ಬ್ರೇಕಿಂಗ್ ನ್ಯೂಸ್
30-05-22 12:29 pm Mangalore Correspondent ಕರಾವಳಿ
ಮಂಗಳೂರು, ಮೇ 30: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಇಂದು ಕೂಡ ಹೈಡ್ರಾಮಾ ನಡೆದಿದ್ದು ಹಿಜಾಬ್ ತೆಗೆಯಲ್ಲ ಎಂದು ಪಟ್ಟು ಹಿಡಿದ 16 ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ್ದಾರೆ.
ವಿವಿ ಪದವಿ ಕಾಲೇಜಿನಲ್ಲಿ ಸೋಮವಾರದಿಂದ ಹಿಜಾಬ್ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಿಡಿಸಿ ಸಭೆಯಲ್ಲಿ ನಿರ್ಣಯ ಆಗಿರುವುದರಿಂದ ಪ್ರಾಂಶುಪಾಲೆ ಅನಸೂಯಾ ರೈ ಇಂದು ಖಡಕ್ಕಾಗಿ ನಿಲುವು ತೆಗೆದುಕೊಂಡಿದ್ದಾರೆ. ಬುರ್ಖಾ, ಹಿಜಾಬ್ ಹಾಕ್ಕೊಂಡು ಬಂದ ವಿದ್ಯಾರ್ಥಿನಿಯರು ಕಾಲೇಜು ಆವರಣಕ್ಕೆ ಬಂದು ಅಲ್ಲಿಂದ ಹಿಜಾಬ್ ತೆಗೆದಿಟ್ಟು ತರಗತಿಗೆ ತೆರಳಬೇಕೆಂದು ಸೂಚನೆ ನೀಡಿದ್ದರು. ಅದರಂತೆ, ಇಂದು ಬೆಳಗ್ಗೆ ಕಾಲೇಜು ಗೇಟ್ ನಲ್ಲಿಯೇ ನಿಂತಿದ್ದ ಸೆಕ್ಯುರಿಟಿ ಗಾರ್ಡ್ ವಿದ್ಯಾರ್ಥಿಗಳನ್ನು ಪಾಸ್ ಪರಿಶೀಲಿಸಿ ಒಳಬಿಡುತ್ತಿದ್ದರು. ಆದರೆ ಮೊನ್ನೆ ತರಗತಿ ಬಹಿಷ್ಕರಿಸಿ ಹೊರನಡೆದಿದ್ದ 12 ಮಂದಿ ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ತರಗತಿಗೆ ಹೋಗದೆ ಹೊರಗಡೆ ನಿಂತಿದ್ದಾರೆ. ಜಿಲ್ಲಾಧಿಕಾರಿ ಸ್ಥಳಕ್ಕೆ ಬರುತ್ತಾರೆಂಬ ನಿರೀಕ್ಷೆ ಹುಸಿಯಾಗುತ್ತಲೇ ಅಲ್ಲಿಂದ ನಡೆದುಕೊಂಡು ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ್ದಾರೆ.



ಆದರೆ ಇಂದು ಮತ್ತಿಬ್ಬರು ಈ ತಂಡಕ್ಕೆ ಸೇರಿಕೊಂಡಿದ್ದು ಮಾಧ್ಯಮಗಳ ಕ್ಯಾಮರಾ ಎದುರಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ನಡೆದು ತೆರಳಿದ್ದಾರೆ. ಕಚೇರಿಯಲ್ಲಿ ಡೀಸಿ ಇರದ ಕಾರಣ ಅಲ್ಲಿಯೇ ಹೊರಗಡೆ ಕಾದು ಕುಳಿತಿದ್ದಾರೆ. ಜಿಲ್ಲಾಧಿಕಾರಿ ರಾಜೇಂದ್ರ, ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಪ್ರತ್ಯೇಕ ಸಭೆಯಲ್ಲಿ ಪಾಲ್ಗೊಂಡಿದ್ದ ಕಾರಣ 12 ಗಂಟೆ ಸುಮಾರಿಗೆ ಡೀಸಿ ಕಚೇರಿಗೆ ಆಗಮಿಸಿದ್ದಾರೆ. ಸೇರಿದ್ದ 16 ವಿದ್ಯಾರ್ಥಿನಿಯರ ಜೊತೆಗೆ ಜಿಲ್ಲಾಧಿಕಾರಿ ಮಾತುಕತೆ ನಡೆಸಿದ್ದು ಮನವೊಲಿಕೆಗೆ ಪ್ರಯತ್ನ ಪಟ್ಟಿದ್ದಾರೆ. ವಿದ್ಯಾರ್ಥಿನಿಯರು ಯಾವುದೇ ಮೀಡಿಯಾಕ್ಕೂ ಪ್ರತಿಕ್ರಿಯೆ ಕೊಡಲು ನಿರಾಕರಿಸಿದ್ದಾರೆ. ಅಲ್ಲದೆ, ಟಿವಿ ಕ್ಯಾಮರಾಗಳು ಜೊತೆಗೆ ಬಂದಿದ್ದಕ್ಕೆ ನಿಮಗ್ಯಾರೂ ಅಕ್ಕ ತಂಗಿಯರಿಲ್ಲವೇ ಎಂದು ಟೀಕೆಯನ್ನೂ ಮಾಡಿದ್ದಾರೆ.




ಹೈಕೋರ್ಟ್ ಹಿಜಾಬ್ ಕುರಿತ ತೀರ್ಪಿನಲ್ಲಿ ಪ್ರಾಥಮಿಕ, ಪ್ರೌಢಶಾಲೆ, ಪಿಯು ತರಗತಿಗಳಿಗೆ ಮಾತ್ರ ಸಮವಸ್ತ್ರ ಕಡ್ಡಾಯ ಎಂದು ಸೂಚಿಸಿದೆ. ಪದವಿ ಕಾಲೇಜಿನ ಬಗ್ಗೆ ಉಲ್ಲೇಖ ಇಲ್ಲ ಎನ್ನುವುದು ವಿದ್ಯಾರ್ಥಿನಿಯರ ವಾದ. ಹೀಗಾಗಿ ಸರಕಾರಿ ಪದವಿ ಕಾಲೇಜಿನಲ್ಲಿ ತಮಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ. ಆದರೆ ಯಾವುದೇ ಶಿಕ್ಷಣ ಸಂಸ್ಥೆಯಲ್ಲೂ ಕಾಲೇಜಿನ ಆಡಳಿತ ಸಮವಸ್ತ್ರ ಕಡ್ಡಾಯಗೊಳಿಸಿದ್ದರೆ ಅಲ್ಲಿಗೆ ಹಿಜಾಬ್ ತೀರ್ಪು ಅನ್ವಯ ಆಗುತ್ತದೆ ಎನ್ನುವುದು ಕಾಲೇಜು ಆಡಳಿತದ ನಿಲುವು. ಹೀಗಾಗಿ ಹಂಪನಕಟ್ಟೆ ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯ ಮೊದಲಿನಿಂದಲೂ ಇದೆ, ಹಿಜಾಬ್ ತೀರ್ಪು ಪಾಲನೆಯಾಗಬೇಕೆಂದು ಶಾಸಕರ ನೇತೃತ್ವದ ಕಾಲೇಜು ಅಭಿವೃದ್ಧಿ ಸಮಿತಿ ನಿರ್ಣಯಿಸಿದೆ.
Hijab row, students with hijab on Monday we're again sent back from Mangalore university as they denied to remove Hijab to enter the classrooms, 16 students with Hijab have approached DC Dr Rajendra Kumar for help. A meeting is going on with the students now.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm