ಬ್ರೇಕಿಂಗ್ ನ್ಯೂಸ್
31-05-22 10:27 pm Mangalore Correspondent ಕರಾವಳಿ
ಉಳ್ಳಾಲ, ಮೇ 31 : ಉಳ್ಳಾಲದ ಹೆಬ್ಬಾಗಿಲು ತೊಕ್ಕೊಟ್ಟು ಓವರ್ ಬ್ರಿಡ್ಜ್ ಜಂಕ್ಷನ್ನಲ್ಲಿ 110 ಅಡಿ ಎತ್ತರದ ಧ್ವಜಸ್ತಂಭ ನಿರ್ಮಾಣವಾಗಲಿದ್ದು, ಉಳ್ಳಾಲವನ್ನ ಪಾಕಿಸ್ತಾನ ಎಂದು ಮೂದಲಿಸಿದವರಿಗೆ ಉಳ್ಳಾಲದವರು ದೇಶಭಕ್ತರೆಂಬ ಸ್ಪಷ್ಟ ಸಂದೇಶ ರವಾನಿಸಲಾಗುವುದು ಎಂದು ವಿದಾನಸಭಾ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಟಾಂಗ್ ನೀಡಿದ್ದಾರೆ.
ರಾಜ್ಯ ಸರಕಾರದ ವಿಶೇಷ ಅನುದಾನದಲ್ಲಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ಜಂಕ್ಷನ್ನಲ್ಲಿ ನಿರ್ಮಾಣಗೊಳ್ಳಲಿರುವ 110 ಅಡಿ ಎತ್ತರದ ಧ್ವಜ ಸ್ತಂಭಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ತಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಳಗಾವಿ ಸಹಿತ ಇತರ ಜಿಲ್ಲೆಗಳಿಗೆ ಸಂಚರಿಸುವಾಗ ಅಲ್ಲಿನ ಎತ್ತರದ ಧ್ವಜ ಸ್ತಂಭಗಳನ್ನ ಕಂಡು ಮಂಗಳೂರು ಕ್ಷೇತ್ರದಲ್ಲೂ ಎತ್ತರದ ಧ್ವಜಸ್ತಂಭ ನಿರ್ಮಾಣಕ್ಕೆ ಯೋಜನೆ ಹಾಕಿದ್ದೆ. ಇದೀಗ ಸರಕಾರದಿಂದ ಧ್ವಜ ಸ್ತಂಭ ನಿರ್ಮಿಸಲು ಅನುದಾನ ಬಿಡುಗಡೆಯಾಗಿದ್ದು ಓವರ್ ಬ್ರಿಡ್ಜ್ ಜಂಕ್ಷನಲ್ಲಿ ಶೀಘ್ರವೇ 110 ಅಡಿ ಎತ್ತರದ ಸ್ತಂಭವು ತಲೆ ಎತ್ತಲಿದೆ ಎಂದರು.


ಇದಲ್ಲದೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಕೊಣಾಜೆ ತೆರಳುವ ರಸ್ತೆಯ ಅಂಚಿನ ಶಾಸಕರ ಕಚೇರಿ ಬಳಿಯೂ ರಸ್ತೆ ಅಗಲೀಕರಣ ಕಾಮಗಾರಿಯ ನಂತರ 110 ಅಡಿ ಎತ್ತರದ ಧ್ವಜ ಸ್ತಂಭ ನಿರ್ಮಾಣವಾಗಲಿದೆ ಎಂದರು.

ಓವರ್ ಬ್ರಿಡ್ಜ್ ಜಂಕ್ಷನಲ್ಲಿ ಧ್ವಜ ಸ್ತಂಭ ನಿರ್ಮಿಸಲು ಮೊದಲಿಗೆ ರಸ್ತೆ ಇಕ್ಕಟ್ಟಿನ ಸಮಸ್ಯೆ ಎದುರಾಗಿತ್ತು. ಇದೀಗ ಪಿಡಬ್ಲ್ಯೂಡಿ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಒಪ್ಪಿಗೆ ಪಡೆದು ಕಾಮಗಾರಿಯನ್ನ ಕೈಗೆತ್ತಿರುವುದಾಗಿ ಹೇಳಿದರು.

ಜಿಲ್ಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣ ಬಿಟ್ಟರೆ ಉಳ್ಳಾಲದಲ್ಲಿ ಅತೀ ಎತ್ತರದ ಧ್ವಜ ಸ್ತಂಭ ನಿರ್ಮಾಣಗೊಂಡು ಪ್ರವಾಸಿಗರ ಆಕರ್ಷಣೆ ಕೇಂದ್ರವಾಗುವುದು. ಇದಲ್ಲದೆ ಉಳ್ಳಾಲವನ್ನ ಹಾಗೆ, ಹೀಗೆ ಎಂದವರಿಗೂ ಉಳ್ಳಾಲದವರು ಅಪ್ರತಿಮ ದೇಶ ಭಕ್ತರೆಂಬ ಸ್ಪಷ್ಟ ಸಂದೇಶ ರವಾನೆಯಾಗುತ್ತದೆ ಎಂದು ಖಾದರ್ ಹೇಳಿದರು.
Mangalore 110 feet flag pole to get ready at Ullal, Khader slams those who called ullal Mini Pakisthan during the event.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm