ಬ್ರೇಕಿಂಗ್ ನ್ಯೂಸ್
01-06-22 10:40 pm Mangalore Correspondent ಕರಾವಳಿ
ಕಾರ್ಕಳ, ಜೂನ್ 1 : ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಗ್ರೀನ್ ಪವರ್ ಆಧರಿತ ಕೈಗಾರಿಕಾ ಹಬ್ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
108 ಕೋಟಿ ರೂ. ವೆಚ್ಚದಲ್ಲಿ ಕಾರ್ಕಳ ತಾಲೂಕಿನ ಎಣ್ಣೆಹೊಳೆಯಲ್ಲಿ ಏತ ನೀರಾವರಿ ಯೋಜನೆಯನ್ನು ಬುಧವಾರ ಉದ್ಘಾಟಿಸಿ ಸಿಎಂ ಬೊಮ್ಮಾಯಿ ಮಾತನಾಡಿದರು.
ಮಂಗಳೂರಿನಲ್ಲಿ ವಿದೇಶಕ್ಕೆ ರಫ್ತು ಮಾಡುವ ಗುಣಮಟ್ಟದ ಪೀಠೋಪಕರಣಗಳ ನಿರ್ಮಾಣಕ್ಕೆ ಫರ್ನಿಚರ್ ಕ್ಲಸ್ಟರ್ ಮಾಡಲಾಗುವುದು. ಕಾರ್ಕಳದಲ್ಲಿ ಶಿಲ್ಪ ಕಲೆ, ಮರದ ಕೆತ್ತನೆ ಕ್ಲಸ್ಟರಿಗೆ ಜಾಗ ನೀಡಿದರೆ ತೆರಿಗೆ ವಿನಾಯಿತಿ ನೀಡಲಾಗುವುದು. ಮಂಗಳೂರು, ಕಾರವಾರ ಬಂದರು ವಿಸ್ತರಣೆ ಜತೆಗೆ ಎಂಟು ಹೊಸ ಬಂದರು ನಿರ್ಮಾಣ ಕಾರ್ಯಕ್ಕೆ ಟೆಂಡರ್ ಕರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಬೀಚ್ ಟೂರಿಸಂ, ಧಾರ್ಮಿಕ ಟೂರಿಸಂಗೆ ಒತ್ತು ನೀಡಲಿದ್ದು, ಕಾರ್ಕಳದಲ್ಲಿ ಜವಳಿ ಪಾರ್ಕ್ ಶೀಘ್ರ ಆರಂಭವಾಗಲಿದೆ. ರೈತ ವಿದ್ಯಾ ನಿಧಿಯಡಿ 8 ಲಕ್ಷ ರೈತರ ಮಕ್ಕಳಿಗೆ ಅನುಕೂಲವಾಗಿದೆ. ಎಣ್ಣೆಹೊಳೆ ಏತ ನೀರಾವರಿ ಹೆಚ್ಚುವರಿ ಯೋಜನೆಗೆ 43 ಕೋಟಿ ರೂ. ಮಂಜೂರು ಮಾಡಲಾಗುವುದು ಎಂದರು.

ಸುನಿಲ್ ಎಂದರೆ ಶಕ್ತಿ, ಇಂಧನ
ರಾಜ್ಯದಲ್ಲಿ ಈಗ ಎಲ್ಲೆಲ್ಲೂ ಸುನಿಲ್ ಹೆಸರು ಕೇಳುತ್ತಿದ್ದು, ಸುನಿಲ್ ಎಂದರೆ ಸ್ಛೂರ್ತಿ, ಶಕ್ತಿ, ಇಂಧನ. ಕ್ಷೇತ್ರಗಳ ಸಮಗ್ರ ಅಭಿವೃದ್ಧಿ ಮೂಲಕ ಕಟ್ಟಕಡೆಯ ಬಡವರಿಗೂ ಮೂಲಭೂತ ಸೌಲಭ್ಯ ಒದಗಿಸಿದ ಹೆಮ್ಮೆ ಸಿಎಂ ಬೊಮ್ಮಾಯಿ ನೇತೃತ್ವದ ಸರಕಾರಕ್ಕಿದೆ. ಉತ್ತರ ಕನ್ನಡ ಜಿಲ್ಲೆಯ 9,500 ಬಡವರ ಮನೆಗಳಿಗೆ 12 ಕೋಟಿ ರೂ. ವೆಚ್ಚದಲ್ಲಿ ಸಚಿವ ಸುನಿಲ್ ಬೆಳಕು ಒದಗಿಸಿದ್ದಾರೆ ಎಂದು ರಾಜ್ಯ ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶ್ಲಾಘಿಸಿದರು.

ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಎಣ್ಣೆಹೊಳೆ ಏತ ನೀರಾವರಿ ಯೋಜನೆಯಡಿ 9 ಹಳ್ಳಿಗಳ 4,500 ಎಕರೆಗೆ ನೀರಾವರಿ, 2 ಕೆರೆ, 48 ಚೆಕ್ ಡ್ಯಾಂ ತುಂಬಲಿದೆ ಎಂದು ಹೇಳಿದರು.
ರಾಜ್ಯ ಸರಕಾರ 6.5 ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಇದೇ ಸಂದರ್ಭದಲ್ಲಿ 10 ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಕ್ಕುಪತ್ರ ವಿತರಿಸಿದರು.
An international level furniture cluster that would provide ample employment opportunities for the youth will come up in Mangaluru. Work on the project will start this year itself,” said the Chief Minister of Karnataka, Basavaraj Bommai.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm