ಬ್ರೇಕಿಂಗ್ ನ್ಯೂಸ್
31-05-22 04:16 pm Mangalore Correspondent ಕರಾವಳಿ
ಉಳ್ಳಾಲ, ಮೇ 31 : ಹಿಜಾಬ್ ಪರ ಹೋರಾಟ ನಡೆಸುತ್ತಿರುವ ಹಂಪನಕಟ್ಟೆ ವಿವಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ನನ್ನಿಂದಾದ ನೆರವು ನೀಡಿದ್ದೇನೆ. ಆದರೂ, ತಮ್ಮ ಸಹಾಯಕ್ಕೆ ಬಂದಿಲ್ಲ. ನಾನು ಕ್ರಿಕೆಟ್ ಆಟದಲ್ಲಿ ನಿರತನಾಗಿದ್ದೇನೆ ಎಂದು ಹೇಳಿಕೆ ನೀಡಿದ್ದರ ಹಿಂದೆ ದುರುದ್ದೇಶ ಅಥವಾ ರಾಜಕೀಯ ಪ್ರೇರಣೆ ಇದೆಯೋ ಗೊತ್ತಿಲ್ಲ. ಹೆತ್ತವರೇ ಇವರ ಬಗ್ಗೆ ಕಾಳಜಿ ವಹಿಸಬೇಕೆಂದು ವಿಧಾನಸಭೆ ವಿಪಕ್ಷ ಉಪ ನಾಯಕ, ಶಾಸಕ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.
ಮಂಗಳೂರಿನ ವಿವಿ ಕಾಲೇಜಿನಲ್ಲಿ ಹಿಜಾಬ್ ಧರಿಸುವ ವಿಚಾರದಲ್ಲಿ ಪದವಿ ಕಾಲೇಜಿನ 16 ವಿದ್ಯಾರ್ಥಿನಿಯರು ಹೈಡ್ರಾಮ ನಡೆಸುತ್ತಿದ್ದು ಸೋಮವಾರ ತರಗತಿ ಬಹಿಷ್ಕರಿಸಿ ಜಿಲ್ಲಾಧಿಕಾರಿಗಳಲ್ಲಿ ತಮ್ಮ ಸಮಸ್ಯೆ ತೋಡಿಕೊಂಡಿದ್ದರು. ಜಿಲ್ಲಾಧಿಕಾರಿಗಳಲ್ಲೂ ತಮ್ಮ ಸಮಸ್ಯೆಗೆ ಪರಿಹಾರ ಸಿಗದೆ ಶಾಸಕ ಯು.ಟಿ ಖಾದರ್ ಅವರೂ ತಮ್ಮ ಸಹಾಯಕ್ಕೆ ಬಾರದೆ ಅಡ್ಯಾರಿನಲ್ಲಿ ನಡೆಯುತ್ತಿರುವ ಕ್ರಿಕೆಟ್ ಪಂದ್ಯಾಟದಲ್ಲಿ ನಿರತರಾಗಿರುವುದಾಗಿ ವಿದ್ಯಾರ್ಥಿನಿಯರು ಆರೋಪಿಸಿದ್ದರು.

ವಿದ್ಯಾರ್ಥಿನಿಯರ ಆರೋಪಕ್ಕೆ ಶಾಸಕ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದು ಅವರ ಹೇಳಿಕೆಯ ಹಿನ್ನಲೆಯನ್ನು ತಿಳಿದುಕೊಳ್ಳಬೇಕಾಗುತ್ತದೆ. ನನಗೆ ವಿದ್ಯಾರ್ಥಿನಿಯರ ಕರೆ ಬಂದಾಗ ನನ್ನಿಂದಾದ ನೆರವು ನೀಡಿದ್ದೇನೆ. ವಿ.ಸಿ, ಜಿಲ್ಲಾಧಿಕಾರಿ ಜೊತೆ ಮಾತುಕತೆಗೆ ಸಹಾಯ ಮಾಡಿದ್ದೇನೆ. ವಿದ್ಯಾರ್ಥಿನಿಯರಿಗೆ ಕಾನೂನನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ. ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಅವಕಾಶ ಇಲ್ಲ ಎಂದೂ ಹೇಳಿದ್ದು, ಕಾನೂನು ಪ್ರಕಾರ ಹೋರಾಟ ಮಾಡಲು ಸೂಚಿಸಿದ್ದೇನೆ.

ಆಬಳಿಕ ವಿದ್ಯಾರ್ಥಿನಿಯರು ಒಂದು ವಾರ ನನ್ನನ್ನು ಸಂಪರ್ಕ ಮಾಡಿಲ್ಲ. ಆಮೇಲೆ ನಾನೇ ವಿಸಿ ಜೊತೆ ಪೋನ್ ಮಾಡಿ ಮಾತನಾಡಿದ್ದು, ವಿದ್ಯಾರ್ಥಿನಿಯರಿಗೆ ಕಚೇರಿಯಿಂದ ಪೋನ್ ಮಾಡಿಸಿದ್ದಲ್ಲದೆ, ನಾನೇ ಖುದ್ದು ಫೋನ್ ಮಾಡಿದ್ದೇನೆ. ಆದರೆ ವಿದ್ಯಾರ್ಥಿನಿಯರು ಕರೆ ಸ್ವೀಕಾರ ಮಾಡದೆ ರಾಂಗ್ ನಂಬರ್ ಅಂತ ಹೇಳಿ ಕರೆ ಕಟ್ ಮಾಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸರ್ಕಾರದ ಚೀಫ್ ಸೆಕ್ರೆಟರಿ ಜೊತೆ ಮಾತನಾಡಿದ್ದು, ಸಮಸ್ಯೆಗಳನ್ನು ಶೀಘ್ರ ಬಗೆಹರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸೋದು ಹೆತ್ತವರು, ಅವರ ಶಾಲೆಯ ಫೀಸ್ ಕಟ್ಟೋದು ಹೆತ್ತವರು, ಅವರಿಗೆ ಡ್ರೆಸ್ ಕೊಡೋದು ಹೆತ್ತವರು, ಅವರಿಗೆ ಪುಸ್ತಕ ನೀಡೋದು ಕೂಡ ಹೆತ್ತವರು. ಈ ಸಮಸ್ಯೆಗೂ ಹೆತ್ತವರು ಮುಂದೆ ಬಂದು ಸಮಸ್ಯೆ ಬಗೆಹರಿಸಲಿ. ಕಾನೂನು ವಿರುದ್ಧವಾಗಿ ನಾನು ಯಾವುದೇ ರೀತಿಯ ಸಹಾಯ ಮಾಡುವುದಿಲ್ಲ ಎಂದರು.
Hijab row in Mangalore university, MLA UT Khader says am helpless. Dr Rajendra KV, Dakshina Kannada Deputy Commissioner (DC) on Monday, May 30, informed 12 Muslim girl students of University College Mangalore, an institution which is affiliated to Mangalore University, to follow the court order and syndicate decision banning hijab inside the classrooms.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm