ಬ್ರೇಕಿಂಗ್ ನ್ಯೂಸ್
24-05-22 09:06 pm Mangalore Correspondent ಕರಾವಳಿ
ಮಂಗಳೂರು, ಮೇ 24: ಗುರುಪುರ ಬಳಿಯ ಮಳಲಿ ಪೇಟೆಯ ಜುಮ್ಮಾ ಮಸೀದಿಯಲ್ಲಿ ದೇವಸ್ಥಾನದ ಮಾದರಿ ರಚನೆ ಕಂಡುಬಂದ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳು ಮಸೀದಿ ಬಗ್ಗೆ ತಾಂಬೂಲ ಪ್ರಶ್ನೆ ಇಟ್ಟಿರುವುದರಿಂದ ಪರಿಸರದಲ್ಲಿ ಶಾಂತಿ ಕದಡಬಾರದು ಎನ್ನುವ ದೃಷ್ಟಿಯಿಂದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಮಳಲಿ ದರ್ಗಾದ ಸುತ್ತಲಿನ 500 ಮೀಟರ್ ಪ್ರದೇಶದಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದಾರೆ.
ತೆಂಕುಳಿಪಾಡಿ ಗ್ರಾಮದ ಜೋಡುತಡಮೆ ಎಂಬಲ್ಲಿನ ರಾಮಾಂಜನೇಯ ಭಜನಾ ಮಂದಿರದಲ್ಲಿ ಹಿಂದು ಸಂಘಟನೆಗಳ ವತಿಯಿಂದ ತಾಂಬೂಲ ಪ್ರಶ್ನೆ ಆಯೋಜಿಸಲಾಗಿದೆ. ಈ ಧಾರ್ಮಿಕ ಕಾರ್ಯಕ್ರಮ ಮೇ 25ರ ಬೆಳಗ್ಗೆ 8ರಿಂದ ಸಂಜೆಯ ವರೆಗೆ ನಡೆಯುವುದರಿಂದ ಈ ಸಂದರ್ಭದಲ್ಲಿ ಮಸೀದಿ ಕುರಿತು ಚರ್ಚೆಗಳು ಏರ್ಪಡುವುದರಿಂದ ಶಾಂತಿ ಸೌಹಾರ್ದ ಕೆಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಬಜ್ಪೆ ಠಾಣೆ ವ್ಯಾಪ್ತಿಯ ತೆಂಕುಳಿಪಾಡಿ ಗ್ರಾಮದ ಮಳಲಿ ಪೇಟೆಯ ಜುಮ್ಮಾ ಮಸೀದಿಯ ಸುತ್ತ ಮುತ್ತಲಿನ 500 ಮೀಟರ್ ಪ್ರದೇಶದಲ್ಲಿ (ಕಾಚಿಲಕೋಡಿಯಿಂದ ಮಳಲಿ ಕಡೆಗೆ ಬರುವ ರಸ್ತೆ, ಗಂಜಿಮಠದಿಂದ ಮಳಲಿ ಮಸೀದಿ ಕಡೆಗೆ ಬರುವ ರಸ್ತೆ, ಹಾಗೂ ಕೈಕಂಬ ಕಡೆಯಿಂದ ಜೋಡುತಡಮೆ ವರೆಗಿನ ರಸ್ತೆ) ಮೇ 24ರ ಸಂಜೆ 8 ಗಂಟೆಯಿಂದ ಮೇ 26ರ ಬೆಳಗ್ಗೆ 8 ಗಂಟೆ ವರೆಗೆ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ.




ಸೆಕ್ಷನ್ ಇರುವುದರಿಂದ ಈ ಭಾಗದಲ್ಲಿ ಯಾವುದೇ ರೀತಿಯಲ್ಲೂ ಘೋಷಣೆ ಕೂಗುವುದು, ಗುಂಪು ಸೇರುವುದು, ಪಟಾಕಿ ಸಿಡಿಸುವುದು, ಶಸ್ತ್ರ, ದೊಣ್ಣೆಗಳನ್ನು ಒಯ್ಯುವುದು, ಸ್ಫೋಟಕಗಳನ್ನು ಒಯ್ಯುವುದು, ಪ್ರತಿಭಟನೆ, ಧರಣಿ, ಭಿತ್ತಿಪತ್ರ ಪ್ರದರ್ಶಿಸುವುದು ಕಾನೂನು ರೀತ್ಯ ಅಪರಾಧವಾಗಿರುತ್ತದೆ ಎಂದು ಪೊಲೀಸ್ ಕಮಿಷನರ್ ಈ ಕುರಿತ ಆದೇಶದಲ್ಲಿ ತಿಳಿಸಿದ್ದಾರೆ. ಮಸೀದಿ ನವೀಕರಣ ಸಂದರ್ಭ ಒಳಭಾಗದಲ್ಲಿ ದೇವಸ್ಥಾನದ ಚಿತ್ರಣ ಕಂಡುಬಂದಿದ್ದರಿಂದ ಸುದ್ದಿ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ರಾಷ್ಟ್ರೀಯ ಮಾಧ್ಯಮಗಳಲ್ಲಿ ಚರ್ಚೆಯಾಗಿದ್ದು, ಮಂಗಳೂರಿನಲ್ಲಿಯೂ ಮಸೀದಿಯೊಳಗೆ ದೇವಸ್ಥಾನ, ಮತ್ತೊಂದು ಗ್ಯಾನವಾಪಿ ಎನ್ನುವ ರೀತಿ ಬಿಂಬಿತವಾಗಿದೆ. ಹೀಗಾಗಿ ಮಂಗಳೂರು ಕೋಮು ಸೂಕ್ಷ್ಮ ಪ್ರದೇಶ ಆಗಿರುವುದರಿಂದ ಪೊಲೀಸರು ಸೆಕ್ಷನ್ ಜಾರಿಗೊಳಿಸಿ ಶಾಂತಿ ಕಾಪಾಡಲು ಮುಂದಾಗಿದ್ದಾರೆ.
Malali Mosque Temple row, 144 section ordered in Mangalore Bajpe Police Station limits on may 25th as VHP holds "Thamboola Prashe".
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm