ಬ್ರೇಕಿಂಗ್ ನ್ಯೂಸ್
03-06-22 04:55 pm Mangalore Correspondent ಕರಾವಳಿ
ಪುತ್ತೂರು, ಜೂನ್ 3: ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರಿದಿದ್ದು ಆರು ವಿದ್ಯಾರ್ಥಿನಿಯರ ಅಮಾನತು ಹೊರತಾಗಿಯೂ ಕೆಲವರು ಹಿಜಾಬ್ ಹಾಕ್ಕೊಂಡು ತರಗತಿಗೆ ಬಂದಿದ್ದು ಇದನ್ನು ಪ್ರತಿಭಟಿಸಿ ಕಾಲೇಜಿನ ಒಳ ಆವರಣದಲ್ಲಿ ಒಂದಷ್ಟು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.
ಕೆಲವು ವಿದ್ಯಾರ್ಥಿಗಳು ಹಿಜಾಬ್ ಸಹಿತ ತರಗತಿಗೆ ಬರಲು ಅವಕಾಶ ನೀಡಿದ್ದಕ್ಕೆ ಪ್ರತಿಭಟನೆ ನಡೆಸಲಾಗಿದೆ. ಕಾಲೇಜಿನ ಕ್ಯಾಂಪಸ್ ಬದಲು ತರಗತಿ ಬಳಿಯ ಒಳ ಆವರಣದಲ್ಲಿಯೇ ವಿದ್ಯಾರ್ಥಿಗಳು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಎರಡು ದಿನಗಳ ಹಿಂದೆ ಹಿಜಾಬ್ ಪಟ್ಟು ಹಿಡಿದ ಆರು ವಿದ್ಯಾರ್ಥಿನಿಯರನ್ನ ಕಾಲೇಜಿನ ಆಡಳಿತ ಅಮಾನತು ಮಾಡಿತ್ತು. ಆದರೂ ಇಂದು ಮತ್ತೆ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಬಂದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಹಿಜಾಬ್ ತೆಗೆದು ಬರುವಂತೆ ಕೆಲವು ವಿದ್ಯಾರ್ಥಿಗಳು ಪಟ್ಟು ಹಿಡಿದು ತರಗತಿ ಬಹಿಷ್ಕರಿಸಿದ್ದಾರೆ.

ಇದೇ ಕಾಲೇಜಿನಲ್ಲಿ ಗುರುವಾರ ಈ ಬಗ್ಗೆ ವರದಿಗೆ ತೆರಳಿದ್ದ ಮಾಧ್ಯಮದ ವ್ಯಕ್ತಿ ಮೇಲೆ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ನಡೆದಿತ್ತು. ವಿದ್ಯಾರ್ಥಿಗಳ ಗುಂಪು ಕ್ಯಾಮರಾ ಕಸಿದು ಮೇಲೆ ಹಲ್ಲೆ ನಡೆಸಿತ್ತು. ಈ ಬಗ್ಗೆ ಕಾಲೇಜಿನ 25 ವಿದ್ಯಾರ್ಥಿಗಳ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hijab row, Protest continues at Uppinangady PU college, demand entry with hijab. The Government First Grade College at Uppinangady on Wednesday suspended six students for a week, after the Principal held a meeting with faculty members in this connection.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm