ಬ್ರೇಕಿಂಗ್ ನ್ಯೂಸ್
26-05-22 04:49 pm Udupi Correspondent ಕರಾವಳಿ
ಉಡುಪಿ, ಮೇ 26 : ಮೂರು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಯುವತಿ ಸಾವನ್ನಪ್ಪಿದ ಪ್ರಕರಣದಲ್ಲಿ ಭಾರೀ ಟ್ವಿಸ್ಟ್ ಸಿಕ್ಕಿದ್ದು ಯುವತಿ ಸಾವಿಗೆ ಲವ್ ಜಿಹಾದ್ ಕಾರಣ ಎನ್ನುವ ಆರೋಪ ಕೇಳಿಬಂದಿದೆ.
ಕುಂದಾಪುರ ತಾಲೂಕಿನ ಉಪ್ಪಿನಕುದ್ರು ನಿವಾಸಿ ಶಿಲ್ಪಾ (25) ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದು ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಳು. ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಶಿಲ್ಪಾಗೆ ಅಜೀಜ್ (32) ಎಂಬಾತನನ್ನು ಪ್ರೀತಿಸುತ್ತಿದ್ದು ಆತನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಅಜೀಜ್ ಗೆ ಈ ಮೊದಲೇ ಒಂದು ಮದುವೆಯಾಗಿದ್ದು ಮಕ್ಕಳನ್ನು ಹೊಂದಿದ್ದಾನೆ. ಈ ಹಿಂದೆ ಶಿಲ್ಪಾ ಟ್ಯುಟೋರಿಯಲ್ ಹೋಗುತ್ತಿದ್ದ ವೇಳೆ ಅಜೀಜ್ ಪರಿಚಯ ಆಗಿತ್ತು.

ಆನಂತರ, ಅಜೀಜ್ ಪ್ರೀತಿಯ ಹೆಸರಿನಲ್ಲಿ ಆಕೆಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಆಗಾಗ ಶಿಲ್ಪಾಳನ್ನು ತನ್ನ ಮನೆಗೆ ಕರೆಸಿಕೊಳ್ಳುತ್ತಿದ್ದ. ಪತಿಯ ಕೃತ್ಯಕ್ಕೆ ಪತ್ನಿ ಸಲ್ಮಾ ಬೆಂಬಲಿಸುತ್ತಿದ್ದಳು ಎನ್ನಲಾಗಿದೆ.

ಇತ್ತೀಚೆಗೆ ಮದುವೆ ಬಗ್ಗೆ ಕೇಳಿದ್ದಕ್ಕೆ ಮತಾಂತರ ಆಗುವಂತೆ ಒತ್ತಾಯ ಮಾಡಿದ್ದ ಎನ್ನಲಾಗುತ್ತಿದೆ. ಅಲ್ಲದೆ, ಸಲ್ಮಾ ಮತ್ತು ಶಿಲ್ಪಾ ನಡುವೆ ಇದೇ ವಿಚಾರದಲ್ಲಿ ಜಗಳವಾಗಿದ್ದು ಬಟ್ಟೆ ಅಂಗಡಿಗೆ ಬಂದಿದ್ದ ಅಜೀಜ್ ಶಿಲ್ಪಾಗೆ ಅವಾಚ್ಯವಾಗಿ ನಿಂದಿಸಿ ನೀನು ಸತ್ತು ಹೋಗು ಎಂದು ಹೇಳಿದ್ದ. ಇದರಿಂದ ಮನನೊಂದು ಮೇ 23ರಂದು ರಾತ್ರಿ ಮನೆಯಲ್ಲಿದ್ದ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಮನೆಯವರು ನೋಡಿ ಬಳಿಕ ಆಸ್ಪತ್ರೆಗೆ ದಾಖಲಿಸಿದ್ದರು. 25 ರಂದು ಯುವತಿ ಸಾವು ಕಂಡಿದ್ದು ಆಕೆಯ ಸೋದರ ಕುಂದಾಪುರ ಠಾಣೆಯಲ್ಲಿ ದೂರು ನೀಡಿದ್ದಾರೆ. ಯುವತಿ ಸಾವಿಗೆ ಅಜೀಜ್ ಕಾರಣ ಎಂದು ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ ಹಿಂದು ಸಂಘಟನೆಗಳು ಲವ್ ಜಿಹಾದ್ ಬಗ್ಗೆ ಆರೋಪ ಮಾಡಿವೆ.
Udupi Love sex dhoka Kundapura Muslim boy booked for Love Jihad, girl commits suicide. The deceased has been identified as Shilpa (25). A case been registered against Aziz (32). It is said Aziz was already married and has a child but he cheated the Hindu girl of marrying her.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm