ಬ್ರೇಕಿಂಗ್ ನ್ಯೂಸ್
28-05-22 10:26 pm Mangalore Correspondent ಕರಾವಳಿ
ಮಂಗಳೂರು, ಮೇ 28: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಒಬ್ಬ ಅತ್ಯಂತ ಅಸಮರ್ಥ ಜನಪ್ರತಿನಿಧಿ. ಇಂಥ ವ್ಯಕ್ತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಕುಂಠಿತಗೊಂಡಿದೆ. ಪಂಪ್ವೆಲ್ ಮೇಲ್ಸೇತುವೆ ಪೂರ್ಣಗೊಳಿಸಲು ಹತ್ತು ವರ್ಷಕ್ಕೂ ಹೆಚ್ಚು ಕಾಲ ಬೇಕಾಗಿ ಬಂದಿದ್ದು ಈ ವ್ಯಕ್ತಿಯ ಅಸಾಮರ್ಥ್ಯಕ್ಕೆ ಸಾಕ್ಷಿ. 13 ವರ್ಷಗಳ ಸಂಸದನ ಕಾಲದಲ್ಲಿ ಜಿಲ್ಲೆಯ ಶಾಲೆಗಳು, ಆಸ್ಪತ್ರೆಗಳು ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗಿವೆ ಎಂದು ಆಮ್ ಆದ್ಮಿ ಪಕ್ಷದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರಭಾರಿ, ನಿವೃತ್ತ ಅಧಿಕಾರಿ ಕೆ.ಮಥಾಯಿ ಟೀಕಿಸಿದ್ದಾರೆ.
2014ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಡಾಲರ್ ಗೆ 15 ರೂಪಾಯಿ ಆಗುತ್ತದೆ ಎಂದು ನಳಿನ್ ಕುಮಾರ್ ಸುಳ್ಳು ಭರವಸೆಗಳನ್ನು ನೀಡಿದ್ದರು. ಈ ವ್ಯಕ್ತಿಯ ಸುಳ್ಳುಗಳು ಎಷ್ಟೆಂದರೆ, ಡಾಲರ್ ರೇಟ್ ಎಷ್ಟೆನ್ನುವುದೇ ಈ ಮನುಷ್ಯನಿಗೆ ತಿಳಿದಿಲ್ಲ. ಎಂಟು ವರ್ಷಗಳ ಮೋದಿ ಆಳ್ವಿಕೆಯಲ್ಲಿ ಮೂರ್ಖತನದ ಆರ್ಥಿಕ ನೀತಿಗಳ ಪರಿಣಾಮ ಡಾಲರ್ ದರ ಮತ್ತಷ್ಟು ಏರಿಕೆಯಾಗಿದ್ದು, ಈಗ ಒಂದು ಡಾಲರ್ ದರ 77 ರೂ. ಆಗಿದೆ. ಈಗ ಡಾಲರ್ ದರದ ಬಗ್ಗೆ ಮಾತನಾಡಲು ನಳಿನ್ ಕುಮಾರ್ ತಯಾರಿದ್ದಾರೆಯೇ ಎಂದು ಮಥಾಯಿ ಪ್ರಶ್ನೆ ಮಾಡಿದ್ದಾರೆ.

ಸಂಸದ ನಳಿನ್ ಕುಮಾರ್ 13 ವರ್ಷಗಳಲ್ಲಿ ತಮ್ಮ ಅಸಾಮರ್ಥ್ಯದಿಂದಾಗಿ ಸಮಸ್ಯೆಗಳ ಸರಮಾಲೆಯನ್ನೇ ಜಿಲ್ಲೆಯಲ್ಲಿ ಸೃಷ್ಟಿಸಿದ್ದಾರೆ. ಇಂಥ ವ್ಯಕ್ತಿ ಈಗ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ. ಹೀಗಿದ್ದರೂ ಜಿಲ್ಲೆಯ ಸರಕಾರಿ ಶಾಲೆಗಳು ಮೂಲ ಸೌಕರ್ಯಗಳಿಲ್ಲದೆ ನಲುಗುತ್ತಿವೆ. ಇವರು ತಾಕತ್ತಿದ್ದರೆ, ನಮ್ಮ ಒಟ್ಟಿಗೆ ಯಾವುದಾದ್ರೂ ಒಂದು ಸರಕಾರಿ ಶಾಲೆಗೆ ಬರಲಿ. ಜೊತೆಗೆ ಹೋಗಿ ಪರಿಶೀಲನೆ ಮಾಡಲು ರೆಡಿ ಇದ್ದೇವೆ ಎಂದು ಹೇಳಿದರು. ನಾನು ಅಧಿಕಾರದಲ್ಲಿದ್ದಷ್ಟು ದಿನ ಭ್ರಷ್ಟಾಚಾರದ ವಿಚಾರದಲ್ಲಿ ರಾಜಿ ಮಾಡಿಕೊಂಡಿಲ್ಲ. ಭ್ರಷ್ಟಾಚಾರ ತಡೆಯುವುದಕ್ಕೆ ನನ್ನಿಂದಾದಷ್ಟು ಪ್ರಯತ್ನ ಪಟ್ಟಿದ್ದೇನೆ. ನನ್ನ ದಿಟ್ಟ ಧೋರಣೆಯ ಕಾರಣಕ್ಕೆ 18 ವರ್ಷಗಳಲ್ಲಿ 28 ಬಾರಿ ವರ್ಗಾವಣೆ ಆಗುವಂತಾಗಿತ್ತು. ಆದರೂ ನಾನು ಎದೆಗುಂದಿಲ್ಲ. ಆಮ್ ಆದ್ಮಿ ಪಾರ್ಟಿಯಿಂದಾಗಿ ನಾನು ಈಗಲೂ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುತ್ತಿದ್ದೇನೆ ಎಂದರು.
ಆಮ್ ಆದ್ಮಿ ಪಾರ್ಟಿಯು ದೇಶದ ಇತಿಹಾಸ ಕಂಡ ಏಕೈಕ ಪ್ರಾಮಾಣಿಕ ಪಕ್ಷ. ಎಂದೂ ಭ್ರಷ್ಟಾಚಾರ ಸಹಿಸಲ್ಲ ಎಂಬುದು ಇತ್ತೀಚೆಗೆ ಪಂಜಾಬ್ ನಲ್ಲಿ ನಡೆದ ಘಟನೆಯಿಂದ ಸಾಬೀತಾಗಿದೆ. ತಮ್ಮದೇ ಸರಕಾರದ ಆರೋಗ್ಯ ಸಚಿವರು ಒಂದು ಪರ್ಸೆಂಟ್ ಕಮಿಷನ್ ಪಡೆದಿದ್ದನ್ನು ತಿಳಿದ ಸಿಎಂ ಭಗವಂತ ಮಾನ್, ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿ ತನಿಖೆಗೆ ಆದೇಶಿಸಿದ್ದಾರೆ. ಬಿಜೆಪಿ ಆಡಳಿತ ಇರುವ ಕರ್ನಾಟಕದಲ್ಲಿ ಸಚಿವರ ವಿರುದ್ಧ ಸಾಲು ಸಾಲು ಭ್ರಷ್ಟಾಚಾರದ ಆರೋಪಗಳಿವೆ. ಜನರು ರಾಜಿನಾಮೆಗೆ ಆಗ್ರಹಿಸುತ್ತಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ. ಭ್ರಷ್ಟಾಚಾರವನ್ನೇ ಹೊದ್ದು ಮಲಗಿರುವ ಬಿಜೆಪಿಯನ್ನು ಅಧಿಕಾರದಿಂದ ಇಳಿಸಿ ಎಎಪಿಯನ್ನು ಅಧಿಕಾರಕ್ಕೇರಿಸಬೇಕು ಎಂದು ಮಥಾಯಿ ಮನವಿ ಮಾಡಿದ್ದಾರೆ.
ಆಪ್ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ರಾಜ್ಯ ಕಮಿಟಿ ಸದಸ್ಯ ಅಶೋಕ್ ಎಡಮಲೆ, ಜೆಪಿ ರಾವ್. ವೇಣುಗೋಪಾಲ್ ಉಪಸ್ಥಿತರಿದ್ದರು.
Aam Aadmi Party (AAP), Mathai slammed Nalin Kumar Kateel over development in Dakshin Kannada during a press meet held at press club in Mangalore.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:17 pm
HK News Desk
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm