ಬ್ರೇಕಿಂಗ್ ನ್ಯೂಸ್
05-06-22 08:00 pm Mangalore Correspondent ಕರಾವಳಿ
ಮಂಗಳೂರು, ಜೂನ್ 5: ಪನಾಮಾ ದೇಶಕ್ಕೆ ಸೇರಿದ ಹಡಗಿನಲ್ಲಿ ಕ್ಯಾಪ್ಟನ್ ಆಗಿದ್ದ ಚೀನಾ ಮೂಲದ ಅಧಿಕಾರಿ ಅರಬ್ಬೀ ಸಮುದ್ರದಲ್ಲಿ ನಾಪತ್ತೆಯಾಗಿರುವ ಘಟನೆ ನಡೆದಿದ್ದು ಈ ಬಗ್ಗೆ ಮಂಗಳೂರಿನ ಕರಾವಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 10 ರಂದು ಸುರತ್ಕಲ್ ಕಡಲ ತೀರದಿಂದ 70 ನಾಟಿಕಲ್ ಮೈಲು ದೂರದ ಸಮುದ್ರ ಮಧ್ಯೆ ಹಡಗು ಸಾಗುತ್ತಿದ್ದಾಗ ಚೀನಾ ಮೂಲದ ಅಧಿಕಾರಿ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ನಾಪತ್ತೆಯಾದ ಅಧಿಕಾರಿಯನ್ನು ಕ್ಷು ಜುನ್ ಫೇಂಗ್ (52) ಎಂದು ಗುರುತಿಸಲಾಗಿದೆ.
ಚೀನಾದ ಝುನ್ ಪೇ ಬಂದರಿನಿಂದ ಸಿಂಗಾಪುರ ಮಾರ್ಗವಾಗಿ ಶ್ರೀಲಂಕಾಕ್ಕೆ ಬಂದಿದ್ದ ಹಡಗು ಅಲ್ಲಿಂದ ಗುಜರಾತಿನ ಮುಂಡ್ರಾ ಬಂದರಿನತ್ತ ತೆರಳುತ್ತಿತ್ತು. ಮೇ 10ರಂದು ರಾತ್ರಿ 1.10ರ ಸುಮಾರಿಗೆ ಅರಬ್ಬೀ ಸಮುದ್ರದಲ್ಲಿ ಹಡಗು ತೆರಳುತ್ತಿದ್ದ ಅಧಿಕಾರಿ ಕಾಣೆಯಾಗಿರುವ ಬಗ್ಗೆ ಮೇ 28ರಂದು ಗುಜರಾತ್ ಪೊಲೀಸರಿಗೆ ದೂರು ನೀಡಲಾಗಿದೆ. ಹಡಗು ಗುಜರಾತ್ ತಲುಪಿದ 15 ದಿನದ ಬಳಿಕ ಇತರೇ ಸಿಬಂದಿ ಅಲ್ಲಿ ನಾಪತ್ತೆ ದೂರು ನೀಡಿದ್ದರು.
ಗುಜರಾತ್ ಪೊಲೀಸರು ಮಂಗಳೂರು ಕೋಸ್ಟ್ ಗಾರ್ಡ್ಗೆ ಮಾಹಿತಿ ನೀಡಿದ್ದು ಜೂ.1ರಂದು ಮಂಗಳೂರಿನ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಚೀನೀ ಪ್ರಜೆಯ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ಮಂಗಳೂರು ಕರಾವಳಿ ಪೊಲೀಸ್ ಠಾಣೆ 9480800574 ಅಥವಾ ಕರಾವಳಿ ಕಾವಲು ಪೊಲೀಸ್ ಕಂಟ್ರೋಲ್ ರೂಂ 0820-2538100 ಸಂಪರ್ಕಿಸಬಹುದು ಎಂದು ಕರಾವಳಿ ಕಾವಲು ಪೊಲೀಸರು ತಿಳಿಸಿದ್ದಾರೆ.
China based ship captain goes missing in Mangalore, missing case filed at Coastal Police station. The missing person has been identified as Shu Ju Ping (52).
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:47 pm
HK News Desk
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm