ಬ್ರೇಕಿಂಗ್ ನ್ಯೂಸ್
01-06-22 10:43 pm Mangalore Correspondent ಕರಾವಳಿ
ಮಂಗಳೂರು, ಜೂನ್ 1: ಪೊಲೀಸರಿಗೆ ನಿಂದನೆ ವಿಡಿಯೋ ಪ್ರಕರಣದಲ್ಲಿ ಕೆಲವೇ ಜನರು ಮಾಡಿದ ತಪ್ಪಿಗೆ ಹಲವು ಅಮಾಯಕರನ್ನು ಬಂಧಿಸಲಾಗುತ್ತಿದೆ. ಸಮಾವೇಶದಲ್ಲಿ ಭಾಗವಹಿಸದೇ ಇರುವವರ ಬಂಧನವೂ ಆಗಿದೆ. ಇದರಲ್ಲಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರೂ ಸೇರಿದ್ದಾರೆ. ಬೆಂಗಳೂರಿನಲ್ಲಿ ರೂಂ ಮಾಡಿದ್ದ ಜೊತೆಗಿದ್ದವರನ್ನೂ ಬಂಧಿಸಲಾಗಿದೆ. ಆಶ್ರಯ ನೀಡಿದ ಆರೋಪದಲ್ಲಿ ರೂಂಮೇಟ್ ಗಳ ಬಂಧಿಸಿದ್ದು ತಪ್ಪು ಎಂದು ಎಸ್ಡಿಪಿಐ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿದ ದ.ಕ. ಜಿಲ್ಲಾ ಎಸ್ಡಿಪಿಐ ಕಾರ್ಯದರ್ಶಿ ಅನ್ವರ್ ಬಜತ್ತೂರು, ಸಮಾವೇಶದ ಮುನ್ನವೇ ಆ ಘೋಷಣೆ ಕೂಗಲಾಗಿತ್ತು. ವೀಡಿಯೋ ರಾತ್ರಿ ವೇಳೆ ವೈರಲ್ ಆಗಿತ್ತು. ಆದರೆ ಪೊಲೀಸರು ತಮ್ಮ ಮೇಲೂ ವಾಹನ ಹಾಯಿಸಲು ಯತ್ನಿಸಿದ್ದಾಗಿ ಆರೋಪಿಸಿದ್ದಾರೆ. SDPI ಬೆಳವಣಿಗೆ ಸಹಿಸದೇ ಸಂಘ ಪರಿವಾರದ ಅಣತಿಯಂತೆ ಪೊಲೀಸರು ವರ್ತಿಸುತ್ತಿದ್ದಾರೆ. ಜಗದೀಶ್ ಕಾರಂತ ಈ ಹಿಂದೆ ಹಲವು ಬಾರಿ ಪೊಲೀಸರಿಗೆ, ಡಿಸಿ ಗೆ ಬಹಿರಂಗ ಧಮ್ಕಿ ಹಾಕಿದ್ದರು. ಆಗ ಕಾರಂತ ಬಂಧಿಸಲು ಇಲ್ಲಿನ ಪೊಲೀಸರಿಗೆ ಸಾಧ್ಯವಾಗಿಲ್ಲ. ಕ್ರಿಮಿನಲ್ ಹಿನ್ನೆಲೆಯುಳ್ಳ ಪ್ರಮೋದ್ ಮುತಾಲಿಕ್ ಗೆ ಪೊಲೀಸ್ ಆಯುಕ್ತರು ರಾಜಾತಿಥ್ಯ ನೀಡಿದ್ದನ್ನು ಖಂಡಿಸಿ SDPI ನಾಯಕರು ಪೋಸ್ಟ್ ಮಾಡಿದ್ದರು. ಅಂದಿನಿಂದ SDPI ಹತ್ತಿಕ್ಕಲು ಪೊಲೀಸ್ ಇಲಾಖೆ ಮುಂದಾಗಿದೆ. ಇದು ಪೊಲೀಸ್ ಆಯುಕ್ತರಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ.

ಪೊಲೀಸರ ಈ ರೀತಿಯ ವರ್ತನೆ ವಿರುದ್ಧ SDPI ಕಾನೂನು ಹೋರಾಟ ಮಾಡಲಿದೆ. ಮಾನವ ಹಕ್ಕು ಆಯೋಗಕ್ಕೂ ದೂರು ನೀಡಲಿದೆ. ಘೋಷಣೆ ಕೂಗಿದವರನ್ನು ಆರೋಪಿಗಳೆಂದು ನಾವು ಒಪ್ಪಿಕೊಳ್ಳುತ್ತೇವೆ. ಆದರೆ ಘಟನೆ ಸಂಬಂಧಪಡದವರನ್ನು ಬಂಧಿಸಿದ್ದು ಎಷ್ಟು ಸರಿ. ಸಂಘ ಪರಿವಾರವರನ್ನು ತೃಪ್ತಿ ಪಡಿಸಲು ಈ ರೀತಿ ಮಾಡಲಾಗಿದೆ ಎನ್ನುವ ಅನುಮಾನ ಇದೆ. ಇದರ ಹಿಂದೆ ಇಲ್ಲಿನ ಶಾಸಕ, ಸಂಸದರ ಕೈವಾಡವೂ ಇದೆ ಎಂದು ಆರೋಪಿಸಿದರು.
Mangalore Police have targeted SDPI, unknown youths are arrested in Abusing case slams SDPI today at a press meet held at their office.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm