ಬ್ರೇಕಿಂಗ್ ನ್ಯೂಸ್
05-06-22 08:00 pm Mangalore Correspondent ಕರಾವಳಿ
ಮಂಗಳೂರು, ಜೂನ್ 5: ಪನಾಮಾ ದೇಶಕ್ಕೆ ಸೇರಿದ ಹಡಗಿನಲ್ಲಿ ಕ್ಯಾಪ್ಟನ್ ಆಗಿದ್ದ ಚೀನಾ ಮೂಲದ ಅಧಿಕಾರಿ ಅರಬ್ಬೀ ಸಮುದ್ರದಲ್ಲಿ ನಾಪತ್ತೆಯಾಗಿರುವ ಘಟನೆ ನಡೆದಿದ್ದು ಈ ಬಗ್ಗೆ ಮಂಗಳೂರಿನ ಕರಾವಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 10 ರಂದು ಸುರತ್ಕಲ್ ಕಡಲ ತೀರದಿಂದ 70 ನಾಟಿಕಲ್ ಮೈಲು ದೂರದ ಸಮುದ್ರ ಮಧ್ಯೆ ಹಡಗು ಸಾಗುತ್ತಿದ್ದಾಗ ಚೀನಾ ಮೂಲದ ಅಧಿಕಾರಿ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ನಾಪತ್ತೆಯಾದ ಅಧಿಕಾರಿಯನ್ನು ಕ್ಷು ಜುನ್ ಫೇಂಗ್ (52) ಎಂದು ಗುರುತಿಸಲಾಗಿದೆ.
ಚೀನಾದ ಝುನ್ ಪೇ ಬಂದರಿನಿಂದ ಸಿಂಗಾಪುರ ಮಾರ್ಗವಾಗಿ ಶ್ರೀಲಂಕಾಕ್ಕೆ ಬಂದಿದ್ದ ಹಡಗು ಅಲ್ಲಿಂದ ಗುಜರಾತಿನ ಮುಂಡ್ರಾ ಬಂದರಿನತ್ತ ತೆರಳುತ್ತಿತ್ತು. ಮೇ 10ರಂದು ರಾತ್ರಿ 1.10ರ ಸುಮಾರಿಗೆ ಅರಬ್ಬೀ ಸಮುದ್ರದಲ್ಲಿ ಹಡಗು ತೆರಳುತ್ತಿದ್ದ ಅಧಿಕಾರಿ ಕಾಣೆಯಾಗಿರುವ ಬಗ್ಗೆ ಮೇ 28ರಂದು ಗುಜರಾತ್ ಪೊಲೀಸರಿಗೆ ದೂರು ನೀಡಲಾಗಿದೆ. ಹಡಗು ಗುಜರಾತ್ ತಲುಪಿದ 15 ದಿನದ ಬಳಿಕ ಇತರೇ ಸಿಬಂದಿ ಅಲ್ಲಿ ನಾಪತ್ತೆ ದೂರು ನೀಡಿದ್ದರು.
ಗುಜರಾತ್ ಪೊಲೀಸರು ಮಂಗಳೂರು ಕೋಸ್ಟ್ ಗಾರ್ಡ್ಗೆ ಮಾಹಿತಿ ನೀಡಿದ್ದು ಜೂ.1ರಂದು ಮಂಗಳೂರಿನ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಚೀನೀ ಪ್ರಜೆಯ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ಮಂಗಳೂರು ಕರಾವಳಿ ಪೊಲೀಸ್ ಠಾಣೆ 9480800574 ಅಥವಾ ಕರಾವಳಿ ಕಾವಲು ಪೊಲೀಸ್ ಕಂಟ್ರೋಲ್ ರೂಂ 0820-2538100 ಸಂಪರ್ಕಿಸಬಹುದು ಎಂದು ಕರಾವಳಿ ಕಾವಲು ಪೊಲೀಸರು ತಿಳಿಸಿದ್ದಾರೆ.
China based ship captain goes missing in Mangalore, missing case filed at Coastal Police station. The missing person has been identified as Shu Ju Ping (52).
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm