ಬ್ರೇಕಿಂಗ್ ನ್ಯೂಸ್
03-06-22 08:17 pm Mangalore Correspondent ಕರಾವಳಿ
ಬೆಳ್ತಂಗಡಿ, ಜೂನ್ 3: ದೇವಸ್ಥಾನದ ಜಾತ್ರೆ, ಉತ್ಸವಗಳಲ್ಲಿ ಇತ್ತೀಚೆಗೆ ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧಿಸಿ ಅಭಿಯಾನ ನಡೆಸಿದ್ದು ಜಾತ್ರೆಗಳ ಸೀಸನ್ ಮುಗಿಯುತ್ತಿದ್ದಂತೆ ತಣ್ಣಗಾಗಿತ್ತು. ಇದೀಗ ಪ್ರಸಿದ್ಧ ಕಾರಣಿಕ ಕ್ಷೇತ್ರ ಎಂದೇ ಖ್ಯಾತಿ ಗಳಿಸಿರುವ ಧರ್ಮಸ್ಥಳ ಬಳಿಯ ಸೌತಡ್ಕ ಮಹಾಗಣಪತಿ ಕ್ಷೇತ್ರದ ಆವರಣದಲ್ಲಿ ಹೊಸತೊಂದು ಅಭಿಯಾನ ಶುರುವಾಗಿದೆ. ಅನ್ಯಮತೀಯರು ಆಟೋ, ಟ್ಯಾಕ್ಸಿಗಳಲ್ಲಿ ಭಕ್ತರನ್ನು ಕರೆದುಕೊಂಡು ಬರಬಾರದು ಅನ್ನುವ ರೀತಿಯ ಫಲಕಗಳನ್ನು ಸೌತಡ್ಕ ಬಳಿಯ ರಸ್ತೆ ಬದಿಗಳಲ್ಲಿ ಹಾಕಲಾಗಿದೆ.
ವಿಶ್ವ ಹಿಂದು ಪರಿಷತ್, ಬಜರಂಗದಳ, ಹಿಂದು ಜಾಗರಣ ವೇದಿಕೆ ಎಂಬ ಹೆಸರಲ್ಲಿ ಫಲಕ ಹಾಕಲಾಗಿದ್ದು, ಹಿಂದುಯೇತರರಿಗೆ ಸೌತಡ್ಕ ದೇವಸ್ಥಾನಕ್ಕೆ ಆಟೋ, ಟ್ಯಾಕ್ಸಿ ಮಾಡಬಾರದು ಎಂದು ಫರ್ಮಾನು ವಿಧಿಸಲಾಗಿದೆ. ಸೌತಡ್ಕದಲ್ಲಿ ಅನ್ಯಕೋಮಿನವರು ದೇವಸ್ಥಾನಕ್ಕೆ ಪ್ರವೇಶಿಸಿ ಹಿಂದು ಯುವತಿಯರನ್ನು ಲವ್ ಜಿಹಾದ್ ನಡೆಸಿದ್ದು ಕಂಡುಬಂದಿದೆ. ಹೀಗಾಗಿ ಹಿಂದುಯೇತನ ಜನರ ಆಟೋ, ಟ್ಯಾಕ್ಸಿ ಇನ್ನಿತರ ಯಾವುದೇ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಬರೆಯಲಾಗಿದೆ.

ಸೌತಡ್ಕ ದೇವಸ್ಥಾನವು ಮುಜರಾಯಿ ಇಲಾಖೆಗೆ ಸೇರಿದ ಕ್ಷೇತ್ರವಾಗಿದ್ದು ಈ ಫಲಕ ಹಾಕಿದ್ದಕ್ಕೂ ದೇವಸ್ಥಾನಕ್ಕೂ ಸಂಬಂಧ ಇರುವುದಿಲ್ಲ. ದೇವಸ್ಥಾನಕ್ಕೆ ಬರುವ ಆಸುಪಾಸಿನ ರಸ್ತೆಗಳ ಬದಿ ಫಲಕ ಹಾಕಿರುವುದು ಕಂಡುಬಂದಿದೆ. ಇತ್ತೀಚೆಗೆ ದೇವಸ್ಥಾನಗಳ ಜಾತ್ರೆ ಸಂದರ್ಭದಲ್ಲಿ ಹಿಂದುಯೇತರ ವ್ಯಕ್ತಿಗಳು ವ್ಯಾಪಾರ ಮಾಡಬಾರದು ಎಂದು ಪುತ್ತೂರು ಸೇರಿದಂತೆ ಕೆಲವು ಮುಜರಾಯಿ ದೇವಸ್ಥಾನಗಳ ಹೊರಭಾಗದಲ್ಲಿ ಇದೇ ರೀತಿ ಬ್ಯಾನರ್ ಹಾಕಲಾಗಿತ್ತು. ಈ ವಿಚಾರದಲ್ಲಿ ಭಾರೀ ಟೀಕೆಯೂ ಕೇಳಿಬಂದಿತ್ತು. ಬಡ ವ್ಯಾಪಾರಿಗಳ ಹೊಟ್ಟೆಗೆ ಹೊಡೆಯುವ ಕೆಲಸ ಎಂದು ಟೀಕಿಸಲಾಗಿತ್ತು. ಆನಂತರ ಜಾತ್ರೆ ಸೀಸನ್ ಕಡಿಮೆಯಾಗುತ್ತಿದ್ದಂತೆ ಅದರ ಕಾವು ಕಡಿಮೆಯಾಗಿತ್ತು.
ಇತ್ತೀಚೆಗೆ ಸೌತಡ್ಕಕ್ಕೆ ಬಂದಿದ್ದ ಯುವತಿಯೊಬ್ಬಳನ್ನು ಸ್ಥಳೀಯ ಆಟೋ ಚಾಲಕನೊಬ್ಬ ಪ್ರೀತಿಯ ಬಲೆಗೆ ಬೀಳಿಸಿ ಮದುವೆಯಾಗಿದ್ದಾನೆ ಎನ್ನುವ ಸುದ್ದಿ ಹರಡಿತ್ತು. ಇದೇ ವಿಚಾರವನ್ನು ಮುಂದಿಟ್ಟು ಹಿಂದು ಸಂಘಟನೆಗಳು ಹಿಂದುಯೇತರ ವ್ಯಕ್ತಿಗಳು ಆಟೋ, ಟ್ಯಾಕ್ಸಿ ಮಾಡಬಾರದು ಎಂದು ಹೊಸ ಅಭಿಯಾನ ಶುರು ಮಾಡಿದ್ದಾರೆ. ಲವ್ ಜಿಹಾದ್ ಕೃತ್ಯದ ನೆಪದಲ್ಲಿ ಈ ರೂಪದಲ್ಲಿ ಪ್ರತೀಕಾರ ತೀರಿಸಲು ಹಿಂದು ಸಂಘಟನೆ ಕಾರ್ಯಕರ್ತರು ಹೊರಟಿದ್ದಾರೆ.
Mangalore No entry for Muslim taxi and auto at Sowthadka temple at Dharmasthala in Dakshina Kannada, VHP installs notice board after Muslim auto driver tried to trap a Bangalore Hindu girl by love jihad says VHP.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am