ಬ್ರೇಕಿಂಗ್ ನ್ಯೂಸ್
03-06-22 08:17 pm Mangalore Correspondent ಕರಾವಳಿ
ಬೆಳ್ತಂಗಡಿ, ಜೂನ್ 3: ದೇವಸ್ಥಾನದ ಜಾತ್ರೆ, ಉತ್ಸವಗಳಲ್ಲಿ ಇತ್ತೀಚೆಗೆ ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧಿಸಿ ಅಭಿಯಾನ ನಡೆಸಿದ್ದು ಜಾತ್ರೆಗಳ ಸೀಸನ್ ಮುಗಿಯುತ್ತಿದ್ದಂತೆ ತಣ್ಣಗಾಗಿತ್ತು. ಇದೀಗ ಪ್ರಸಿದ್ಧ ಕಾರಣಿಕ ಕ್ಷೇತ್ರ ಎಂದೇ ಖ್ಯಾತಿ ಗಳಿಸಿರುವ ಧರ್ಮಸ್ಥಳ ಬಳಿಯ ಸೌತಡ್ಕ ಮಹಾಗಣಪತಿ ಕ್ಷೇತ್ರದ ಆವರಣದಲ್ಲಿ ಹೊಸತೊಂದು ಅಭಿಯಾನ ಶುರುವಾಗಿದೆ. ಅನ್ಯಮತೀಯರು ಆಟೋ, ಟ್ಯಾಕ್ಸಿಗಳಲ್ಲಿ ಭಕ್ತರನ್ನು ಕರೆದುಕೊಂಡು ಬರಬಾರದು ಅನ್ನುವ ರೀತಿಯ ಫಲಕಗಳನ್ನು ಸೌತಡ್ಕ ಬಳಿಯ ರಸ್ತೆ ಬದಿಗಳಲ್ಲಿ ಹಾಕಲಾಗಿದೆ.
ವಿಶ್ವ ಹಿಂದು ಪರಿಷತ್, ಬಜರಂಗದಳ, ಹಿಂದು ಜಾಗರಣ ವೇದಿಕೆ ಎಂಬ ಹೆಸರಲ್ಲಿ ಫಲಕ ಹಾಕಲಾಗಿದ್ದು, ಹಿಂದುಯೇತರರಿಗೆ ಸೌತಡ್ಕ ದೇವಸ್ಥಾನಕ್ಕೆ ಆಟೋ, ಟ್ಯಾಕ್ಸಿ ಮಾಡಬಾರದು ಎಂದು ಫರ್ಮಾನು ವಿಧಿಸಲಾಗಿದೆ. ಸೌತಡ್ಕದಲ್ಲಿ ಅನ್ಯಕೋಮಿನವರು ದೇವಸ್ಥಾನಕ್ಕೆ ಪ್ರವೇಶಿಸಿ ಹಿಂದು ಯುವತಿಯರನ್ನು ಲವ್ ಜಿಹಾದ್ ನಡೆಸಿದ್ದು ಕಂಡುಬಂದಿದೆ. ಹೀಗಾಗಿ ಹಿಂದುಯೇತನ ಜನರ ಆಟೋ, ಟ್ಯಾಕ್ಸಿ ಇನ್ನಿತರ ಯಾವುದೇ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಬರೆಯಲಾಗಿದೆ.

ಸೌತಡ್ಕ ದೇವಸ್ಥಾನವು ಮುಜರಾಯಿ ಇಲಾಖೆಗೆ ಸೇರಿದ ಕ್ಷೇತ್ರವಾಗಿದ್ದು ಈ ಫಲಕ ಹಾಕಿದ್ದಕ್ಕೂ ದೇವಸ್ಥಾನಕ್ಕೂ ಸಂಬಂಧ ಇರುವುದಿಲ್ಲ. ದೇವಸ್ಥಾನಕ್ಕೆ ಬರುವ ಆಸುಪಾಸಿನ ರಸ್ತೆಗಳ ಬದಿ ಫಲಕ ಹಾಕಿರುವುದು ಕಂಡುಬಂದಿದೆ. ಇತ್ತೀಚೆಗೆ ದೇವಸ್ಥಾನಗಳ ಜಾತ್ರೆ ಸಂದರ್ಭದಲ್ಲಿ ಹಿಂದುಯೇತರ ವ್ಯಕ್ತಿಗಳು ವ್ಯಾಪಾರ ಮಾಡಬಾರದು ಎಂದು ಪುತ್ತೂರು ಸೇರಿದಂತೆ ಕೆಲವು ಮುಜರಾಯಿ ದೇವಸ್ಥಾನಗಳ ಹೊರಭಾಗದಲ್ಲಿ ಇದೇ ರೀತಿ ಬ್ಯಾನರ್ ಹಾಕಲಾಗಿತ್ತು. ಈ ವಿಚಾರದಲ್ಲಿ ಭಾರೀ ಟೀಕೆಯೂ ಕೇಳಿಬಂದಿತ್ತು. ಬಡ ವ್ಯಾಪಾರಿಗಳ ಹೊಟ್ಟೆಗೆ ಹೊಡೆಯುವ ಕೆಲಸ ಎಂದು ಟೀಕಿಸಲಾಗಿತ್ತು. ಆನಂತರ ಜಾತ್ರೆ ಸೀಸನ್ ಕಡಿಮೆಯಾಗುತ್ತಿದ್ದಂತೆ ಅದರ ಕಾವು ಕಡಿಮೆಯಾಗಿತ್ತು.
ಇತ್ತೀಚೆಗೆ ಸೌತಡ್ಕಕ್ಕೆ ಬಂದಿದ್ದ ಯುವತಿಯೊಬ್ಬಳನ್ನು ಸ್ಥಳೀಯ ಆಟೋ ಚಾಲಕನೊಬ್ಬ ಪ್ರೀತಿಯ ಬಲೆಗೆ ಬೀಳಿಸಿ ಮದುವೆಯಾಗಿದ್ದಾನೆ ಎನ್ನುವ ಸುದ್ದಿ ಹರಡಿತ್ತು. ಇದೇ ವಿಚಾರವನ್ನು ಮುಂದಿಟ್ಟು ಹಿಂದು ಸಂಘಟನೆಗಳು ಹಿಂದುಯೇತರ ವ್ಯಕ್ತಿಗಳು ಆಟೋ, ಟ್ಯಾಕ್ಸಿ ಮಾಡಬಾರದು ಎಂದು ಹೊಸ ಅಭಿಯಾನ ಶುರು ಮಾಡಿದ್ದಾರೆ. ಲವ್ ಜಿಹಾದ್ ಕೃತ್ಯದ ನೆಪದಲ್ಲಿ ಈ ರೂಪದಲ್ಲಿ ಪ್ರತೀಕಾರ ತೀರಿಸಲು ಹಿಂದು ಸಂಘಟನೆ ಕಾರ್ಯಕರ್ತರು ಹೊರಟಿದ್ದಾರೆ.
Mangalore No entry for Muslim taxi and auto at Sowthadka temple at Dharmasthala in Dakshina Kannada, VHP installs notice board after Muslim auto driver tried to trap a Bangalore Hindu girl by love jihad says VHP.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:47 pm
HK News Desk
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
06-02-26 09:01 pm
Mangalore Correspondent
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm