ಬ್ರೇಕಿಂಗ್ ನ್ಯೂಸ್
28-05-22 11:21 am Mangalore Correspondent ಕರಾವಳಿ
ಮಂಗಳೂರು, ಮೇ 28 : ಮಳಲಿ ಮಸೀದಿಯ ಬಗ್ಗೆ ತಾಂಬೂಲ ಪ್ರಶ್ನೆ ಇಟ್ಟು ಜ್ಯೋತಿಷ್ಯ ಕೇಳಿದ ಹಿಂದು ಸಂಘಟನೆಗಳಿಗೆ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಬಹಿರಂಗ ಸವಾಲು ಹಾಕಿದ್ದಾರೆ. ನಿಮಗೆ ತಾಕತ್ತಿದ್ದರೆ ಮಳಲಿ ಮಸೀದಿಯ ಒಂದು ಹಿಡಿ ಮರಳು ತೆಗೆದು ನೋಡಿ ಎಂದು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನ ಕಣ್ಣೂರಿನಲ್ಲಿ ಎಸ್ಡಿಪಿಐ ವತಿಯಿಂದ ನಡೆದ ಸಮಾವೇಶದಲ್ಲಿ ಮಳಲಿ ಮಸೀದಿ ವಿಚಾರದಲ್ಲಿ ಮಾತನಾಡಿದ ಅಬ್ದುಲ್ ಮಜೀದ್, ಬಿಜೆಪಿ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ನೀವು ಮಳಲಿ ಮಸೀದಿ ಬಗ್ಗೆ ತಾಂಬೂಲ ಪ್ರಶ್ನೆ ಇಡುವವರು ಮೊದಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಬಾಂಬ್ ಇಟ್ಟು ಒಡೆದು ಹಾಕಿದ ಸುಕ್ಕಲಮ್ಮ ದೇವಸ್ಥಾನದ ಬಗ್ಗೆ ತಾಂಬೂಲ ಪ್ರಶ್ನೆ ಇಡಿ. 200 ವರ್ಷಗಳಿಗಿಂತಲೂ ಹಳೆಯದಾದ ಸುಕ್ಕಲಮ್ಮ ದೇವಸ್ಥಾನವನ್ನು ಗಣಿಗಾರಿಕೆ ನೆಪದಲ್ಲಿ ಬಿಜೆಪಿಯ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಸಚಿವ ಶ್ರೀರಾಮುಲು ಒಡೆದು ಹಾಕಿದ್ದಾರೆ. ಅದನ್ನು ಒಡೆದು ಹಾಕಿದಾಗ ಹಿಂದು ಸಂಘಟನೆಗಳಿಗೆ ಯಾಕೆ ಕಣ್ಣಿಗೆ ಕಾಣಿಸಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
ನೀವು ತಾಂಬೂಲ ಅಥವಾ ಇನ್ಯಾವುದನ್ನೇ ಮಾಡಿ. ನೀವು ತಾಕತ್ತಿದ್ದರೆ ಮಳಲಿ ಮಸೀದಿಯ ಒಂದು ಹಿಡಿ ಮರಳನ್ನು ಎತ್ತಿಬಿಡಿ. ಆಮೇಲೆ ನಮ್ಮ ತಾಕತ್ತು ನೋಡಿ ಎಂದು ಸವಾಲು ಹಾಕಿದ್ದಾರೆ. ಸಮಾವೇಶದಲ್ಲಿ ಐದು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದರು. ಅಬ್ದುಲ್ ಮಜೀದ್ ಭಾಷಣದ ವಿಡಿಯೋ ಈಗ ಭಾರೀ ವೈರಲ್ ಆಗಿದ್ದು ಕೋಮು ಸಾಮರಸ್ಯ ಕದಡಲು ಪ್ರೇರಣೆಯಾಗುತ್ತಿದೆ.
Mangalore SDPI President Abdul Majeed challenges Vhp, says they can't even touch little soil of Malali mosque. He alleged that Janardhana Reddy has destroyed a temple in Bellary by blasting it he said why there can't be a thambula prashne.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 07:10 pm
Mangalore Correspondent
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm