ಬ್ರೇಕಿಂಗ್ ನ್ಯೂಸ್
01-06-22 10:40 pm Mangalore Correspondent ಕರಾವಳಿ
ಕಾರ್ಕಳ, ಜೂನ್ 1 : ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಗ್ರೀನ್ ಪವರ್ ಆಧರಿತ ಕೈಗಾರಿಕಾ ಹಬ್ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
108 ಕೋಟಿ ರೂ. ವೆಚ್ಚದಲ್ಲಿ ಕಾರ್ಕಳ ತಾಲೂಕಿನ ಎಣ್ಣೆಹೊಳೆಯಲ್ಲಿ ಏತ ನೀರಾವರಿ ಯೋಜನೆಯನ್ನು ಬುಧವಾರ ಉದ್ಘಾಟಿಸಿ ಸಿಎಂ ಬೊಮ್ಮಾಯಿ ಮಾತನಾಡಿದರು.
ಮಂಗಳೂರಿನಲ್ಲಿ ವಿದೇಶಕ್ಕೆ ರಫ್ತು ಮಾಡುವ ಗುಣಮಟ್ಟದ ಪೀಠೋಪಕರಣಗಳ ನಿರ್ಮಾಣಕ್ಕೆ ಫರ್ನಿಚರ್ ಕ್ಲಸ್ಟರ್ ಮಾಡಲಾಗುವುದು. ಕಾರ್ಕಳದಲ್ಲಿ ಶಿಲ್ಪ ಕಲೆ, ಮರದ ಕೆತ್ತನೆ ಕ್ಲಸ್ಟರಿಗೆ ಜಾಗ ನೀಡಿದರೆ ತೆರಿಗೆ ವಿನಾಯಿತಿ ನೀಡಲಾಗುವುದು. ಮಂಗಳೂರು, ಕಾರವಾರ ಬಂದರು ವಿಸ್ತರಣೆ ಜತೆಗೆ ಎಂಟು ಹೊಸ ಬಂದರು ನಿರ್ಮಾಣ ಕಾರ್ಯಕ್ಕೆ ಟೆಂಡರ್ ಕರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಬೀಚ್ ಟೂರಿಸಂ, ಧಾರ್ಮಿಕ ಟೂರಿಸಂಗೆ ಒತ್ತು ನೀಡಲಿದ್ದು, ಕಾರ್ಕಳದಲ್ಲಿ ಜವಳಿ ಪಾರ್ಕ್ ಶೀಘ್ರ ಆರಂಭವಾಗಲಿದೆ. ರೈತ ವಿದ್ಯಾ ನಿಧಿಯಡಿ 8 ಲಕ್ಷ ರೈತರ ಮಕ್ಕಳಿಗೆ ಅನುಕೂಲವಾಗಿದೆ. ಎಣ್ಣೆಹೊಳೆ ಏತ ನೀರಾವರಿ ಹೆಚ್ಚುವರಿ ಯೋಜನೆಗೆ 43 ಕೋಟಿ ರೂ. ಮಂಜೂರು ಮಾಡಲಾಗುವುದು ಎಂದರು.

ಸುನಿಲ್ ಎಂದರೆ ಶಕ್ತಿ, ಇಂಧನ
ರಾಜ್ಯದಲ್ಲಿ ಈಗ ಎಲ್ಲೆಲ್ಲೂ ಸುನಿಲ್ ಹೆಸರು ಕೇಳುತ್ತಿದ್ದು, ಸುನಿಲ್ ಎಂದರೆ ಸ್ಛೂರ್ತಿ, ಶಕ್ತಿ, ಇಂಧನ. ಕ್ಷೇತ್ರಗಳ ಸಮಗ್ರ ಅಭಿವೃದ್ಧಿ ಮೂಲಕ ಕಟ್ಟಕಡೆಯ ಬಡವರಿಗೂ ಮೂಲಭೂತ ಸೌಲಭ್ಯ ಒದಗಿಸಿದ ಹೆಮ್ಮೆ ಸಿಎಂ ಬೊಮ್ಮಾಯಿ ನೇತೃತ್ವದ ಸರಕಾರಕ್ಕಿದೆ. ಉತ್ತರ ಕನ್ನಡ ಜಿಲ್ಲೆಯ 9,500 ಬಡವರ ಮನೆಗಳಿಗೆ 12 ಕೋಟಿ ರೂ. ವೆಚ್ಚದಲ್ಲಿ ಸಚಿವ ಸುನಿಲ್ ಬೆಳಕು ಒದಗಿಸಿದ್ದಾರೆ ಎಂದು ರಾಜ್ಯ ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶ್ಲಾಘಿಸಿದರು.

ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಎಣ್ಣೆಹೊಳೆ ಏತ ನೀರಾವರಿ ಯೋಜನೆಯಡಿ 9 ಹಳ್ಳಿಗಳ 4,500 ಎಕರೆಗೆ ನೀರಾವರಿ, 2 ಕೆರೆ, 48 ಚೆಕ್ ಡ್ಯಾಂ ತುಂಬಲಿದೆ ಎಂದು ಹೇಳಿದರು.
ರಾಜ್ಯ ಸರಕಾರ 6.5 ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಇದೇ ಸಂದರ್ಭದಲ್ಲಿ 10 ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಕ್ಕುಪತ್ರ ವಿತರಿಸಿದರು.
An international level furniture cluster that would provide ample employment opportunities for the youth will come up in Mangaluru. Work on the project will start this year itself,” said the Chief Minister of Karnataka, Basavaraj Bommai.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm