ಬ್ರೇಕಿಂಗ್ ನ್ಯೂಸ್
28-09-20 12:29 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 28: ದ.ಕ. ಜಿಲ್ಲಾಧಿಕಾರಿ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಯ ಹೊರಭಾಗದಲ್ಲಿ ವ್ಯಾಪಾರ ಶುರುವಾಗಿದೆ. ಆದರೆ, ಮಾರುಕಟ್ಟೆ ಒಳಪ್ರವೇಶಕ್ಕೆ ಪಾಲಿಕೆ ಅಧಿಕಾರಿಗಳು ಅವಕಾಶ ಕೊಟ್ಟಿಲ್ಲ. ಹೀಗಾಗಿ ಹೊರಗಿನ ವಹಿವಾಟು ಮಾತ್ರ ಆರಂಭಗೊಂಡಿದೆ.
ಪರವಾನಗಿ ಪರಿಶೀಲಿಸಿ, ಮಹಾನಗರ ಪಾಲಿಕೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿದ್ದರಿಂದ ಸೆಂಟ್ರಲ್ ಮಾರುಕಟ್ಟೆ ಕಟ್ಟಡದ ಹೊರ ಆವರಣದಲ್ಲಿ ಪಾತ್ರೆ, ತರಕಾರಿ, ಹಣ್ಣು, ಪ್ಲಾಸ್ಟಿಕ್ ಸಾಮಗ್ರಿ ಮೊದಲಾದ 25ಕ್ಕೂ ಅಧಿಕ ಅಂಗಡಿಗಳು ತೆರೆದಿವೆ. ಮಾರುಕಟ್ಟೆ ಪ್ರವೇಶದ ಗೇಟ್ಗಳಿಗೆ ಅಳವಡಿಸಿದ್ದ ಬೀಗ ತೆಗೆಯದ ಕಾರಣ ಒಳಭಾಗದ ವಹಿವಾಟು ಇನ್ನೂ ಆರಂಭಗೊಂಡಿಲ್ಲ.
ಹೊರಭಾಗದ ಅಂಗಡಿಗಳಲ್ಲಿ ನೀರು ಹಾಗೂ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದು ವ್ಯಾಪಾರಸ್ಥರು ತಮ್ಮ ಅಗತ್ಯಕ್ಕಾಗಿ ಜನರೇಟರ್ ಬಳಸಿ ವ್ಯಾಪಾರ ಮಾಡುತ್ತಿದ್ದಾರೆ. ಕಳೆದ ಆರು ತಿಂಗಳಿಂದ ಬಂದ್ ಆಗಿದ್ದ ಕಾರಣ ಅಂಗಡಿಯಲ್ಲಿದ್ದ ಕೆಲವು ವಸ್ತುಗಳು ಹಾಳಾಗಿವೆ. ಮಳೆಗಾಲ ಆಗಿರುವುದರಿಂದ ವಸ್ತುಗಳಿಗೆ ಫಂಗಸ್ ಬಂದಿದೆ. ಇದರಿಂದ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
ಲೈಸನ್ಸ್ ಇದ್ದವರಿಗೆ ಮಾತ್ರ ಅವಕಾಶ
ಸೆಂಟ್ರಲ್ ಮಾರುಕಟ್ಟೆಯಲ್ಲಿ 264 ಅಂಗಡಿಗಳಿದ್ದು ಪರವಾನಗಿ ಹೊಂದಿದವರೇ ವ್ಯಾಪಾರ ನಡೆಸುತ್ತಿಲ್ಲ. ಅದನ್ನು ಇನ್ಯಾರಿಗೋ ನಡೆಸಲು ಕೊಟ್ಟಿರುವುದು ಗಮನಕ್ಕೆ ಬಂದಿದೆ. ಮೂಲ ಪರವಾನಗಿ ಹೊಂದಿರುವವರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ ಹೇಳಿರುವುದು ವ್ಯಾಪಾರಿಗಳಿಗೆ ಸಂಕಷ್ಟಕ್ಕೀಡು ಮಾಡಿದೆ.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm