ಬ್ರೇಕಿಂಗ್ ನ್ಯೂಸ್
28-09-20 12:29 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 28: ದ.ಕ. ಜಿಲ್ಲಾಧಿಕಾರಿ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಯ ಹೊರಭಾಗದಲ್ಲಿ ವ್ಯಾಪಾರ ಶುರುವಾಗಿದೆ. ಆದರೆ, ಮಾರುಕಟ್ಟೆ ಒಳಪ್ರವೇಶಕ್ಕೆ ಪಾಲಿಕೆ ಅಧಿಕಾರಿಗಳು ಅವಕಾಶ ಕೊಟ್ಟಿಲ್ಲ. ಹೀಗಾಗಿ ಹೊರಗಿನ ವಹಿವಾಟು ಮಾತ್ರ ಆರಂಭಗೊಂಡಿದೆ.
ಪರವಾನಗಿ ಪರಿಶೀಲಿಸಿ, ಮಹಾನಗರ ಪಾಲಿಕೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿದ್ದರಿಂದ ಸೆಂಟ್ರಲ್ ಮಾರುಕಟ್ಟೆ ಕಟ್ಟಡದ ಹೊರ ಆವರಣದಲ್ಲಿ ಪಾತ್ರೆ, ತರಕಾರಿ, ಹಣ್ಣು, ಪ್ಲಾಸ್ಟಿಕ್ ಸಾಮಗ್ರಿ ಮೊದಲಾದ 25ಕ್ಕೂ ಅಧಿಕ ಅಂಗಡಿಗಳು ತೆರೆದಿವೆ. ಮಾರುಕಟ್ಟೆ ಪ್ರವೇಶದ ಗೇಟ್ಗಳಿಗೆ ಅಳವಡಿಸಿದ್ದ ಬೀಗ ತೆಗೆಯದ ಕಾರಣ ಒಳಭಾಗದ ವಹಿವಾಟು ಇನ್ನೂ ಆರಂಭಗೊಂಡಿಲ್ಲ.
ಹೊರಭಾಗದ ಅಂಗಡಿಗಳಲ್ಲಿ ನೀರು ಹಾಗೂ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದು ವ್ಯಾಪಾರಸ್ಥರು ತಮ್ಮ ಅಗತ್ಯಕ್ಕಾಗಿ ಜನರೇಟರ್ ಬಳಸಿ ವ್ಯಾಪಾರ ಮಾಡುತ್ತಿದ್ದಾರೆ. ಕಳೆದ ಆರು ತಿಂಗಳಿಂದ ಬಂದ್ ಆಗಿದ್ದ ಕಾರಣ ಅಂಗಡಿಯಲ್ಲಿದ್ದ ಕೆಲವು ವಸ್ತುಗಳು ಹಾಳಾಗಿವೆ. ಮಳೆಗಾಲ ಆಗಿರುವುದರಿಂದ ವಸ್ತುಗಳಿಗೆ ಫಂಗಸ್ ಬಂದಿದೆ. ಇದರಿಂದ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
ಲೈಸನ್ಸ್ ಇದ್ದವರಿಗೆ ಮಾತ್ರ ಅವಕಾಶ
ಸೆಂಟ್ರಲ್ ಮಾರುಕಟ್ಟೆಯಲ್ಲಿ 264 ಅಂಗಡಿಗಳಿದ್ದು ಪರವಾನಗಿ ಹೊಂದಿದವರೇ ವ್ಯಾಪಾರ ನಡೆಸುತ್ತಿಲ್ಲ. ಅದನ್ನು ಇನ್ಯಾರಿಗೋ ನಡೆಸಲು ಕೊಟ್ಟಿರುವುದು ಗಮನಕ್ಕೆ ಬಂದಿದೆ. ಮೂಲ ಪರವಾನಗಿ ಹೊಂದಿರುವವರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ ಹೇಳಿರುವುದು ವ್ಯಾಪಾರಿಗಳಿಗೆ ಸಂಕಷ್ಟಕ್ಕೀಡು ಮಾಡಿದೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm