ಬ್ರೇಕಿಂಗ್ ನ್ಯೂಸ್
30-05-22 01:10 pm Mangalore Correspondent ಕರಾವಳಿ
ಮಂಗಳೂರು, ಮೇ 30: ಮೈಸೂರಿನಿಂದ ಹಲಸಿನ ಮೇಳಕ್ಕೆ ಬಂದವರಿಬ್ಬರು ಎರಡು ದಿನದ ವ್ಯಾಪಾರ ಮುಗಿಸಿ ಪಣಂಬೂರು ಬೀಚ್ ನೋಡಲೆಂದು ಹೋಗಿ ಸ್ನಾನಕ್ಕಿಳಿದು ಸಮುದ್ರಪಾಲಾಗಿರುವ ಘಟನೆ ನಡೆದಿದೆ.
ಮೈಸೂರಿನ ಜಯನಗರದ ನಾಲ್ಕನೇ ಕ್ರಾಸ್ ನಿವಾಸಿಗಳಾದ ದಿವಾಕರ ಆರಾಧ್ಯ(40), ನಿಂಗಪ್ಪ (65) ಮೃತರು. ಇವರು ಮೈಸೂರಿನ ಅಗ್ರಹಾರದಲ್ಲಿ ಆರಾಧ್ಯ ಫುಡ್ ಅಂಡ್ ಬೇವರೇಜಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಮಂಗಳೂರಿನ ಬಾಳಂ ಭಟ್ ಹಾಲ್ ನಲ್ಲಿ ಮೇ 28, 29ರಂದು ಎರಡು ದಿನಗಳ ಹಲಸಿನ ಮೇಳ ನಡೆದಿದ್ದು, ಅದರಲ್ಲಿ ಸ್ಟಾಲ್ ಹಾಕಲು ಬಂದಿದ್ದರು. ಶನಿವಾರ, ಭಾನುವಾರ ಎರಡು ದಿನಗಳಲ್ಲಿ ವ್ಯಾಪಾರ ಮುಗಿಸಿ, ಇಂದು ಬೆಳಗ್ಗೆ ನಾಲ್ವರು ಸೇರಿಕೊಂಡು ಪಣಂಬೂರು ಬೀಚ್ ಹೋಗಿದ್ದರು.
ಬೀಚ್ ನೋಡಿಕೊಂಡು ಬಳಿಕ ಮೈಸೂರಿಗೆ ಹೊರಡಲು ಪ್ಲಾನ್ ಹಾಕಿದ್ದರು. ಆದರೆ, ಬೀಚ್ ನಲ್ಲಿ ನೀರಾಟವಾಡುತ್ತಿದ್ದಾಗ ಅಲೆಗಳ ನಡುವೆ ಸಿಲುಕಿದ್ದು ಒಬ್ಬರನ್ನು ರಕ್ಷಿಸಲು ಹೋಗಿ ಇಬ್ಬರೂ ನೀರುಪಾಲಾಗಿದ್ದಾರೆ. ಇನ್ನಿಬ್ಬರು ಬಚಾವ್ ಆಗಿದ್ದಾರೆ. ಬಳಿಕ ಸ್ಥಳೀಯ ಮೀನುಗಾರರು ಬಂದು ಇಬ್ಬರ ಶವ ಮೇಲೆತ್ತಿದ್ದಾರೆ. ಹಲಸಿನ ಮೇಳದಲ್ಲಿ ಆಹಾರ ಸಾಮಗ್ರಿ ವ್ಯಾಪಾರಕ್ಕೆ ಬಂದಿದ್ದವರು ಬೀಚ್ ನೋಡುವ ಧಾವಂತದಲ್ಲಿ ದುರಂತ ಸಾವು ಕಂಡಿದ್ದಾರೆ.
Two from Mysuru drowned at Panambur Beach in Mangalore.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am