ಬ್ರೇಕಿಂಗ್ ನ್ಯೂಸ್
01-06-22 10:43 pm Mangalore Correspondent ಕರಾವಳಿ
ಮಂಗಳೂರು, ಜೂನ್ 1: ಪೊಲೀಸರಿಗೆ ನಿಂದನೆ ವಿಡಿಯೋ ಪ್ರಕರಣದಲ್ಲಿ ಕೆಲವೇ ಜನರು ಮಾಡಿದ ತಪ್ಪಿಗೆ ಹಲವು ಅಮಾಯಕರನ್ನು ಬಂಧಿಸಲಾಗುತ್ತಿದೆ. ಸಮಾವೇಶದಲ್ಲಿ ಭಾಗವಹಿಸದೇ ಇರುವವರ ಬಂಧನವೂ ಆಗಿದೆ. ಇದರಲ್ಲಿ ಪಕ್ಷದ ಕಾರ್ಯಕರ್ತರು, ಬೆಂಬಲಿಗರೂ ಸೇರಿದ್ದಾರೆ. ಬೆಂಗಳೂರಿನಲ್ಲಿ ರೂಂ ಮಾಡಿದ್ದ ಜೊತೆಗಿದ್ದವರನ್ನೂ ಬಂಧಿಸಲಾಗಿದೆ. ಆಶ್ರಯ ನೀಡಿದ ಆರೋಪದಲ್ಲಿ ರೂಂಮೇಟ್ ಗಳ ಬಂಧಿಸಿದ್ದು ತಪ್ಪು ಎಂದು ಎಸ್ಡಿಪಿಐ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿದ ದ.ಕ. ಜಿಲ್ಲಾ ಎಸ್ಡಿಪಿಐ ಕಾರ್ಯದರ್ಶಿ ಅನ್ವರ್ ಬಜತ್ತೂರು, ಸಮಾವೇಶದ ಮುನ್ನವೇ ಆ ಘೋಷಣೆ ಕೂಗಲಾಗಿತ್ತು. ವೀಡಿಯೋ ರಾತ್ರಿ ವೇಳೆ ವೈರಲ್ ಆಗಿತ್ತು. ಆದರೆ ಪೊಲೀಸರು ತಮ್ಮ ಮೇಲೂ ವಾಹನ ಹಾಯಿಸಲು ಯತ್ನಿಸಿದ್ದಾಗಿ ಆರೋಪಿಸಿದ್ದಾರೆ. SDPI ಬೆಳವಣಿಗೆ ಸಹಿಸದೇ ಸಂಘ ಪರಿವಾರದ ಅಣತಿಯಂತೆ ಪೊಲೀಸರು ವರ್ತಿಸುತ್ತಿದ್ದಾರೆ. ಜಗದೀಶ್ ಕಾರಂತ ಈ ಹಿಂದೆ ಹಲವು ಬಾರಿ ಪೊಲೀಸರಿಗೆ, ಡಿಸಿ ಗೆ ಬಹಿರಂಗ ಧಮ್ಕಿ ಹಾಕಿದ್ದರು. ಆಗ ಕಾರಂತ ಬಂಧಿಸಲು ಇಲ್ಲಿನ ಪೊಲೀಸರಿಗೆ ಸಾಧ್ಯವಾಗಿಲ್ಲ. ಕ್ರಿಮಿನಲ್ ಹಿನ್ನೆಲೆಯುಳ್ಳ ಪ್ರಮೋದ್ ಮುತಾಲಿಕ್ ಗೆ ಪೊಲೀಸ್ ಆಯುಕ್ತರು ರಾಜಾತಿಥ್ಯ ನೀಡಿದ್ದನ್ನು ಖಂಡಿಸಿ SDPI ನಾಯಕರು ಪೋಸ್ಟ್ ಮಾಡಿದ್ದರು. ಅಂದಿನಿಂದ SDPI ಹತ್ತಿಕ್ಕಲು ಪೊಲೀಸ್ ಇಲಾಖೆ ಮುಂದಾಗಿದೆ. ಇದು ಪೊಲೀಸ್ ಆಯುಕ್ತರಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ.

ಪೊಲೀಸರ ಈ ರೀತಿಯ ವರ್ತನೆ ವಿರುದ್ಧ SDPI ಕಾನೂನು ಹೋರಾಟ ಮಾಡಲಿದೆ. ಮಾನವ ಹಕ್ಕು ಆಯೋಗಕ್ಕೂ ದೂರು ನೀಡಲಿದೆ. ಘೋಷಣೆ ಕೂಗಿದವರನ್ನು ಆರೋಪಿಗಳೆಂದು ನಾವು ಒಪ್ಪಿಕೊಳ್ಳುತ್ತೇವೆ. ಆದರೆ ಘಟನೆ ಸಂಬಂಧಪಡದವರನ್ನು ಬಂಧಿಸಿದ್ದು ಎಷ್ಟು ಸರಿ. ಸಂಘ ಪರಿವಾರವರನ್ನು ತೃಪ್ತಿ ಪಡಿಸಲು ಈ ರೀತಿ ಮಾಡಲಾಗಿದೆ ಎನ್ನುವ ಅನುಮಾನ ಇದೆ. ಇದರ ಹಿಂದೆ ಇಲ್ಲಿನ ಶಾಸಕ, ಸಂಸದರ ಕೈವಾಡವೂ ಇದೆ ಎಂದು ಆರೋಪಿಸಿದರು.
Mangalore Police have targeted SDPI, unknown youths are arrested in Abusing case slams SDPI today at a press meet held at their office.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am