವಚ್ಛತಾ ಕಾರ್ಯಕ್ಕೆ ತೊಡಗಿದ್ದಾಗ ನೀರಿನಲ್ಲಿ ತೇಲುವ ಟಾರನ್ನು ಪತ್ತೆ ಮಾಡಿದ್ದಾರೆ.
Conservationists working towards turtle conservation were distraught, after they noticed tar balls and oil spills on the beaches of Kundapur.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm