ಬ್ರೇಕಿಂಗ್ ನ್ಯೂಸ್
07-06-22 06:07 pm Mangalore Correspondent ಕರಾವಳಿ
ಪುತ್ತೂರು, ಜೂನ್ 7: ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿಚಾರ ಅಹಿತಕರ ಘಟನೆಗಳಿಗೆ ಕಾರಣವಾದ ಹಿನ್ನೆಲೆಯಲ್ಲಿ ಹಿಜಾಬ್ ಧರಿಸಲು ಪಟ್ಟು ಹಿಡಿದ 24 ಮಂದಿ ವಿದ್ಯಾರ್ಥಿನಿಯರನ್ನು ಒಂದು ವಾರ ಕಾಲ ಕಾಲೇಜಿಗೆ ಬರದಂತೆ ನಿರ್ಬಂಧ ವಿಧಿಸಲಾಗಿದೆ.
ಕಾಲೇಜಿನಲ್ಲಿ ಕಳೆದ ವಾರ ಎರಡು ಗುಂಪುಗಳ ನಡುವೆ ಘೋಷಣೆ ವಿನಿಮಯ ಆಗಿರುವುದು, ಸುದ್ದಿಗಾಗಿ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆದಿರುವುದು, ಈ ವಿಚಾರದಲ್ಲಿ ಉಪ್ಪಿನಂಗಡಿ ಠಾಣೆಯಲ್ಲಿ ಪರಸ್ಪರ ಕೇಸು ದಾಖಲಾಗಿರುವುದು ಇತ್ಯಾದಿ ಬೆಳವಣಿಗೆ ಹಿನ್ನೆಲೆಯಲ್ಲಿ ಮಂಗಳೂರು ವಿವಿಯ ಅಧಿಕಾರಿಯೊಬ್ಬರು ಕಾಲೇಜಿಗೆ ಬಂದಿದ್ದರು. ಅಲ್ಲದೆ, ವಿದ್ಯಾರ್ಥಿನಿಯರ ಜೊತೆಗೆ ಮಾತುಕತೆ ನಡೆಸಿ, ಹಿಜಾಬ್ ನಿಷೇಧದ ಬಗ್ಗೆ ಮನವರಿಕೆ ಮಾಡಲು ಯತ್ನಿಸಿದ್ದಾರೆ.
ಆದರೆ ವಿದ್ಯಾರ್ಥಿನಿಯರು ತಮ್ಮ ಪಟ್ಟು ಸಡಿಲಿಸಿಲ್ಲ. ಶೈಕ್ಷಣಿಕ ವರ್ಷದ ನಡುವೆ ಹಿಜಾಬ್ ಹೇರಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ತರಗತಿ ಹೊರಗಿನ ಡ್ರೆಸ್ಸಿಂಗ್ ರೂಮಿನಲ್ಲಿ ಉಳಿಯುವುದಕ್ಕೂ ಕಾಲೇಜಿನ ಆಡಳಿತ ನಿರ್ಬಂಧ ವಿಧಿಸಿತ್ತು. ಸೋಮವಾರ ದಿನವಿಡೀ ಪ್ರಹಸನದ ಬಳಿಕ ಸಂಜೆ ವೇಳೆಗೆ ಕಾಲೇಜಿನ ಉಪನ್ಯಾಸಕರ ಸಭೆ ಕರೆದ ಪ್ರಾಂಶುಪಾಲ ಶೇಖರ್ ಎಂ.ಬಿ., ಸರಕಾರದ ಸುತ್ತೋಲೆ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ನಿರ್ಣಯದ ಆಧಾರದಲ್ಲಿ ಕಾಲೇಜಿನ ಸಮವಸ್ತ್ರ ನಿಯಮವನ್ನು ಉಲ್ಲಂಘಿಸಿದ್ದಲ್ಲದೆ, ಶೈಕ್ಷಣಿಕ ವಾತಾವರಣ ಹಾಳು ಮಾಡುತ್ತಿರುವುದಕ್ಕಾಗಿ 24 ವಿದ್ಯಾರ್ಥಿನಿಯರಿಗೆ ಒಂದು ವಾರ ಕಾಲ ಕಾಲೇಜು ಪ್ರವೇಶ ನಿರ್ಬಂಧಿಸಿ ನಿರ್ಣಯ ಕೈಗೊಂಡಿದ್ದಾರೆ. ಇದೇ ವಿವಾದಕ್ಕೆ ಸಂಬಂಧಿಸಿ ಈ ಹಿಂದೆ ಏಳು ಮಂದಿ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತು ಮಾಡಲಾಗಿತ್ತು. ಇದೀಗ ಒಂದು ವಾರದ ನಿರ್ಬಂಧ ವಿಧಿಸಿ ಚಾಟಿ ಬೀಸಿದ್ದಾರೆ.
Twenty-four students studying in a college in Karnataka's Dakshina Kannada district were on Tuesday banned for a period of seven days from attending classes for wearing Hijab.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm