ಬ್ರೇಕಿಂಗ್ ನ್ಯೂಸ್
07-06-22 06:07 pm Mangalore Correspondent ಕರಾವಳಿ
ಪುತ್ತೂರು, ಜೂನ್ 7: ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿಚಾರ ಅಹಿತಕರ ಘಟನೆಗಳಿಗೆ ಕಾರಣವಾದ ಹಿನ್ನೆಲೆಯಲ್ಲಿ ಹಿಜಾಬ್ ಧರಿಸಲು ಪಟ್ಟು ಹಿಡಿದ 24 ಮಂದಿ ವಿದ್ಯಾರ್ಥಿನಿಯರನ್ನು ಒಂದು ವಾರ ಕಾಲ ಕಾಲೇಜಿಗೆ ಬರದಂತೆ ನಿರ್ಬಂಧ ವಿಧಿಸಲಾಗಿದೆ.
ಕಾಲೇಜಿನಲ್ಲಿ ಕಳೆದ ವಾರ ಎರಡು ಗುಂಪುಗಳ ನಡುವೆ ಘೋಷಣೆ ವಿನಿಮಯ ಆಗಿರುವುದು, ಸುದ್ದಿಗಾಗಿ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆದಿರುವುದು, ಈ ವಿಚಾರದಲ್ಲಿ ಉಪ್ಪಿನಂಗಡಿ ಠಾಣೆಯಲ್ಲಿ ಪರಸ್ಪರ ಕೇಸು ದಾಖಲಾಗಿರುವುದು ಇತ್ಯಾದಿ ಬೆಳವಣಿಗೆ ಹಿನ್ನೆಲೆಯಲ್ಲಿ ಮಂಗಳೂರು ವಿವಿಯ ಅಧಿಕಾರಿಯೊಬ್ಬರು ಕಾಲೇಜಿಗೆ ಬಂದಿದ್ದರು. ಅಲ್ಲದೆ, ವಿದ್ಯಾರ್ಥಿನಿಯರ ಜೊತೆಗೆ ಮಾತುಕತೆ ನಡೆಸಿ, ಹಿಜಾಬ್ ನಿಷೇಧದ ಬಗ್ಗೆ ಮನವರಿಕೆ ಮಾಡಲು ಯತ್ನಿಸಿದ್ದಾರೆ.
ಆದರೆ ವಿದ್ಯಾರ್ಥಿನಿಯರು ತಮ್ಮ ಪಟ್ಟು ಸಡಿಲಿಸಿಲ್ಲ. ಶೈಕ್ಷಣಿಕ ವರ್ಷದ ನಡುವೆ ಹಿಜಾಬ್ ಹೇರಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ತರಗತಿ ಹೊರಗಿನ ಡ್ರೆಸ್ಸಿಂಗ್ ರೂಮಿನಲ್ಲಿ ಉಳಿಯುವುದಕ್ಕೂ ಕಾಲೇಜಿನ ಆಡಳಿತ ನಿರ್ಬಂಧ ವಿಧಿಸಿತ್ತು. ಸೋಮವಾರ ದಿನವಿಡೀ ಪ್ರಹಸನದ ಬಳಿಕ ಸಂಜೆ ವೇಳೆಗೆ ಕಾಲೇಜಿನ ಉಪನ್ಯಾಸಕರ ಸಭೆ ಕರೆದ ಪ್ರಾಂಶುಪಾಲ ಶೇಖರ್ ಎಂ.ಬಿ., ಸರಕಾರದ ಸುತ್ತೋಲೆ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ನಿರ್ಣಯದ ಆಧಾರದಲ್ಲಿ ಕಾಲೇಜಿನ ಸಮವಸ್ತ್ರ ನಿಯಮವನ್ನು ಉಲ್ಲಂಘಿಸಿದ್ದಲ್ಲದೆ, ಶೈಕ್ಷಣಿಕ ವಾತಾವರಣ ಹಾಳು ಮಾಡುತ್ತಿರುವುದಕ್ಕಾಗಿ 24 ವಿದ್ಯಾರ್ಥಿನಿಯರಿಗೆ ಒಂದು ವಾರ ಕಾಲ ಕಾಲೇಜು ಪ್ರವೇಶ ನಿರ್ಬಂಧಿಸಿ ನಿರ್ಣಯ ಕೈಗೊಂಡಿದ್ದಾರೆ. ಇದೇ ವಿವಾದಕ್ಕೆ ಸಂಬಂಧಿಸಿ ಈ ಹಿಂದೆ ಏಳು ಮಂದಿ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತು ಮಾಡಲಾಗಿತ್ತು. ಇದೀಗ ಒಂದು ವಾರದ ನಿರ್ಬಂಧ ವಿಧಿಸಿ ಚಾಟಿ ಬೀಸಿದ್ದಾರೆ.
Twenty-four students studying in a college in Karnataka's Dakshina Kannada district were on Tuesday banned for a period of seven days from attending classes for wearing Hijab.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm