ಬ್ರೇಕಿಂಗ್ ನ್ಯೂಸ್
27-05-22 06:01 pm Mangalore Correspondent ಕರಾವಳಿ
ಮಂಗಳೂರು, ಮೇ 27: ಕವಾಯತು ಮನೆ ಒಳಗಿನ ಡ್ರಾಯಿಂಗ್ ರೂಂನಂತೆ. ಅಲ್ಲಿನ ಅಲಂಕಾರ, ಶಿಸ್ತು ಹೇಗೆ ಮನೆಗೆ ಬರುವವರನ್ನು ಆಕರ್ಷಿಸುತ್ತದೋ ಪೊಲೀಸರ ಕವಾಯತು ಕೂಡ ಶಿಸ್ತನ್ನು ಪ್ರತಿಬಿಂಬಿಸುತ್ತದೆ. ನೋಡುಗರನ್ನು ಆಕರ್ಷಿಸುತ್ತದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ನಗರದ ಪೊಲೀಸ್ ಮೈದಾನದಲ್ಲಿ ನಡೆದ ಪೊಲೀಸ್ ಪರೇಡ್ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಫೀಲ್ಡ್ ನಲ್ಲಿ ಕೆಲಸ ಮಾಡುವಾಗ ಹಿರಿಯ ಅಧಿಕಾರಿಗಳ ಕಮಾಂಡ್ ಮೇಲೆ ಕಾರ್ಯಾಚರಣೆ ಮಾಡಬೇಕಾಗುತ್ತದೆ. ಇಲ್ಲದಿದ್ದರೆ ಅನಾಹುತಕ್ಕೆ ಕಾರಣವಾಗುತ್ತದೆ. ಆ ಹಿನ್ನೆಲೆಯಲ್ಲಿ ಈ ಕವಾಯತು ಪೊಲೀಸರ ಕ್ಷಮತೆ, ಶಿಸ್ತಿಗೆ ಪೂರಕವಾಗಿದ್ದು ಕಾಲ ಕಾಲಕ್ಕೆ ಪರೇಡ್ ನಡೆಸುವುದು ಮುಖ್ಯ ಎಂದು ಅಲೋಕ್ ಕುಮಾರ್ ನುಡಿದರು.
ದ.ಕ. ಜಿಲ್ಲೆಯಲ್ಲಿ ಹಿಂದಿನಿಂದಲೂ ಬೀಟ್ ವ್ಯವಸ್ಥೆ ಇದೆ. ಕೋವಿಡ್ ಕಾರಣ ಸ್ವಲ್ಪ ತೊಂದರೆಯಾಗಿತ್ತು. ಕೋವಿಡ್ ಪ್ರಕರಣ ಕಡಿಮೆ ಆಗಿರುವ ಕಾರಣ ಬೀಟ್ ವ್ಯವಸ್ಥೆ, ಜನಸಂಪರ್ಕ ಸಭೆಗಳನ್ನು ನಡೆಸಬೇಕು. ಈಗಿರುವ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿ ಮುಂದುವರಿಸಬೇಕಿದೆ ಎಂದರು.

ಕಾಸರಗೋಡು, ಕಣ್ಣೂರು ಗಡಿ ಭಾಗದಲ್ಲಿ ಮಾದಕ ದ್ರವ್ಯಗಳ ಸಾಗಾಟ ಮೇಲೆ ನಿಗಾ, ಇತರ ಅಪರಾಧಗಳ ಬಗ್ಗೆ ನೆರೆಯ ಜಿಲ್ಲೆಯ ಪೊಲೀಸರ ಚತೆ ಚರ್ಚೆ ನಡೆಸುವ ಕೆಲಸ ಆಗಬೇಕು. ಆಗ ದುಷ್ಟ ಶಕ್ತಿಗಳಿಗೆ ಭಯ ಆಗಲಿದೆ. ಈ ಬಗ್ಗೆ ಪೊಲೀಸ್ ಆಯುಕ್ತರು, ಅಧೀಕ್ಷಕರು, ಐಜಿಪಿಗೆ ಸಲಹೆ ಮಾಡಿದ್ದೇನೆ. ಜನಸಾಮಾನ್ಯರ ಜತೆ ನಿಕಟ ಸಂಪರ್ಕ ಇರಿಸಿ ಕೆಲಸ ಮಾಡಿದರೆ ಶಾಂತಿ ಸುವ್ಯವಸ್ಥೆ, ಅಪರಾಧ ನಿಗ್ರಹ ಕಾಪಾಡಲು ಜನಸ್ನೇಹಿ ಪೊಲೀಸಿಂಗ್ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನವಣೆ, ಡಿಸಿಪಿಗಳಾದ ಹರಿರಾಂ ಶಂಕರ್, ದಿನೇಶ್ ಕುಮಾರ್ ಉಪಸ್ಥಿತರಿದ್ದರು.
ADGP Alok Kumar in Mangalore, orders strict surveillance at Kerala border over drugs supply. He called upon the Commissioner of Police N Shashi Kumar, and Superintendent of Police Rishikesh Sonawane to conduct meetings with the police officers from the border districts especially Kasargod and Kannur on tackling NDPS cases. There is a need to interact and work in coordination with the police officers from border areas.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am