ಬ್ರೇಕಿಂಗ್ ನ್ಯೂಸ್
05-06-22 08:00 pm Mangalore Correspondent ಕರಾವಳಿ
ಮಂಗಳೂರು, ಜೂನ್ 5: ಪನಾಮಾ ದೇಶಕ್ಕೆ ಸೇರಿದ ಹಡಗಿನಲ್ಲಿ ಕ್ಯಾಪ್ಟನ್ ಆಗಿದ್ದ ಚೀನಾ ಮೂಲದ ಅಧಿಕಾರಿ ಅರಬ್ಬೀ ಸಮುದ್ರದಲ್ಲಿ ನಾಪತ್ತೆಯಾಗಿರುವ ಘಟನೆ ನಡೆದಿದ್ದು ಈ ಬಗ್ಗೆ ಮಂಗಳೂರಿನ ಕರಾವಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 10 ರಂದು ಸುರತ್ಕಲ್ ಕಡಲ ತೀರದಿಂದ 70 ನಾಟಿಕಲ್ ಮೈಲು ದೂರದ ಸಮುದ್ರ ಮಧ್ಯೆ ಹಡಗು ಸಾಗುತ್ತಿದ್ದಾಗ ಚೀನಾ ಮೂಲದ ಅಧಿಕಾರಿ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ನಾಪತ್ತೆಯಾದ ಅಧಿಕಾರಿಯನ್ನು ಕ್ಷು ಜುನ್ ಫೇಂಗ್ (52) ಎಂದು ಗುರುತಿಸಲಾಗಿದೆ.
ಚೀನಾದ ಝುನ್ ಪೇ ಬಂದರಿನಿಂದ ಸಿಂಗಾಪುರ ಮಾರ್ಗವಾಗಿ ಶ್ರೀಲಂಕಾಕ್ಕೆ ಬಂದಿದ್ದ ಹಡಗು ಅಲ್ಲಿಂದ ಗುಜರಾತಿನ ಮುಂಡ್ರಾ ಬಂದರಿನತ್ತ ತೆರಳುತ್ತಿತ್ತು. ಮೇ 10ರಂದು ರಾತ್ರಿ 1.10ರ ಸುಮಾರಿಗೆ ಅರಬ್ಬೀ ಸಮುದ್ರದಲ್ಲಿ ಹಡಗು ತೆರಳುತ್ತಿದ್ದ ಅಧಿಕಾರಿ ಕಾಣೆಯಾಗಿರುವ ಬಗ್ಗೆ ಮೇ 28ರಂದು ಗುಜರಾತ್ ಪೊಲೀಸರಿಗೆ ದೂರು ನೀಡಲಾಗಿದೆ. ಹಡಗು ಗುಜರಾತ್ ತಲುಪಿದ 15 ದಿನದ ಬಳಿಕ ಇತರೇ ಸಿಬಂದಿ ಅಲ್ಲಿ ನಾಪತ್ತೆ ದೂರು ನೀಡಿದ್ದರು.
ಗುಜರಾತ್ ಪೊಲೀಸರು ಮಂಗಳೂರು ಕೋಸ್ಟ್ ಗಾರ್ಡ್ಗೆ ಮಾಹಿತಿ ನೀಡಿದ್ದು ಜೂ.1ರಂದು ಮಂಗಳೂರಿನ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಚೀನೀ ಪ್ರಜೆಯ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ಮಂಗಳೂರು ಕರಾವಳಿ ಪೊಲೀಸ್ ಠಾಣೆ 9480800574 ಅಥವಾ ಕರಾವಳಿ ಕಾವಲು ಪೊಲೀಸ್ ಕಂಟ್ರೋಲ್ ರೂಂ 0820-2538100 ಸಂಪರ್ಕಿಸಬಹುದು ಎಂದು ಕರಾವಳಿ ಕಾವಲು ಪೊಲೀಸರು ತಿಳಿಸಿದ್ದಾರೆ.
China based ship captain goes missing in Mangalore, missing case filed at Coastal Police station. The missing person has been identified as Shu Ju Ping (52).
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am