ಬ್ರೇಕಿಂಗ್ ನ್ಯೂಸ್
06-06-22 03:04 pm Udupi Correspondent ಕರಾವಳಿ
ಉಡುಪಿ, ಜೂನ್ 6 : ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆಯೊಂದಕ್ಕೆ ರಾತ್ರೋರಾತ್ರಿ ನಾಥೂರಾಮ್ ಗೋಡ್ಸೆ ಹೆಸರು ಇಟ್ಟಿರುವುದು ಕಂಡುಬಂದಿದ್ದು ಯೂತ್ ಕಾಂಗ್ರೆಸ್ ನಾಯಕರ ಆಕ್ಷೇಪಣೆ, ಆಕ್ರೋಶದ ಬಳಿಕ ಪಂಚಾಯತ್ ಅಧಿಕಾರಿಗಳು ತೆರವು ಮಾಡಿದ್ದಾರೆ.
ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆಯೊಂದಕ್ಕೆ ‘ಪಡುಗಿರಿ ನಾಥೂರಾಮ್ ಗೋಡ್ಸೆ ರಸ್ತೆ’ ಎಂದು ನಾಮಫಲಕ ಹಾಕಲಾಗಿತ್ತು. ಇದರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ಕಡೆಯಿಂದ ತೀವ್ರ ಆಕ್ರೋಶ ಕೇಳಿಬಂದಿತ್ತು.
ಈ ಬಗ್ಗೆ ಪಂಚಾಯತ್ ಅಧಿಕಾರಿಗಳಲ್ಲಿ ಕೇಳಿದಾಗ, ನಮಗೂ ಅದಕ್ಕೂ ಸಂಬಂಧ ಇಲ್ಲ. ಯಾರೋ ಕಿಡಿಗೇಡಿಗಳ ಕೆಲಸ ಎಂದು ಹೇಳಿದ್ದಾರೆ. ಪಂಚಾಯತ್ ನಲ್ಲಿ ಈ ಹೆಸರಿಡುವ ಬಗ್ಗೆ ನಿರ್ಣಯ ಕೈಗೊಂಡಿಲ್ಲ. ಪಂಚಾಯತ್ ಈ ನಾಮಫಲಕ ಹಾಕಿಲ್ಲ ಎಂದಿದ್ದರು ಪಿಡಿಓ.
ಶಾಸಕ, ಸಚಿವ ಸುನೀಲ್ ಕುಮಾರ್ ಗೂ ಈ ಬಗ್ಗೆ ತಿಳಿದಿರಲಿಲ್ಲ. ಯೂತ್ ಕಾಂಗ್ರೆಸ್ ಘಟಕದ ತಾಲೂಕು ಅಧ್ಯಕ್ಷ ಯೋಗೀಶ್ ಇನ್ನಾ ಮತ್ತಿತರ ಕಾರ್ಯಕರ್ತರು ಸ್ಥಳಕ್ಕೆ ಭೇಟಿ ನೀಡಿ, ಪಂಚಾಯತ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫಲಕ ನೋಡಿದರೆ ಪಂಚಾಯತ್ ಅಥವಾ ರಸ್ತೆ ಪ್ರಾಧಿಕಾರದಿಂದ ಅಧಿಕೃತವಾಗಿ ಹಾಕಿದ ರೀತಿ ಇತ್ತು. ಕಾಂಕ್ರೀಟ್ ಸ್ಲಾಬ್ ಮಾಡಿ, ಅದರಲ್ಲಿ ಫಲಕ ರಚಿಸಲಾಗಿತ್ತು. ರಸ್ತೆ ಬದಿಯಲ್ಲಿ ಹಾಕಿದ್ದ ಫಲಕದಲ್ಲಿ ಮೇಲೆ ಬೋಳ ಗ್ರಾಮ ಪಂಚಾಯತ್ ಅಂತಲೇ ಹಾಕಲಾಗಿತ್ತು. ಹೀಗಾಗಿ ಏನೋ ಹೆಸರಿಟ್ಟಿರಬೇಕು ಎಂದು ಜನಸಾಮಾನ್ಯರು ತಿಳಿದುಕೊಳ್ಳುವಂತಾಗಿತ್ತು. ಫೋಟೊ ವೈರಲ್ ಆಗಿ ಆಕ್ರೋಶ ಕೇಳಿಬರುತ್ತಿದ್ದಂತೆ ವಾಸ್ತವ ಬೆಳಕಿಗೆ ಬಂದಿದ್ದು ಪಂಚಾಯತ್ ವಿರುದ್ಧವೇ ಆಕ್ರೋಶ ವ್ಯಕ್ತವಾಗಿದೆ. ಕೊನೆಗೆ, ಅಲ್ಲಿನ ಅಧಿಕಾರಿಗಳೇ ಫಲಕವನ್ನು ತೆಗೆದು ಹಾಕಿದ್ದು ಪೊಲೀಸ್ ತನಿಖೆಗೆ ದೂರು ನೀಡಿದ್ದಾರೆ.
Udupi Miscreants name road after Nathuram Godse, board removed after pic goes viral in Karkala. Unidentified miscreants put up a board on a road that falls under the limits of Bola gram panchayat of the taluk naming it as Nathuram Godse road. Youth Congress leaders who saw the board expressed their rage and asked the concerned authorities to remove the same. After much uproar on social media and visit of local panchayat officials to the spot, the board was removed under police protection.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm