ಬ್ರೇಕಿಂಗ್ ನ್ಯೂಸ್
06-06-22 03:04 pm Udupi Correspondent ಕರಾವಳಿ
ಉಡುಪಿ, ಜೂನ್ 6 : ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆಯೊಂದಕ್ಕೆ ರಾತ್ರೋರಾತ್ರಿ ನಾಥೂರಾಮ್ ಗೋಡ್ಸೆ ಹೆಸರು ಇಟ್ಟಿರುವುದು ಕಂಡುಬಂದಿದ್ದು ಯೂತ್ ಕಾಂಗ್ರೆಸ್ ನಾಯಕರ ಆಕ್ಷೇಪಣೆ, ಆಕ್ರೋಶದ ಬಳಿಕ ಪಂಚಾಯತ್ ಅಧಿಕಾರಿಗಳು ತೆರವು ಮಾಡಿದ್ದಾರೆ.
ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆಯೊಂದಕ್ಕೆ ‘ಪಡುಗಿರಿ ನಾಥೂರಾಮ್ ಗೋಡ್ಸೆ ರಸ್ತೆ’ ಎಂದು ನಾಮಫಲಕ ಹಾಕಲಾಗಿತ್ತು. ಇದರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ಕಡೆಯಿಂದ ತೀವ್ರ ಆಕ್ರೋಶ ಕೇಳಿಬಂದಿತ್ತು.
ಈ ಬಗ್ಗೆ ಪಂಚಾಯತ್ ಅಧಿಕಾರಿಗಳಲ್ಲಿ ಕೇಳಿದಾಗ, ನಮಗೂ ಅದಕ್ಕೂ ಸಂಬಂಧ ಇಲ್ಲ. ಯಾರೋ ಕಿಡಿಗೇಡಿಗಳ ಕೆಲಸ ಎಂದು ಹೇಳಿದ್ದಾರೆ. ಪಂಚಾಯತ್ ನಲ್ಲಿ ಈ ಹೆಸರಿಡುವ ಬಗ್ಗೆ ನಿರ್ಣಯ ಕೈಗೊಂಡಿಲ್ಲ. ಪಂಚಾಯತ್ ಈ ನಾಮಫಲಕ ಹಾಕಿಲ್ಲ ಎಂದಿದ್ದರು ಪಿಡಿಓ.
ಶಾಸಕ, ಸಚಿವ ಸುನೀಲ್ ಕುಮಾರ್ ಗೂ ಈ ಬಗ್ಗೆ ತಿಳಿದಿರಲಿಲ್ಲ. ಯೂತ್ ಕಾಂಗ್ರೆಸ್ ಘಟಕದ ತಾಲೂಕು ಅಧ್ಯಕ್ಷ ಯೋಗೀಶ್ ಇನ್ನಾ ಮತ್ತಿತರ ಕಾರ್ಯಕರ್ತರು ಸ್ಥಳಕ್ಕೆ ಭೇಟಿ ನೀಡಿ, ಪಂಚಾಯತ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫಲಕ ನೋಡಿದರೆ ಪಂಚಾಯತ್ ಅಥವಾ ರಸ್ತೆ ಪ್ರಾಧಿಕಾರದಿಂದ ಅಧಿಕೃತವಾಗಿ ಹಾಕಿದ ರೀತಿ ಇತ್ತು. ಕಾಂಕ್ರೀಟ್ ಸ್ಲಾಬ್ ಮಾಡಿ, ಅದರಲ್ಲಿ ಫಲಕ ರಚಿಸಲಾಗಿತ್ತು. ರಸ್ತೆ ಬದಿಯಲ್ಲಿ ಹಾಕಿದ್ದ ಫಲಕದಲ್ಲಿ ಮೇಲೆ ಬೋಳ ಗ್ರಾಮ ಪಂಚಾಯತ್ ಅಂತಲೇ ಹಾಕಲಾಗಿತ್ತು. ಹೀಗಾಗಿ ಏನೋ ಹೆಸರಿಟ್ಟಿರಬೇಕು ಎಂದು ಜನಸಾಮಾನ್ಯರು ತಿಳಿದುಕೊಳ್ಳುವಂತಾಗಿತ್ತು. ಫೋಟೊ ವೈರಲ್ ಆಗಿ ಆಕ್ರೋಶ ಕೇಳಿಬರುತ್ತಿದ್ದಂತೆ ವಾಸ್ತವ ಬೆಳಕಿಗೆ ಬಂದಿದ್ದು ಪಂಚಾಯತ್ ವಿರುದ್ಧವೇ ಆಕ್ರೋಶ ವ್ಯಕ್ತವಾಗಿದೆ. ಕೊನೆಗೆ, ಅಲ್ಲಿನ ಅಧಿಕಾರಿಗಳೇ ಫಲಕವನ್ನು ತೆಗೆದು ಹಾಕಿದ್ದು ಪೊಲೀಸ್ ತನಿಖೆಗೆ ದೂರು ನೀಡಿದ್ದಾರೆ.
Udupi Miscreants name road after Nathuram Godse, board removed after pic goes viral in Karkala. Unidentified miscreants put up a board on a road that falls under the limits of Bola gram panchayat of the taluk naming it as Nathuram Godse road. Youth Congress leaders who saw the board expressed their rage and asked the concerned authorities to remove the same. After much uproar on social media and visit of local panchayat officials to the spot, the board was removed under police protection.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm