ಬ್ರೇಕಿಂಗ್ ನ್ಯೂಸ್
28-09-20 12:29 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 28: ದ.ಕ. ಜಿಲ್ಲಾಧಿಕಾರಿ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಯ ಹೊರಭಾಗದಲ್ಲಿ ವ್ಯಾಪಾರ ಶುರುವಾಗಿದೆ. ಆದರೆ, ಮಾರುಕಟ್ಟೆ ಒಳಪ್ರವೇಶಕ್ಕೆ ಪಾಲಿಕೆ ಅಧಿಕಾರಿಗಳು ಅವಕಾಶ ಕೊಟ್ಟಿಲ್ಲ. ಹೀಗಾಗಿ ಹೊರಗಿನ ವಹಿವಾಟು ಮಾತ್ರ ಆರಂಭಗೊಂಡಿದೆ.
ಪರವಾನಗಿ ಪರಿಶೀಲಿಸಿ, ಮಹಾನಗರ ಪಾಲಿಕೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿದ್ದರಿಂದ ಸೆಂಟ್ರಲ್ ಮಾರುಕಟ್ಟೆ ಕಟ್ಟಡದ ಹೊರ ಆವರಣದಲ್ಲಿ ಪಾತ್ರೆ, ತರಕಾರಿ, ಹಣ್ಣು, ಪ್ಲಾಸ್ಟಿಕ್ ಸಾಮಗ್ರಿ ಮೊದಲಾದ 25ಕ್ಕೂ ಅಧಿಕ ಅಂಗಡಿಗಳು ತೆರೆದಿವೆ. ಮಾರುಕಟ್ಟೆ ಪ್ರವೇಶದ ಗೇಟ್ಗಳಿಗೆ ಅಳವಡಿಸಿದ್ದ ಬೀಗ ತೆಗೆಯದ ಕಾರಣ ಒಳಭಾಗದ ವಹಿವಾಟು ಇನ್ನೂ ಆರಂಭಗೊಂಡಿಲ್ಲ.
ಹೊರಭಾಗದ ಅಂಗಡಿಗಳಲ್ಲಿ ನೀರು ಹಾಗೂ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದು ವ್ಯಾಪಾರಸ್ಥರು ತಮ್ಮ ಅಗತ್ಯಕ್ಕಾಗಿ ಜನರೇಟರ್ ಬಳಸಿ ವ್ಯಾಪಾರ ಮಾಡುತ್ತಿದ್ದಾರೆ. ಕಳೆದ ಆರು ತಿಂಗಳಿಂದ ಬಂದ್ ಆಗಿದ್ದ ಕಾರಣ ಅಂಗಡಿಯಲ್ಲಿದ್ದ ಕೆಲವು ವಸ್ತುಗಳು ಹಾಳಾಗಿವೆ. ಮಳೆಗಾಲ ಆಗಿರುವುದರಿಂದ ವಸ್ತುಗಳಿಗೆ ಫಂಗಸ್ ಬಂದಿದೆ. ಇದರಿಂದ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
ಲೈಸನ್ಸ್ ಇದ್ದವರಿಗೆ ಮಾತ್ರ ಅವಕಾಶ
ಸೆಂಟ್ರಲ್ ಮಾರುಕಟ್ಟೆಯಲ್ಲಿ 264 ಅಂಗಡಿಗಳಿದ್ದು ಪರವಾನಗಿ ಹೊಂದಿದವರೇ ವ್ಯಾಪಾರ ನಡೆಸುತ್ತಿಲ್ಲ. ಅದನ್ನು ಇನ್ಯಾರಿಗೋ ನಡೆಸಲು ಕೊಟ್ಟಿರುವುದು ಗಮನಕ್ಕೆ ಬಂದಿದೆ. ಮೂಲ ಪರವಾನಗಿ ಹೊಂದಿರುವವರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ ಹೇಳಿರುವುದು ವ್ಯಾಪಾರಿಗಳಿಗೆ ಸಂಕಷ್ಟಕ್ಕೀಡು ಮಾಡಿದೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am