ಬ್ರೇಕಿಂಗ್ ನ್ಯೂಸ್
28-09-20 03:24 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 28: ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಮಟ್ಟಿಗೆ ಖಾಸಗಿ ಸಾರಿಗೆಯೇ ಜೀವಾಳ. ಆದರೆ, ಲಾಕ್ಡೌನ್ ನಿಂದಾಗಿ ಕರಾವಳಿಯಲ್ಲಿ ಖಾಸಗಿ ಸಾರಿಗೆ ಉದ್ಯಮವೇ ನೆಲಕಚ್ಚಿದೆ. ಆರು ತಿಂಗಳ ಕಾಲ ಬಸ್ ಗಳನ್ನು ರಸ್ತೆಗೆ ಇಳಿಸದೆ ಕಾರ್ಮಿಕರಿಗೆ ಸಂಬಳ ಕೊಡಬೇಕಾದ ಅನಿವಾರ್ಯತೆಗೆ ಸಿಲುಕಿದ್ದರು. ಈಗ ಲಾಕ್ಡೌನ್ ಓಪನ್ ಆದ್ರೂ ಉದ್ಯಮಿಗಳು ಸಂಕಷ್ಟದಿಂದ ಚೇತರಿಸಿಕೊಂಡಿಲ್ಲ.
ಲಾಕ್ಡೌನ್ ಆದ್ರೂ ಸರ್ಕಾರ ಸಾರಿಗೆ ಬಸ್ ಗಳ ತೆರಿಗೆ ವಿನಾಯಿತಿ ಮಾಡಿಲ್ಲ. ಅಲ್ಲದೆ, ಇದೇ ವೇಳೆ, ಡೀಸೆಲ್ ಬೆಲೆ ಈಗ ಐದು ತಿಂಗಳಲ್ಲಿ ಲೀಟರ್ಗೆ 12 ರೂ.ನಷ್ಟು ಏರಿಕೆಯಾಗಿದೆ. ಲಾಕ್ಡೌನ್ ಬಳಿಕ ಎರಡೂ ಜಿಲ್ಲೆಗಳಲ್ಲಿ ಎಲ್ಲ ರೀತಿಯ ಬಸ್ಗಳ ಸಂಚಾರ ಸ್ಥಗಿತಗೊಂಡಿತ್ತು. ಜೂನ್ 1ರಿಂದ ಹಂತ ಹಂತವಾಗಿ ಬಸ್ ಗಳನ್ನು ರಸ್ತೆಗೆ ಇಳಿಸಿದರೂ ಪ್ರಯಾಣಿಕರ ಸಂಖ್ಯೆ ಕಡಿಮೆ. ಇನ್ನೊಂದೆಡೆ ಡೀಸೆಲ್ ದರ ಏರಿಕೆಯಿಂದಾಗಿ ಲೆಕ್ಕಕ್ಕೇ ಸಿಗುತ್ತಿಲ್ಲ ಎನ್ನುತ್ತಾರೆ ಬಸ್ ಮಾಲೀಕರು.

ಮಂಗಳೂರು- ಉಡುಪಿ -ಕುಂದಾಪುರ ರೂಟ್ನಲ್ಲಿ ಸದ್ಯಕ್ಕೆ 70 ಬಸ್ ಗಳು ಓಡಾಡುತ್ತಿವೆ. ಬೆಳಗ್ಗೆ ಮತ್ತು ಸಂಜೆ ಮಾತ್ರ ಪ್ರಯಾಣಿಕರು ಇರುತ್ತಾರೆ. ಇದರಿಂದ ಟ್ರಿಪ್ ನಿರ್ವಹಣೆ ಕಷ್ಟವಾಗುತ್ತಿದೆ. ಎಕ್ಸ್ ಪ್ರೆಸ್/ಸರ್ವೀಸ್ ಬಸ್ಗಳ ಪೈಕಿ ಶೇ.30 ಬಸ್ ಗಳು ಮಾತ್ರ ರಸ್ತೆಗಳಿದಿರುವುದು. ಹೀಗಾಗಿ ಶೇ.70ರಷ್ಟು ಬಸ್ಗಳು ನಿಂತಲ್ಲೇ ಇವೆ. ಮಂಗಳೂರಿನ ಒಟ್ಟು 325 ಸಿಟಿ ಬಸ್ಗಳಲ್ಲಿ 275ರಷ್ಟು ರಸ್ತೆಗೆ ಇಳಿದಿದ್ದರೆ, ಉಡುಪಿಯಲ್ಲಿ 85 ಸಿಟಿ ಬಸ್ಗಳ ಪೈಕಿ 35 ಬಸ್ಗಳು ರಸ್ತೆಗಿಳಿದಿಲ್ಲ. ಇದೇ ವೇಳೆ, ಬಸ್ ಮಾಲೀಕರ ಸಂಘದವರು ರಾಜ್ಯ ಸಾರಿಗೆ ಸಚಿವರನ್ನು ಭೇಟಿಯಾಗಿ ತೆರಿಗೆ ವಿನಾಯಿತಿ ನೀಡಲು ಕೋರಿದ್ದಾರೆ. ಆಟೋ ಚಾಲಕರಿಗೆ ನೀಡಿರುವಂತೆ ಖಾಸಗಿ ಬಸ್ ಸಿಬ್ಬಂದಿಗೂ ನೆರವಾಗಲು ಮನವಿ ಮಾಡಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am